Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...