Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...