Homeಕರ್ನಾಟಕಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

ಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

- Advertisement -
- Advertisement -

‘ವಿನಾಶಕಾರಿ ಕೃತ್ಯಗಳನ್ನು ರೈತಚಳವಳಿ ಎಂದೂ ಪಾಲಿಸಿಲ್ಲ’ ಬಾಗಲಕೋಟೆಯ ಸೈದಾಪುರದಲ್ಲಿ ಹಲವಾರು ಕಬ್ಬು ತುಂಬಿದ ಟ್ರಾಕ್ಟರುಗಳು ಸುಟ್ಟು ಭಸ್ಮವಾಗಿರುವುದು ವಿಷಾದನೀಯ. ಇದಕ್ಕೆ ಯಾರೇ ಪ್ರೇರಣೆ ನೀಡಿದ್ದರೂ ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ, ನೂರ್ ಶ್ರೀಧರ್, ಡಿ.ಹೆಚ್, ಪೂಜಾರ್ ಸೇರಿದಂತೆ ಹಲವು ರೈತ ನಾಯಕರು, ರೈತಪರ ಹೋರಾಟಗಾರರು ಹೇಳಿದ್ದಾರೆ. 

ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹೊತ್ತಿರುವ ದುರ್ಘಟನೆ ಕುರಿತು ರೈತ ಹಾಗೂ ರೈತಪರ ಸಂಘಟನೆಗಳು ತುರ್ತು ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ರೈತ ಚಳವಳಿ ಇತಿಹಾಸದುದ್ದಕ್ಕೂ ಶಾಂತಿಯುತವಾಗಿ ನಡೆದು ಬಂದಿದೆ. ರೈತರದು ಸದಾ ಜೀವಪರ ನಿಲುವು, ವಿನಾಶಕಾರಿ ಕೃತ್ಯಗಳನ್ನು ರೈತ ಚಳವಳಿ ಎಂದೂ ಪಾಲಿಸಿಲ್ಲ, ಸಮ್ಮತಿಸಿಲ್ಲ. 

ಆದರೆ ಈ ಘಟನೆಗೆ ಇತ್ತೀಚಿಗೆ ನಡೆದ ರೈತ ಚಳವಳಿ ಸರಿಯಾದ ರೀತಿಯಲ್ಲಿ ಸಮಾರೋಪಗೊಳ್ಳದೇ ಹೋದದ್ದು ಮುಖ್ಯ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ, ರಾಜ್ಯಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ಜಿಲ್ಲಾಡಳಿತ ಪ್ರಮುಖ ಹೊಣೆಯನ್ನು ಹೊತ್ತುಕೊಳ್ಳಲೇಬೇಕಿದೆ.

ಅವೈಜ್ಞಾನಿಕ ಎಫ್‌ ಆರ್‌ ಪಿ ಯನ್ನು ನಿಗದಿಮಾಡುವ ಮೂಲಕ ಕೇಂದ್ರ ಸರ್ಕಾರ ಸಮಸ್ಯೆಯ ಮೂಲವಾಗಿ ಕೆಲಸ ಮಾಡಿದೆ.

ಸೂಕ್ತ ಬೆಲೆ ಸಿಗದೆ ರೈತರ ಆಕ್ರೋಶ ಸ್ಪೋಟ ಗೊಂಡಾಗ ರಾಜ್ಯಸರ್ಕಾರ ಕೂಡಲೇ ಅದನ್ನು ಬಗೆಹರಿಸುವ ಬಿಗಿ ನಿಲುವು ತೆಗೆದುಕೊಳ್ಳಲು ಮುಂದಾಗಲಿಲ್ಲ. ಕೊನೆಗೆ ಪರಿಸ್ಥಿತಿ ಕೈಮೀರಿದಾಗ ಕಾರ್ಖಾನೆ ಮಾಲೀಕರ ಸಭೆ ಕರೆಯಿತು. ಆ ಸಭೆಯಲ್ಲಿ ಕೋಟ್ಯಾಂತರ ಲಾಭ ಮಾಡುತ್ತಿರುವ ಕಾರ್ಖಾನೆ ಮಾಲೀಕರು ರೈತರಿಗೆ ಪ್ರತಿಟನ್ನಿಗೆ ನೂರುರೂ ಹೆಚ್ಚಿಸಲು ತಯಾರಿರಲಿಲ್ಲ. 

ಇವರ ಲೋಭಕೋರತನ, ಮೊಂಡು ನಿಲುವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತು. ಕೊನೆಗೆ ರಾಜ್ಯ ಸರ್ಕಾರ ತಾನೂ 50 ರೂ ಸೇರಿಸಿ 3300 ರೂ ಕೊಡುವ ತೀರ್ಮಾನ ತೆಗೆದುಕೊಂಡಿತಾದರೂ ರಿಕವರಿಯನ್ನು10.25 ಬದಲು11.25 ಕ್ಕೆನಿಗದಿಮಾಡಿದ್ದು,  ಕೊಟ್ಟಂತೆ ಕಂಡರೂ ಏನೂ ಕೊಡಲಿಲ್ಲ, ಎಂಬ ಭಾವ ರೈತರಲ್ಲಿ ಉಳಿಯಲು ಕಾರಣವಾಯಿತು. 

ಈ ಕಾರಣಕ್ಕಾಗಿಯೇ ಬಾಗಲಕೋಟೆಯಲ್ಲಿ ಹೋರಾಟ ನಿಲ್ಲದೆ ಮುಂದುವರಿಯಿತು. ರೈತರನ್ನುಕರೆದು, ವಿಶ್ವಾಸಕ್ಕೆ ತೆಗೆದುಕೊಂಡು, ತನ್ನಿಂದ ಆಗಿರುವ ಅಚಾತುರ್ಯವನ್ನು ಸರಿಪಡಿಸಿಕೊಂಡು ರಿಕವರಿಯನ್ನು 10.25 ಗೆ ತರುವ ಬದಲು, ಜಿಲ್ಲಾಸಚಿವರು “ಹೋರಾಟ ಮುಗಿದಿದೆ, ಕಬ್ಬುಸಾಗಿಸಿ” ಎಂಬ ಸಂದೇಶವನ್ನು ಕಾರ್ಖಾನೆ ಮಾಲೀಕರಿಗೆ ಕೊಟ್ಟರು.

ರೈತರ ಪ್ರತಿರೋಧವನ್ನು ಲೆಕ್ಕಿಸದೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರು ಸೇರಿ ಪೋಲೀಸ್‌ ಬಲದ ಬೆಂಬಲದಲ್ಲಿ ಕಬ್ಬು ಸಾಗಿಸಲು ಹೊರಟಿದ್ದು, ರೈತರ ಆಕ್ರೋಶಕ್ಕೂ, ಈ ದುರ್ಘಟನೆಗೂ ಕಾರಣವಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಈ ದುರ್ಘಟನೆಯ ಹೊಣೆಯನ್ನು ಹೊತ್ತುಕೊಳ್ಳಬೇಕಿದೆ. ರೈತರನ್ನು ಕಾಡುವ ಬದಲು ನಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ನಷ್ಟ ಪರಿಹಾರ ಕಟ್ಟಿಕೊಟ್ಟು, ರೈತರ ಸಭೆಯನ್ನು ಕರೆದು ಮೂಲ ಸಮಸ್ಯೆಯನ್ನು ನ್ಯಾಯಸಮ್ಮತವಾಗಿ ಬಗೆಹರಿಸುವ ಅಗತ್ಯವಿದೆ. 

ಈ ಬಾರಿಯ ಚಳವಳಿ ಐಕ್ಯನಾಯಕತ್ವದಲ್ಲಿ ನಡೆಯದೆ ಹಲವಾರು ಕೇಂದ್ರಗಳಾಗಿ ನಡೆದದ್ದೂ ಸಹ ಈ ಗೊಂದಲಕ್ಕೆಇಂಬುಕೊಟ್ಟಿದೆ. ರೈತ ಚಳವಳಿಯ ಭಾಗವಾಗಿ ನಾವೂ ಆತ್ಮಾವಲೋಕನ ಮಾಡಿಕೊಳ್ಳುವ ವಿಚಾರಗಳು ಇವೆ ಎಂದಿದ್ದಾರೆ. 

ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳು:

  1. ಕಬ್ಬಿನ ಪ್ರತಿ ಟನ್ನಿಗೆ, 10.25 ರಿಕವರಿ ಮಾನದಂಡದ ಮೇಲೆ, ಕನಿಷ್ಟ 3300 ಬೆಲೆ ನಿಗದಿ ಮಾಡಬೇಕು.
  2. ನಷ್ಟಕ್ಕೊಳಗಾಗಿರುವ ರೈತರಿಗೆ ಕಾರ್ಖಾನೆಗಳು ಹಾಗೂ ಸರ್ಕಾರ ಸೇರಿ ಸುಟ್ಟು ಹೋಗಿರುವ ಟ್ರಾಕ್ಟರ್‌ ಗಳಿಗೂ ಸೇರಿದಂತೆ
    ನಷ್ಟ ಪರಿಹಾರ ಕಟ್ಟಿಕೊಡಬೇಕು.

3.ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆ ಹರಿಸಲು ಕೂಡಲೇ ಮುಖ್ಯಮಂತ್ರಿಗಳು ಸಭೆ ಕರೆಯಬೇಕು.

  1. ರಿಕವರಿ ಟೆಸ್ಟಿನಲ್ಲಿ, ತೂಕದಲ್ಲಿ, ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
  2. ಎಫ್‌ ಆರ್‌ ಪಿ ದರದಲ್ಲಿ, ಎಥೆನಾಲ್‌ ಪ್ರಮಾಣದಲ್ಲಿ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿ ಪಡಿಸಲು ಹಾಗೂ ರಿಕವರಿಯನ್ನು ಈಗಿರುವ 10.25 ಬದಲು ಮೊದಲಿನಂತೆ 9.25 ಗೆ ಇಳಿಸಬೇಕುಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯಸರ್ಕಾರ ಮುಂದೊಡಗು ತೆಗೆದು ಕೊಳ್ಳಬೇಕು.

ಹೆಚ್.‌ ಆರ್.‌ ಬಸವರಾಜಪ್ಪ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘಹಾಗೂಹಸಿರುಸೇನೆ]
ಬಡಗಲಪುರನಾಗೇಂದ್ರ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘ]
ಚುಕ್ಕಿನಂಜುಂಡಸ್ವಾಮಿ [ರಾಜ್ಯಅಧ್ಯಕ್ಷೀಯಮಂಡಳಿಸದಸ್ಯರು, ಕರ್ನಾಟಕರಾಜ್ಯರೈತಸಂಘ (ಸಾಮೂಹಿಕನಾಯಕತ್ವ)]
ಸಿದ್ಗೌಡಮೋದಗಿ [ಅಧ್ಯಕ್ಷರು, ಭಾರತೀಯಕೃಷಿಕಸಮಾಜ [ಸಂಯುಕ್ತ]]
ನೂರ್‌ ಶ್ರೀಧರ್‌, [ಅಧ್ಯಕ್ಷರು, ಕರ್ನಾಟಕಜನಶಕ್ತಿ]
ಡಿ.ಹೆಚ್.‌ ಪೂಜಾರ್‌ [ಅಧ್ಯಕ್ಷರು, AIUKS]
ಭಗವಾನ್‌ ರೆಡ್ಡಿ, [ರಾಜ್ಯಕಾರ್ಯದರ್ಶಿ, AIKKMS]
ಸಿರಿಮನೆನಾಗರಾಜ್‌ [ಉಪಾಧ್ಯಕ್ಷರು, ಭೂಮಿಮತ್ತುವಸತಿಹಕ್ಕುವಂಚಿತರಹೋರಾಟಸಮಿತಿ]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...