Homeಕರ್ನಾಟಕಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

ಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

- Advertisement -
- Advertisement -

‘ವಿನಾಶಕಾರಿ ಕೃತ್ಯಗಳನ್ನು ರೈತಚಳವಳಿ ಎಂದೂ ಪಾಲಿಸಿಲ್ಲ’ ಬಾಗಲಕೋಟೆಯ ಸೈದಾಪುರದಲ್ಲಿ ಹಲವಾರು ಕಬ್ಬು ತುಂಬಿದ ಟ್ರಾಕ್ಟರುಗಳು ಸುಟ್ಟು ಭಸ್ಮವಾಗಿರುವುದು ವಿಷಾದನೀಯ. ಇದಕ್ಕೆ ಯಾರೇ ಪ್ರೇರಣೆ ನೀಡಿದ್ದರೂ ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ, ನೂರ್ ಶ್ರೀಧರ್, ಡಿ.ಹೆಚ್, ಪೂಜಾರ್ ಸೇರಿದಂತೆ ಹಲವು ರೈತ ನಾಯಕರು, ರೈತಪರ ಹೋರಾಟಗಾರರು ಹೇಳಿದ್ದಾರೆ. 

ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹೊತ್ತಿರುವ ದುರ್ಘಟನೆ ಕುರಿತು ರೈತ ಹಾಗೂ ರೈತಪರ ಸಂಘಟನೆಗಳು ತುರ್ತು ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ರೈತ ಚಳವಳಿ ಇತಿಹಾಸದುದ್ದಕ್ಕೂ ಶಾಂತಿಯುತವಾಗಿ ನಡೆದು ಬಂದಿದೆ. ರೈತರದು ಸದಾ ಜೀವಪರ ನಿಲುವು, ವಿನಾಶಕಾರಿ ಕೃತ್ಯಗಳನ್ನು ರೈತ ಚಳವಳಿ ಎಂದೂ ಪಾಲಿಸಿಲ್ಲ, ಸಮ್ಮತಿಸಿಲ್ಲ. 

ಆದರೆ ಈ ಘಟನೆಗೆ ಇತ್ತೀಚಿಗೆ ನಡೆದ ರೈತ ಚಳವಳಿ ಸರಿಯಾದ ರೀತಿಯಲ್ಲಿ ಸಮಾರೋಪಗೊಳ್ಳದೇ ಹೋದದ್ದು ಮುಖ್ಯ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ, ರಾಜ್ಯಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ಜಿಲ್ಲಾಡಳಿತ ಪ್ರಮುಖ ಹೊಣೆಯನ್ನು ಹೊತ್ತುಕೊಳ್ಳಲೇಬೇಕಿದೆ.

ಅವೈಜ್ಞಾನಿಕ ಎಫ್‌ ಆರ್‌ ಪಿ ಯನ್ನು ನಿಗದಿಮಾಡುವ ಮೂಲಕ ಕೇಂದ್ರ ಸರ್ಕಾರ ಸಮಸ್ಯೆಯ ಮೂಲವಾಗಿ ಕೆಲಸ ಮಾಡಿದೆ.

ಸೂಕ್ತ ಬೆಲೆ ಸಿಗದೆ ರೈತರ ಆಕ್ರೋಶ ಸ್ಪೋಟ ಗೊಂಡಾಗ ರಾಜ್ಯಸರ್ಕಾರ ಕೂಡಲೇ ಅದನ್ನು ಬಗೆಹರಿಸುವ ಬಿಗಿ ನಿಲುವು ತೆಗೆದುಕೊಳ್ಳಲು ಮುಂದಾಗಲಿಲ್ಲ. ಕೊನೆಗೆ ಪರಿಸ್ಥಿತಿ ಕೈಮೀರಿದಾಗ ಕಾರ್ಖಾನೆ ಮಾಲೀಕರ ಸಭೆ ಕರೆಯಿತು. ಆ ಸಭೆಯಲ್ಲಿ ಕೋಟ್ಯಾಂತರ ಲಾಭ ಮಾಡುತ್ತಿರುವ ಕಾರ್ಖಾನೆ ಮಾಲೀಕರು ರೈತರಿಗೆ ಪ್ರತಿಟನ್ನಿಗೆ ನೂರುರೂ ಹೆಚ್ಚಿಸಲು ತಯಾರಿರಲಿಲ್ಲ. 

ಇವರ ಲೋಭಕೋರತನ, ಮೊಂಡು ನಿಲುವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತು. ಕೊನೆಗೆ ರಾಜ್ಯ ಸರ್ಕಾರ ತಾನೂ 50 ರೂ ಸೇರಿಸಿ 3300 ರೂ ಕೊಡುವ ತೀರ್ಮಾನ ತೆಗೆದುಕೊಂಡಿತಾದರೂ ರಿಕವರಿಯನ್ನು10.25 ಬದಲು11.25 ಕ್ಕೆನಿಗದಿಮಾಡಿದ್ದು,  ಕೊಟ್ಟಂತೆ ಕಂಡರೂ ಏನೂ ಕೊಡಲಿಲ್ಲ, ಎಂಬ ಭಾವ ರೈತರಲ್ಲಿ ಉಳಿಯಲು ಕಾರಣವಾಯಿತು. 

ಈ ಕಾರಣಕ್ಕಾಗಿಯೇ ಬಾಗಲಕೋಟೆಯಲ್ಲಿ ಹೋರಾಟ ನಿಲ್ಲದೆ ಮುಂದುವರಿಯಿತು. ರೈತರನ್ನುಕರೆದು, ವಿಶ್ವಾಸಕ್ಕೆ ತೆಗೆದುಕೊಂಡು, ತನ್ನಿಂದ ಆಗಿರುವ ಅಚಾತುರ್ಯವನ್ನು ಸರಿಪಡಿಸಿಕೊಂಡು ರಿಕವರಿಯನ್ನು 10.25 ಗೆ ತರುವ ಬದಲು, ಜಿಲ್ಲಾಸಚಿವರು “ಹೋರಾಟ ಮುಗಿದಿದೆ, ಕಬ್ಬುಸಾಗಿಸಿ” ಎಂಬ ಸಂದೇಶವನ್ನು ಕಾರ್ಖಾನೆ ಮಾಲೀಕರಿಗೆ ಕೊಟ್ಟರು.

ರೈತರ ಪ್ರತಿರೋಧವನ್ನು ಲೆಕ್ಕಿಸದೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರು ಸೇರಿ ಪೋಲೀಸ್‌ ಬಲದ ಬೆಂಬಲದಲ್ಲಿ ಕಬ್ಬು ಸಾಗಿಸಲು ಹೊರಟಿದ್ದು, ರೈತರ ಆಕ್ರೋಶಕ್ಕೂ, ಈ ದುರ್ಘಟನೆಗೂ ಕಾರಣವಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಈ ದುರ್ಘಟನೆಯ ಹೊಣೆಯನ್ನು ಹೊತ್ತುಕೊಳ್ಳಬೇಕಿದೆ. ರೈತರನ್ನು ಕಾಡುವ ಬದಲು ನಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ನಷ್ಟ ಪರಿಹಾರ ಕಟ್ಟಿಕೊಟ್ಟು, ರೈತರ ಸಭೆಯನ್ನು ಕರೆದು ಮೂಲ ಸಮಸ್ಯೆಯನ್ನು ನ್ಯಾಯಸಮ್ಮತವಾಗಿ ಬಗೆಹರಿಸುವ ಅಗತ್ಯವಿದೆ. 

ಈ ಬಾರಿಯ ಚಳವಳಿ ಐಕ್ಯನಾಯಕತ್ವದಲ್ಲಿ ನಡೆಯದೆ ಹಲವಾರು ಕೇಂದ್ರಗಳಾಗಿ ನಡೆದದ್ದೂ ಸಹ ಈ ಗೊಂದಲಕ್ಕೆಇಂಬುಕೊಟ್ಟಿದೆ. ರೈತ ಚಳವಳಿಯ ಭಾಗವಾಗಿ ನಾವೂ ಆತ್ಮಾವಲೋಕನ ಮಾಡಿಕೊಳ್ಳುವ ವಿಚಾರಗಳು ಇವೆ ಎಂದಿದ್ದಾರೆ. 

ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳು:

  1. ಕಬ್ಬಿನ ಪ್ರತಿ ಟನ್ನಿಗೆ, 10.25 ರಿಕವರಿ ಮಾನದಂಡದ ಮೇಲೆ, ಕನಿಷ್ಟ 3300 ಬೆಲೆ ನಿಗದಿ ಮಾಡಬೇಕು.
  2. ನಷ್ಟಕ್ಕೊಳಗಾಗಿರುವ ರೈತರಿಗೆ ಕಾರ್ಖಾನೆಗಳು ಹಾಗೂ ಸರ್ಕಾರ ಸೇರಿ ಸುಟ್ಟು ಹೋಗಿರುವ ಟ್ರಾಕ್ಟರ್‌ ಗಳಿಗೂ ಸೇರಿದಂತೆ
    ನಷ್ಟ ಪರಿಹಾರ ಕಟ್ಟಿಕೊಡಬೇಕು.

3.ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆ ಹರಿಸಲು ಕೂಡಲೇ ಮುಖ್ಯಮಂತ್ರಿಗಳು ಸಭೆ ಕರೆಯಬೇಕು.

  1. ರಿಕವರಿ ಟೆಸ್ಟಿನಲ್ಲಿ, ತೂಕದಲ್ಲಿ, ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
  2. ಎಫ್‌ ಆರ್‌ ಪಿ ದರದಲ್ಲಿ, ಎಥೆನಾಲ್‌ ಪ್ರಮಾಣದಲ್ಲಿ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿ ಪಡಿಸಲು ಹಾಗೂ ರಿಕವರಿಯನ್ನು ಈಗಿರುವ 10.25 ಬದಲು ಮೊದಲಿನಂತೆ 9.25 ಗೆ ಇಳಿಸಬೇಕುಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯಸರ್ಕಾರ ಮುಂದೊಡಗು ತೆಗೆದು ಕೊಳ್ಳಬೇಕು.

ಹೆಚ್.‌ ಆರ್.‌ ಬಸವರಾಜಪ್ಪ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘಹಾಗೂಹಸಿರುಸೇನೆ]
ಬಡಗಲಪುರನಾಗೇಂದ್ರ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘ]
ಚುಕ್ಕಿನಂಜುಂಡಸ್ವಾಮಿ [ರಾಜ್ಯಅಧ್ಯಕ್ಷೀಯಮಂಡಳಿಸದಸ್ಯರು, ಕರ್ನಾಟಕರಾಜ್ಯರೈತಸಂಘ (ಸಾಮೂಹಿಕನಾಯಕತ್ವ)]
ಸಿದ್ಗೌಡಮೋದಗಿ [ಅಧ್ಯಕ್ಷರು, ಭಾರತೀಯಕೃಷಿಕಸಮಾಜ [ಸಂಯುಕ್ತ]]
ನೂರ್‌ ಶ್ರೀಧರ್‌, [ಅಧ್ಯಕ್ಷರು, ಕರ್ನಾಟಕಜನಶಕ್ತಿ]
ಡಿ.ಹೆಚ್.‌ ಪೂಜಾರ್‌ [ಅಧ್ಯಕ್ಷರು, AIUKS]
ಭಗವಾನ್‌ ರೆಡ್ಡಿ, [ರಾಜ್ಯಕಾರ್ಯದರ್ಶಿ, AIKKMS]
ಸಿರಿಮನೆನಾಗರಾಜ್‌ [ಉಪಾಧ್ಯಕ್ಷರು, ಭೂಮಿಮತ್ತುವಸತಿಹಕ್ಕುವಂಚಿತರಹೋರಾಟಸಮಿತಿ]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...