Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...