Homeಕರ್ನಾಟಕಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

ಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

- Advertisement -
- Advertisement -

‘ವಿನಾಶಕಾರಿ ಕೃತ್ಯಗಳನ್ನು ರೈತಚಳವಳಿ ಎಂದೂ ಪಾಲಿಸಿಲ್ಲ’ ಬಾಗಲಕೋಟೆಯ ಸೈದಾಪುರದಲ್ಲಿ ಹಲವಾರು ಕಬ್ಬು ತುಂಬಿದ ಟ್ರಾಕ್ಟರುಗಳು ಸುಟ್ಟು ಭಸ್ಮವಾಗಿರುವುದು ವಿಷಾದನೀಯ. ಇದಕ್ಕೆ ಯಾರೇ ಪ್ರೇರಣೆ ನೀಡಿದ್ದರೂ ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ, ನೂರ್ ಶ್ರೀಧರ್, ಡಿ.ಹೆಚ್, ಪೂಜಾರ್ ಸೇರಿದಂತೆ ಹಲವು ರೈತ ನಾಯಕರು, ರೈತಪರ ಹೋರಾಟಗಾರರು ಹೇಳಿದ್ದಾರೆ. 

ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹೊತ್ತಿರುವ ದುರ್ಘಟನೆ ಕುರಿತು ರೈತ ಹಾಗೂ ರೈತಪರ ಸಂಘಟನೆಗಳು ತುರ್ತು ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ರೈತ ಚಳವಳಿ ಇತಿಹಾಸದುದ್ದಕ್ಕೂ ಶಾಂತಿಯುತವಾಗಿ ನಡೆದು ಬಂದಿದೆ. ರೈತರದು ಸದಾ ಜೀವಪರ ನಿಲುವು, ವಿನಾಶಕಾರಿ ಕೃತ್ಯಗಳನ್ನು ರೈತ ಚಳವಳಿ ಎಂದೂ ಪಾಲಿಸಿಲ್ಲ, ಸಮ್ಮತಿಸಿಲ್ಲ. 

ಆದರೆ ಈ ಘಟನೆಗೆ ಇತ್ತೀಚಿಗೆ ನಡೆದ ರೈತ ಚಳವಳಿ ಸರಿಯಾದ ರೀತಿಯಲ್ಲಿ ಸಮಾರೋಪಗೊಳ್ಳದೇ ಹೋದದ್ದು ಮುಖ್ಯ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ, ರಾಜ್ಯಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ಜಿಲ್ಲಾಡಳಿತ ಪ್ರಮುಖ ಹೊಣೆಯನ್ನು ಹೊತ್ತುಕೊಳ್ಳಲೇಬೇಕಿದೆ.

ಅವೈಜ್ಞಾನಿಕ ಎಫ್‌ ಆರ್‌ ಪಿ ಯನ್ನು ನಿಗದಿಮಾಡುವ ಮೂಲಕ ಕೇಂದ್ರ ಸರ್ಕಾರ ಸಮಸ್ಯೆಯ ಮೂಲವಾಗಿ ಕೆಲಸ ಮಾಡಿದೆ.

ಸೂಕ್ತ ಬೆಲೆ ಸಿಗದೆ ರೈತರ ಆಕ್ರೋಶ ಸ್ಪೋಟ ಗೊಂಡಾಗ ರಾಜ್ಯಸರ್ಕಾರ ಕೂಡಲೇ ಅದನ್ನು ಬಗೆಹರಿಸುವ ಬಿಗಿ ನಿಲುವು ತೆಗೆದುಕೊಳ್ಳಲು ಮುಂದಾಗಲಿಲ್ಲ. ಕೊನೆಗೆ ಪರಿಸ್ಥಿತಿ ಕೈಮೀರಿದಾಗ ಕಾರ್ಖಾನೆ ಮಾಲೀಕರ ಸಭೆ ಕರೆಯಿತು. ಆ ಸಭೆಯಲ್ಲಿ ಕೋಟ್ಯಾಂತರ ಲಾಭ ಮಾಡುತ್ತಿರುವ ಕಾರ್ಖಾನೆ ಮಾಲೀಕರು ರೈತರಿಗೆ ಪ್ರತಿಟನ್ನಿಗೆ ನೂರುರೂ ಹೆಚ್ಚಿಸಲು ತಯಾರಿರಲಿಲ್ಲ. 

ಇವರ ಲೋಭಕೋರತನ, ಮೊಂಡು ನಿಲುವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತು. ಕೊನೆಗೆ ರಾಜ್ಯ ಸರ್ಕಾರ ತಾನೂ 50 ರೂ ಸೇರಿಸಿ 3300 ರೂ ಕೊಡುವ ತೀರ್ಮಾನ ತೆಗೆದುಕೊಂಡಿತಾದರೂ ರಿಕವರಿಯನ್ನು10.25 ಬದಲು11.25 ಕ್ಕೆನಿಗದಿಮಾಡಿದ್ದು,  ಕೊಟ್ಟಂತೆ ಕಂಡರೂ ಏನೂ ಕೊಡಲಿಲ್ಲ, ಎಂಬ ಭಾವ ರೈತರಲ್ಲಿ ಉಳಿಯಲು ಕಾರಣವಾಯಿತು. 

ಈ ಕಾರಣಕ್ಕಾಗಿಯೇ ಬಾಗಲಕೋಟೆಯಲ್ಲಿ ಹೋರಾಟ ನಿಲ್ಲದೆ ಮುಂದುವರಿಯಿತು. ರೈತರನ್ನುಕರೆದು, ವಿಶ್ವಾಸಕ್ಕೆ ತೆಗೆದುಕೊಂಡು, ತನ್ನಿಂದ ಆಗಿರುವ ಅಚಾತುರ್ಯವನ್ನು ಸರಿಪಡಿಸಿಕೊಂಡು ರಿಕವರಿಯನ್ನು 10.25 ಗೆ ತರುವ ಬದಲು, ಜಿಲ್ಲಾಸಚಿವರು “ಹೋರಾಟ ಮುಗಿದಿದೆ, ಕಬ್ಬುಸಾಗಿಸಿ” ಎಂಬ ಸಂದೇಶವನ್ನು ಕಾರ್ಖಾನೆ ಮಾಲೀಕರಿಗೆ ಕೊಟ್ಟರು.

ರೈತರ ಪ್ರತಿರೋಧವನ್ನು ಲೆಕ್ಕಿಸದೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರು ಸೇರಿ ಪೋಲೀಸ್‌ ಬಲದ ಬೆಂಬಲದಲ್ಲಿ ಕಬ್ಬು ಸಾಗಿಸಲು ಹೊರಟಿದ್ದು, ರೈತರ ಆಕ್ರೋಶಕ್ಕೂ, ಈ ದುರ್ಘಟನೆಗೂ ಕಾರಣವಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಈ ದುರ್ಘಟನೆಯ ಹೊಣೆಯನ್ನು ಹೊತ್ತುಕೊಳ್ಳಬೇಕಿದೆ. ರೈತರನ್ನು ಕಾಡುವ ಬದಲು ನಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ನಷ್ಟ ಪರಿಹಾರ ಕಟ್ಟಿಕೊಟ್ಟು, ರೈತರ ಸಭೆಯನ್ನು ಕರೆದು ಮೂಲ ಸಮಸ್ಯೆಯನ್ನು ನ್ಯಾಯಸಮ್ಮತವಾಗಿ ಬಗೆಹರಿಸುವ ಅಗತ್ಯವಿದೆ. 

ಈ ಬಾರಿಯ ಚಳವಳಿ ಐಕ್ಯನಾಯಕತ್ವದಲ್ಲಿ ನಡೆಯದೆ ಹಲವಾರು ಕೇಂದ್ರಗಳಾಗಿ ನಡೆದದ್ದೂ ಸಹ ಈ ಗೊಂದಲಕ್ಕೆಇಂಬುಕೊಟ್ಟಿದೆ. ರೈತ ಚಳವಳಿಯ ಭಾಗವಾಗಿ ನಾವೂ ಆತ್ಮಾವಲೋಕನ ಮಾಡಿಕೊಳ್ಳುವ ವಿಚಾರಗಳು ಇವೆ ಎಂದಿದ್ದಾರೆ. 

ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳು:

  1. ಕಬ್ಬಿನ ಪ್ರತಿ ಟನ್ನಿಗೆ, 10.25 ರಿಕವರಿ ಮಾನದಂಡದ ಮೇಲೆ, ಕನಿಷ್ಟ 3300 ಬೆಲೆ ನಿಗದಿ ಮಾಡಬೇಕು.
  2. ನಷ್ಟಕ್ಕೊಳಗಾಗಿರುವ ರೈತರಿಗೆ ಕಾರ್ಖಾನೆಗಳು ಹಾಗೂ ಸರ್ಕಾರ ಸೇರಿ ಸುಟ್ಟು ಹೋಗಿರುವ ಟ್ರಾಕ್ಟರ್‌ ಗಳಿಗೂ ಸೇರಿದಂತೆ
    ನಷ್ಟ ಪರಿಹಾರ ಕಟ್ಟಿಕೊಡಬೇಕು.

3.ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆ ಹರಿಸಲು ಕೂಡಲೇ ಮುಖ್ಯಮಂತ್ರಿಗಳು ಸಭೆ ಕರೆಯಬೇಕು.

  1. ರಿಕವರಿ ಟೆಸ್ಟಿನಲ್ಲಿ, ತೂಕದಲ್ಲಿ, ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
  2. ಎಫ್‌ ಆರ್‌ ಪಿ ದರದಲ್ಲಿ, ಎಥೆನಾಲ್‌ ಪ್ರಮಾಣದಲ್ಲಿ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿ ಪಡಿಸಲು ಹಾಗೂ ರಿಕವರಿಯನ್ನು ಈಗಿರುವ 10.25 ಬದಲು ಮೊದಲಿನಂತೆ 9.25 ಗೆ ಇಳಿಸಬೇಕುಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯಸರ್ಕಾರ ಮುಂದೊಡಗು ತೆಗೆದು ಕೊಳ್ಳಬೇಕು.

ಹೆಚ್.‌ ಆರ್.‌ ಬಸವರಾಜಪ್ಪ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘಹಾಗೂಹಸಿರುಸೇನೆ]
ಬಡಗಲಪುರನಾಗೇಂದ್ರ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘ]
ಚುಕ್ಕಿನಂಜುಂಡಸ್ವಾಮಿ [ರಾಜ್ಯಅಧ್ಯಕ್ಷೀಯಮಂಡಳಿಸದಸ್ಯರು, ಕರ್ನಾಟಕರಾಜ್ಯರೈತಸಂಘ (ಸಾಮೂಹಿಕನಾಯಕತ್ವ)]
ಸಿದ್ಗೌಡಮೋದಗಿ [ಅಧ್ಯಕ್ಷರು, ಭಾರತೀಯಕೃಷಿಕಸಮಾಜ [ಸಂಯುಕ್ತ]]
ನೂರ್‌ ಶ್ರೀಧರ್‌, [ಅಧ್ಯಕ್ಷರು, ಕರ್ನಾಟಕಜನಶಕ್ತಿ]
ಡಿ.ಹೆಚ್.‌ ಪೂಜಾರ್‌ [ಅಧ್ಯಕ್ಷರು, AIUKS]
ಭಗವಾನ್‌ ರೆಡ್ಡಿ, [ರಾಜ್ಯಕಾರ್ಯದರ್ಶಿ, AIKKMS]
ಸಿರಿಮನೆನಾಗರಾಜ್‌ [ಉಪಾಧ್ಯಕ್ಷರು, ಭೂಮಿಮತ್ತುವಸತಿಹಕ್ಕುವಂಚಿತರಹೋರಾಟಸಮಿತಿ]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....