Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...