Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...