Homeಅಂತರಾಷ್ಟ್ರೀಯಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

ಆಸ್ಟ್ರೇಲಿಯಾದಾದ್ಯಂತ ಪ್ರಬಲಗೊಂಡ ಗಾಝಾ ಪರ ಹೋರಾಟ: ಭಾನುವಾರ 40 ನಗರಗಳಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಸಿಡ್ನಿಯ ಹಾರ್ಬರ್ ಬ್ರಿಡ್ಜ್‌ನ ಐತಿಹಾಸಿಕ ರ‍್ಯಾಲಿಯ ಬಳಿಕ, ಆಸ್ಟ್ರೇಲಿಯಾದಾದ್ಯಂತ ಭಾನುವಾರ (ಆ.24) ಗಾಝಾ ಪರ ಬೃಹತ್ ಪ್ರತಿಭಟನೆಗಳು ನಡೆದಿವೆ.

ಗಾಝಾದಲ್ಲಿ ನರಮೇಧವನ್ನು ನಿಲ್ಲಿಸಬೇಕು, ಅಲ್ಲಿ ಕೃತಕ ಕ್ಷಾಮ ಸೃಷ್ಟಿಸಿರುವ ಇಸ್ರೇಲ್‌ಗೆ ಜಾಗತಿಕ ನಿರ್ಬಂಧ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಗಸ್ಟ್ 11ರಂದು ಘೋಷಿಸಿದ್ದಾರೆ. ಇದು ಆಸ್ಟ್ರೇಲಿಯಾ ಮತ್ತು ಇಸ್ರೇಲ್ ನಡುವಿನ ಸಂಬಂಧ ಹದೆಗೆಟ್ಟಿರುವುದನ್ನು ಸೂಚಿಸಿದೆ.

ಈ ಬೆಳವಣಿಗೆಯು ಆಸ್ಟ್ರೇಲಿಯಾದ ಗಾಝಾ ಪರ ಪ್ರತಿಭಟನೆಗೆ ಆಡಳಿತವೇ ಬೆಂಬಲ ನೀಡಿದಂತಾಗಿದೆ. ಪ್ರತಿಭಟನಾಕಾರರಿಗೂ ಯಾವುದೇ ಅಡತಡೆಗಳು ಎದುರಾಗುತ್ತಿಲ್ಲ ಎಂದು ವರದಿಗಳು ಹೇಳಿವೆ.

ಭಾನುವಾರ ಆಸ್ಟ್ರೇಲಿಯಾದಾದ್ಯಂತ 40ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್’ ತಿಳಿಸಿದೆ. ವಿವಿಧ ರಾಜ್ಯಗಳ ರಾಜಧಾನಿಗಳಾದ ಸಿಡ್ನಿ, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬ್ರಿಸ್ಬೇನ್‌ನಲ್ಲಿ ಸುಮಾರು 50,000 ಜನರು ಸೇರಿದಂತೆ ದೇಶದಾದ್ಯಂತ ಸುಮಾರು 350,000ಕ್ಕೂ ಹೆಚ್ಚು ಜನರು ಪ್ರತಿಭಟನಾ ರ‍್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರೂಪ್ ಹೇಳಿದೆ.

ಆದರೆ, ಪೊಲೀಸರು ಬ್ರಿಸ್ಬೇನ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇವಲ 10,000 ಜನರು ಮಾತ್ರ ಭಾಗವಹಿಸಿದ್ದಾರೆಂದು ಅಂದಾಜಿಸಿದ್ದಾರೆ. ಸಿಡ್ನಿ ಮತ್ತು ಮೆಲ್ಬೋರ್ನ್‌ನಲ್ಲಿನ ಜನಸಂದಣಿಯ ಗಾತ್ರದ ಬಗ್ಗೆ ಪೊಲೀಸರು ಖಚಿತ ಮಾಹಿತಿ ನೀಡಿಲ್ಲ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಸಿಡ್ನಿಯ ಪ್ರತಿಭಟನೆಯ ಆಯೋಜಕ ಜೋಶ್ ಲೀಸ್ ಅವರು, “ಆಸ್ಟ್ರೇಲಿಯನ್ನರು ಗಾಝಾದಲ್ಲಿ ನರಮೇಧವನ್ನು ಕೊನೆಗೊಳಿಸಬೇಕು ಮತ್ತು ನಮ್ಮ ಸರ್ಕಾರ ಇಸ್ರೇಲ್‌ಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಲು ಬೀದಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ. ಪ್ರತಿಭಟಾ ರ‍್ಯಾಲಿಗಳಲ್ಲಿ ಭಾಗವಹಿಸಿದವರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದು ‘ಫ್ರೀ ಫ್ರೀ ಪ್ಯಾಲೆಸ್ಟೈನ್’ ಎಂಬ ಘೋಷಣೆಗಳನ್ನು ಕೂಗಿದರು ಎಂದು ಅಲ್ ಜಝೀರಾ ವಿವರಿಸಿದೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುತ್ತೇವೆ ಎಂಬ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ.

ಫ್ರಾನ್ಸ್, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾ ದೇಶಗಳು ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸಿದ್ದು, ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ನೀಡುವುದಾಗಿ ಘೋಷಿಸಿವೆ. ಇದಕ್ಕೆ ಆಸ್ಟ್ರೇಲಿಯಾದ ಅಲ್ಬನೀಸ್‌ ಅವರ ಲೇಬರ್ ಸರ್ಕಾರ ಧ್ವನಿಗೂಡಿಸಿದೆ. ಇಸ್ರೇಲ್ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಆಗಸ್ಟ್ 3ರಂದು ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ್ದರು. ಆ ಬಳಿಕ ಆಗಸ್ಟ್ 11ರಂದು ಪ್ರಧಾನಿ ಅಲ್ಬನೀಸ್ ಪ್ರತ್ಯೇಕ ಪ್ಯಾಲೆಸ್ತೀನ್ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ಜಾಗತಿಕವಾಗಿ ಖಂಡನೆಗೆ ಗುರಿಯಾಗಿರುವ ಇಸ್ರೇಲ್, ಗಾಝಾ ಮೇಲಿನ ತನ್ನ 22 ತಿಂಗಳ ಸುದೀರ್ಘ ದಾಳಿಯಲ್ಲಿ 62,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಲ್ಲಿನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಯುದ್ಧ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿದೆ.

ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...