Homeಕರ್ನಾಟಕಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

ಬಾಗಲಕೋಟೆಯಲ್ಲಿ ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹಚ್ಚಿದ ಘಟನೆಗೆ ರೈತಪರ ಸಂಘಟನೆಗಳ ಖಂಡನೆ

- Advertisement -
- Advertisement -

‘ವಿನಾಶಕಾರಿ ಕೃತ್ಯಗಳನ್ನು ರೈತಚಳವಳಿ ಎಂದೂ ಪಾಲಿಸಿಲ್ಲ’ ಬಾಗಲಕೋಟೆಯ ಸೈದಾಪುರದಲ್ಲಿ ಹಲವಾರು ಕಬ್ಬು ತುಂಬಿದ ಟ್ರಾಕ್ಟರುಗಳು ಸುಟ್ಟು ಭಸ್ಮವಾಗಿರುವುದು ವಿಷಾದನೀಯ. ಇದಕ್ಕೆ ಯಾರೇ ಪ್ರೇರಣೆ ನೀಡಿದ್ದರೂ ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ, ನೂರ್ ಶ್ರೀಧರ್, ಡಿ.ಹೆಚ್, ಪೂಜಾರ್ ಸೇರಿದಂತೆ ಹಲವು ರೈತ ನಾಯಕರು, ರೈತಪರ ಹೋರಾಟಗಾರರು ಹೇಳಿದ್ದಾರೆ. 

ಕಬ್ಬಿನ ಟ್ರಾಕ್ಟರುಗಳಿಗೆ ಬೆಂಕಿ ಹೊತ್ತಿರುವ ದುರ್ಘಟನೆ ಕುರಿತು ರೈತ ಹಾಗೂ ರೈತಪರ ಸಂಘಟನೆಗಳು ತುರ್ತು ಹೇಳಿಕೆ ಬಿಡುಗಡೆ ಮಾಡಿದ್ದು, ಕರ್ನಾಟಕದ ರೈತ ಚಳವಳಿ ಇತಿಹಾಸದುದ್ದಕ್ಕೂ ಶಾಂತಿಯುತವಾಗಿ ನಡೆದು ಬಂದಿದೆ. ರೈತರದು ಸದಾ ಜೀವಪರ ನಿಲುವು, ವಿನಾಶಕಾರಿ ಕೃತ್ಯಗಳನ್ನು ರೈತ ಚಳವಳಿ ಎಂದೂ ಪಾಲಿಸಿಲ್ಲ, ಸಮ್ಮತಿಸಿಲ್ಲ. 

ಆದರೆ ಈ ಘಟನೆಗೆ ಇತ್ತೀಚಿಗೆ ನಡೆದ ರೈತ ಚಳವಳಿ ಸರಿಯಾದ ರೀತಿಯಲ್ಲಿ ಸಮಾರೋಪಗೊಳ್ಳದೇ ಹೋದದ್ದು ಮುಖ್ಯ ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರ, ರಾಜ್ಯಸರ್ಕಾರ, ಕಾರ್ಖಾನೆ ಮಾಲೀಕರು ಹಾಗೂ ಜಿಲ್ಲಾಡಳಿತ ಪ್ರಮುಖ ಹೊಣೆಯನ್ನು ಹೊತ್ತುಕೊಳ್ಳಲೇಬೇಕಿದೆ.

ಅವೈಜ್ಞಾನಿಕ ಎಫ್‌ ಆರ್‌ ಪಿ ಯನ್ನು ನಿಗದಿಮಾಡುವ ಮೂಲಕ ಕೇಂದ್ರ ಸರ್ಕಾರ ಸಮಸ್ಯೆಯ ಮೂಲವಾಗಿ ಕೆಲಸ ಮಾಡಿದೆ.

ಸೂಕ್ತ ಬೆಲೆ ಸಿಗದೆ ರೈತರ ಆಕ್ರೋಶ ಸ್ಪೋಟ ಗೊಂಡಾಗ ರಾಜ್ಯಸರ್ಕಾರ ಕೂಡಲೇ ಅದನ್ನು ಬಗೆಹರಿಸುವ ಬಿಗಿ ನಿಲುವು ತೆಗೆದುಕೊಳ್ಳಲು ಮುಂದಾಗಲಿಲ್ಲ. ಕೊನೆಗೆ ಪರಿಸ್ಥಿತಿ ಕೈಮೀರಿದಾಗ ಕಾರ್ಖಾನೆ ಮಾಲೀಕರ ಸಭೆ ಕರೆಯಿತು. ಆ ಸಭೆಯಲ್ಲಿ ಕೋಟ್ಯಾಂತರ ಲಾಭ ಮಾಡುತ್ತಿರುವ ಕಾರ್ಖಾನೆ ಮಾಲೀಕರು ರೈತರಿಗೆ ಪ್ರತಿಟನ್ನಿಗೆ ನೂರುರೂ ಹೆಚ್ಚಿಸಲು ತಯಾರಿರಲಿಲ್ಲ. 

ಇವರ ಲೋಭಕೋರತನ, ಮೊಂಡು ನಿಲುವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತು. ಕೊನೆಗೆ ರಾಜ್ಯ ಸರ್ಕಾರ ತಾನೂ 50 ರೂ ಸೇರಿಸಿ 3300 ರೂ ಕೊಡುವ ತೀರ್ಮಾನ ತೆಗೆದುಕೊಂಡಿತಾದರೂ ರಿಕವರಿಯನ್ನು10.25 ಬದಲು11.25 ಕ್ಕೆನಿಗದಿಮಾಡಿದ್ದು,  ಕೊಟ್ಟಂತೆ ಕಂಡರೂ ಏನೂ ಕೊಡಲಿಲ್ಲ, ಎಂಬ ಭಾವ ರೈತರಲ್ಲಿ ಉಳಿಯಲು ಕಾರಣವಾಯಿತು. 

ಈ ಕಾರಣಕ್ಕಾಗಿಯೇ ಬಾಗಲಕೋಟೆಯಲ್ಲಿ ಹೋರಾಟ ನಿಲ್ಲದೆ ಮುಂದುವರಿಯಿತು. ರೈತರನ್ನುಕರೆದು, ವಿಶ್ವಾಸಕ್ಕೆ ತೆಗೆದುಕೊಂಡು, ತನ್ನಿಂದ ಆಗಿರುವ ಅಚಾತುರ್ಯವನ್ನು ಸರಿಪಡಿಸಿಕೊಂಡು ರಿಕವರಿಯನ್ನು 10.25 ಗೆ ತರುವ ಬದಲು, ಜಿಲ್ಲಾಸಚಿವರು “ಹೋರಾಟ ಮುಗಿದಿದೆ, ಕಬ್ಬುಸಾಗಿಸಿ” ಎಂಬ ಸಂದೇಶವನ್ನು ಕಾರ್ಖಾನೆ ಮಾಲೀಕರಿಗೆ ಕೊಟ್ಟರು.

ರೈತರ ಪ್ರತಿರೋಧವನ್ನು ಲೆಕ್ಕಿಸದೆ ಜಿಲ್ಲಾಡಳಿತ ಮತ್ತು ಕಾರ್ಖಾನೆ ಮಾಲೀಕರು ಸೇರಿ ಪೋಲೀಸ್‌ ಬಲದ ಬೆಂಬಲದಲ್ಲಿ ಕಬ್ಬು ಸಾಗಿಸಲು ಹೊರಟಿದ್ದು, ರೈತರ ಆಕ್ರೋಶಕ್ಕೂ, ಈ ದುರ್ಘಟನೆಗೂ ಕಾರಣವಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಜಿಲ್ಲಾಡಳಿತ ಈ ದುರ್ಘಟನೆಯ ಹೊಣೆಯನ್ನು ಹೊತ್ತುಕೊಳ್ಳಬೇಕಿದೆ. ರೈತರನ್ನು ಕಾಡುವ ಬದಲು ನಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ನಷ್ಟ ಪರಿಹಾರ ಕಟ್ಟಿಕೊಟ್ಟು, ರೈತರ ಸಭೆಯನ್ನು ಕರೆದು ಮೂಲ ಸಮಸ್ಯೆಯನ್ನು ನ್ಯಾಯಸಮ್ಮತವಾಗಿ ಬಗೆಹರಿಸುವ ಅಗತ್ಯವಿದೆ. 

ಈ ಬಾರಿಯ ಚಳವಳಿ ಐಕ್ಯನಾಯಕತ್ವದಲ್ಲಿ ನಡೆಯದೆ ಹಲವಾರು ಕೇಂದ್ರಗಳಾಗಿ ನಡೆದದ್ದೂ ಸಹ ಈ ಗೊಂದಲಕ್ಕೆಇಂಬುಕೊಟ್ಟಿದೆ. ರೈತ ಚಳವಳಿಯ ಭಾಗವಾಗಿ ನಾವೂ ಆತ್ಮಾವಲೋಕನ ಮಾಡಿಕೊಳ್ಳುವ ವಿಚಾರಗಳು ಇವೆ ಎಂದಿದ್ದಾರೆ. 

ರಾಜ್ಯ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳು:

  1. ಕಬ್ಬಿನ ಪ್ರತಿ ಟನ್ನಿಗೆ, 10.25 ರಿಕವರಿ ಮಾನದಂಡದ ಮೇಲೆ, ಕನಿಷ್ಟ 3300 ಬೆಲೆ ನಿಗದಿ ಮಾಡಬೇಕು.
  2. ನಷ್ಟಕ್ಕೊಳಗಾಗಿರುವ ರೈತರಿಗೆ ಕಾರ್ಖಾನೆಗಳು ಹಾಗೂ ಸರ್ಕಾರ ಸೇರಿ ಸುಟ್ಟು ಹೋಗಿರುವ ಟ್ರಾಕ್ಟರ್‌ ಗಳಿಗೂ ಸೇರಿದಂತೆ
    ನಷ್ಟ ಪರಿಹಾರ ಕಟ್ಟಿಕೊಡಬೇಕು.

3.ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯನ್ನು ಬಗೆ ಹರಿಸಲು ಕೂಡಲೇ ಮುಖ್ಯಮಂತ್ರಿಗಳು ಸಭೆ ಕರೆಯಬೇಕು.

  1. ರಿಕವರಿ ಟೆಸ್ಟಿನಲ್ಲಿ, ತೂಕದಲ್ಲಿ, ಪಾವತಿಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
  2. ಎಫ್‌ ಆರ್‌ ಪಿ ದರದಲ್ಲಿ, ಎಥೆನಾಲ್‌ ಪ್ರಮಾಣದಲ್ಲಿ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿ ಪಡಿಸಲು ಹಾಗೂ ರಿಕವರಿಯನ್ನು ಈಗಿರುವ 10.25 ಬದಲು ಮೊದಲಿನಂತೆ 9.25 ಗೆ ಇಳಿಸಬೇಕುಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯಸರ್ಕಾರ ಮುಂದೊಡಗು ತೆಗೆದು ಕೊಳ್ಳಬೇಕು.

ಹೆಚ್.‌ ಆರ್.‌ ಬಸವರಾಜಪ್ಪ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘಹಾಗೂಹಸಿರುಸೇನೆ]
ಬಡಗಲಪುರನಾಗೇಂದ್ರ [ಅಧ್ಯಕ್ಷರು, ಕರ್ನಾಟಕರಾಜ್ಯರೈತಸಂಘ]
ಚುಕ್ಕಿನಂಜುಂಡಸ್ವಾಮಿ [ರಾಜ್ಯಅಧ್ಯಕ್ಷೀಯಮಂಡಳಿಸದಸ್ಯರು, ಕರ್ನಾಟಕರಾಜ್ಯರೈತಸಂಘ (ಸಾಮೂಹಿಕನಾಯಕತ್ವ)]
ಸಿದ್ಗೌಡಮೋದಗಿ [ಅಧ್ಯಕ್ಷರು, ಭಾರತೀಯಕೃಷಿಕಸಮಾಜ [ಸಂಯುಕ್ತ]]
ನೂರ್‌ ಶ್ರೀಧರ್‌, [ಅಧ್ಯಕ್ಷರು, ಕರ್ನಾಟಕಜನಶಕ್ತಿ]
ಡಿ.ಹೆಚ್.‌ ಪೂಜಾರ್‌ [ಅಧ್ಯಕ್ಷರು, AIUKS]
ಭಗವಾನ್‌ ರೆಡ್ಡಿ, [ರಾಜ್ಯಕಾರ್ಯದರ್ಶಿ, AIKKMS]
ಸಿರಿಮನೆನಾಗರಾಜ್‌ [ಉಪಾಧ್ಯಕ್ಷರು, ಭೂಮಿಮತ್ತುವಸತಿಹಕ್ಕುವಂಚಿತರಹೋರಾಟಸಮಿತಿ]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...