Homeಕರ್ನಾಟಕಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

ಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

- Advertisement -
- Advertisement -

‘ವಿನಾಶಕಾರಿ ಕೃತ್ಯಗಳನ್ನು ರೈತಚಳವಳಿ ಎಂದೂ ಪಾಲಿಸಿಲ್ಲ’ ಬಾಗಲಕೋಟೆಯ ಸೈದಾಪುರದಲ್ಲಿ ಹಲವಾರು ಕಬ್ಬು ತುಂಬಿದ ಟ್ರಾಕ್ಟರುಗಳು ಸುಟ್ಟು ಭಸ್ಮವಾಗಿರುವುದು ವಿಷಾದನೀಯ. ಇದಕ್ಕೆ ಯಾರೇ ಪ್ರೇರಣೆ ನೀಡಿದ್ದರೂ ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ, ನೂರ್ ಶ್ರೀಧರ್, ಡಿ.ಹೆಚ್, ಪೂಜಾರ್ ಸೇರಿದಂತೆ ಹಲವು ರೈತ ನಾಯಕರು, ರೈತಪರ ಹೋರಾಟಗಾರರು ಹೇಳಿದ್ದಾರೆ. 

ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹೊತ್ತಿರುವ ದುರ್ಘಟನೆ ಕುರಿತು ರೈತ ಹಾಗೂ ರೈತಪರ ಸಂಘಟನೆಗಳು ತುರ್ತು ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ರೈತ ಚಳವಳಿ ಇತಿಹಾಸದುದ್ದಕ್ಕೂ ಶಾಂತಿಯುತವಾಗಿ ನಡೆದು ಬಂದಿದೆ. ರೈತರದು ಸದಾ ಜೀವಪರ ನಿಲುವು, ವಿನಾಶಕಾರಿ ಕೃತ್ಯಗಳನ್ನು ರೈತ ಚಳವಳಿ ಎಂದೂ ಪಾಲಿಸಿಲ್ಲ, ಸಮ್ಮತಿಸಿಲ್ಲ. 

ಆದರೆ ಈ ಘಟನೆಗೆ ಇತ್ತೀಚಿಗೆ ನಡೆದ ರೈತ ಚಳವಳಿ ಸರಿಯಾದ ರೀತಿಯಲ್ಲಿ ಸಮಾರೋಪಗೊಳ್ಳದೇ ಹೋದದ್ದು ಮುಖ್ಯ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ, ರಾಜ್ಯಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ಜಿಲ್ಲಾಡಳಿತ ಪ್ರಮುಖ ಹೊಣೆಯನ್ನು ಹೊತ್ತುಕೊಳ್ಳಲೇಬೇಕಿದೆ.

ಅವೈಜ್ಞಾನಿಕ ಎಫ್‌ ಆರ್‌ ಪಿ ಯನ್ನು ನಿಗದಿಮಾಡುವ ಮೂಲಕ ಕೇಂದ್ರ ಸರ್ಕಾರ ಸಮಸ್ಯೆಯ ಮೂಲವಾಗಿ ಕೆಲಸ ಮಾಡಿದೆ.

ಸೂಕ್ತ ಬೆಲೆ ಸಿಗದೆ ರೈತರ ಆಕ್ರೋಶ ಸ್ಪೋಟ ಗೊಂಡಾಗ ರಾಜ್ಯಸರ್ಕಾರ ಕೂಡಲೇ ಅದನ್ನು ಬಗೆಹರಿಸುವ ಬಿಗಿ ನಿಲುವು ತೆಗೆದುಕೊಳ್ಳಲು ಮುಂದಾಗಲಿಲ್ಲ. ಕೊನೆಗೆ ಪರಿಸ್ಥಿತಿ ಕೈಮೀರಿದಾಗ ಕಾರ್ಖಾನೆ ಮಾಲೀಕರ ಸಭೆ ಕರೆಯಿತು. ಆ ಸಭೆಯಲ್ಲಿ ಕೋಟ್ಯಾಂತರ ಲಾಭ ಮಾಡುತ್ತಿರುವ ಕಾರ್ಖಾನೆ ಮಾಲೀಕರು ರೈತರಿಗೆ ಪ್ರತಿಟನ್ನಿಗೆ ನೂರುರೂ ಹೆಚ್ಚಿಸಲು ತಯಾರಿರಲಿಲ್ಲ. 

ಇವರ ಲೋಭಕೋರತನ, ಮೊಂಡು ನಿಲುವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತು. ಕೊನೆಗೆ ರಾಜ್ಯ ಸರ್ಕಾರ ತಾನೂ 50 ರೂ ಸೇರಿಸಿ 3300 ರೂ ಕೊಡುವ ತೀರ್ಮಾನ ತೆಗೆದುಕೊಂಡಿತಾದರೂ ರಿಕವರಿಯನ್ನು10.25 ಬದಲು11.25 ಕ್ಕೆನಿಗದಿಮಾಡಿದ್ದು,  ಕೊಟ್ಟಂತೆ ಕಂಡರೂ ಏನೂ ಕೊಡಲಿಲ್ಲ, ಎಂಬ ಭಾವ ರೈತರಲ್ಲಿ ಉಳಿಯಲು ಕಾರಣವಾಯಿತು. 

ಈ ಕಾರಣಕ್ಕಾಗಿಯೇ ಬಾಗಲಕೋಟೆಯಲ್ಲಿ ಹೋರಾಟ ನಿಲ್ಲದೆ ಮುಂದುವರಿಯಿತು. ರೈತರನ್ನುಕರೆದು, ವಿಶ್ವಾಸಕ್ಕೆ ತೆಗೆದುಕೊಂಡು, ತನ್ನಿಂದ ಆಗಿರುವ ಅಚಾತುರ್ಯವನ್ನು ಸರಿಪಡಿಸಿಕೊಂಡು ರಿಕವರಿಯನ್ನು 10.25 ಗೆ ತರುವ ಬದಲು, ಜಿಲ್ಲಾಸಚಿವರು “ಹೋರಾಟ ಮುಗಿದಿದೆ, ಕಬ್ಬುಸಾಗಿಸಿ” ಎಂಬ ಸಂದೇಶವನ್ನು ಕಾರ್ಖಾನೆ ಮಾಲೀಕರಿಗೆ ಕೊಟ್ಟರು.

ರೈತರ ಪ್ರತಿರೋಧವನ್ನು ಲೆಕ್ಕಿಸದೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರು ಸೇರಿ ಪೋಲೀಸ್‌ ಬಲದ ಬೆಂಬಲದಲ್ಲಿ ಕಬ್ಬು ಸಾಗಿಸಲು ಹೊರಟಿದ್ದು, ರೈತರ ಆಕ್ರೋಶಕ್ಕೂ, ಈ ದುರ್ಘಟನೆಗೂ ಕಾರಣವಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಈ ದುರ್ಘಟನೆಯ ಹೊಣೆಯನ್ನು ಹೊತ್ತುಕೊಳ್ಳಬೇಕಿದೆ. ರೈತರನ್ನು ಕಾಡುವ ಬದಲು ನಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ನಷ್ಟ ಪರಿಹಾರ ಕಟ್ಟಿಕೊಟ್ಟು, ರೈತರ ಸಭೆಯನ್ನು ಕರೆದು ಮೂಲ ಸಮಸ್ಯೆಯನ್ನು ನ್ಯಾಯಸಮ್ಮತವಾಗಿ ಬಗೆಹರಿಸುವ ಅಗತ್ಯವಿದೆ. 

ಈ ಬಾರಿಯ ಚಳವಳಿ ಐಕ್ಯನಾಯಕತ್ವದಲ್ಲಿ ನಡೆಯದೆ ಹಲವಾರು ಕೇಂದ್ರಗಳಾಗಿ ನಡೆದದ್ದೂ ಸಹ ಈ ಗೊಂದಲಕ್ಕೆಇಂಬುಕೊಟ್ಟಿದೆ. ರೈತ ಚಳವಳಿಯ ಭಾಗವಾಗಿ ನಾವೂ ಆತ್ಮಾವಲೋಕನ ಮಾಡಿಕೊಳ್ಳುವ ವಿಚಾರಗಳು ಇವೆ ಎಂದಿದ್ದಾರೆ. 

ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳು:

  1. ಕಬ್ಬಿನ ಪ್ರತಿ ಟನ್ನಿಗೆ, 10.25 ರಿಕವರಿ ಮಾನದಂಡದ ಮೇಲೆ, ಕನಿಷ್ಟ 3300 ಬೆಲೆ ನಿಗದಿ ಮಾಡಬೇಕು.
  2. ನಷ್ಟಕ್ಕೊಳಗಾಗಿರುವ ರೈತರಿಗೆ ಕಾರ್ಖಾನೆಗಳು ಹಾಗೂ ಸರ್ಕಾರ ಸೇರಿ ಸುಟ್ಟು ಹೋಗಿರುವ ಟ್ರಾಕ್ಟರ್‌ ಗಳಿಗೂ ಸೇರಿದಂತೆ
    ನಷ್ಟ ಪರಿಹಾರ ಕಟ್ಟಿಕೊಡಬೇಕು.

3.ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆ ಹರಿಸಲು ಕೂಡಲೇ ಮುಖ್ಯಮಂತ್ರಿಗಳು ಸಭೆ ಕರೆಯಬೇಕು.

  1. ರಿಕವರಿ ಟೆಸ್ಟಿನಲ್ಲಿ, ತೂಕದಲ್ಲಿ, ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
  2. ಎಫ್‌ ಆರ್‌ ಪಿ ದರದಲ್ಲಿ, ಎಥೆನಾಲ್‌ ಪ್ರಮಾಣದಲ್ಲಿ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿ ಪಡಿಸಲು ಹಾಗೂ ರಿಕವರಿಯನ್ನು ಈಗಿರುವ 10.25 ಬದಲು ಮೊದಲಿನಂತೆ 9.25 ಗೆ ಇಳಿಸಬೇಕುಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯಸರ್ಕಾರ ಮುಂದೊಡಗು ತೆಗೆದು ಕೊಳ್ಳಬೇಕು.

ಹೆಚ್.‌ ಆರ್.‌ ಬಸವರಾಜಪ್ಪ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘಹಾಗೂಹಸಿರುಸೇನೆ]
ಬಡಗಲಪುರನಾಗೇಂದ್ರ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘ]
ಚುಕ್ಕಿನಂಜುಂಡಸ್ವಾಮಿ [ರಾಜ್ಯಅಧ್ಯಕ್ಷೀಯಮಂಡಳಿಸದಸ್ಯರು, ಕರ್ನಾಟಕರಾಜ್ಯರೈತಸಂಘ (ಸಾಮೂಹಿಕನಾಯಕತ್ವ)]
ಸಿದ್ಗೌಡಮೋದಗಿ [ಅಧ್ಯಕ್ಷರು, ಭಾರತೀಯಕೃಷಿಕಸಮಾಜ [ಸಂಯುಕ್ತ]]
ನೂರ್‌ ಶ್ರೀಧರ್‌, [ಅಧ್ಯಕ್ಷರು, ಕರ್ನಾಟಕಜನಶಕ್ತಿ]
ಡಿ.ಹೆಚ್.‌ ಪೂಜಾರ್‌ [ಅಧ್ಯಕ್ಷರು, AIUKS]
ಭಗವಾನ್‌ ರೆಡ್ಡಿ, [ರಾಜ್ಯಕಾರ್ಯದರ್ಶಿ, AIKKMS]
ಸಿರಿಮನೆನಾಗರಾಜ್‌ [ಉಪಾಧ್ಯಕ್ಷರು, ಭೂಮಿಮತ್ತುವಸತಿಹಕ್ಕುವಂಚಿತರಹೋರಾಟಸಮಿತಿ]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...