Homeಸಿನಿಮಾಕ್ರೀಡೆಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

ಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

- Advertisement -
- Advertisement -

ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತನ್ನ ಪಯಣವನ್ನು ಸೆಮಿಫೈನಲ್ ನಲ್ಲಿಯೇ ಕೊನೆಗೊಳಿಸಿದರೂ ಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಹಣಾಹಣಿ ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲಿ ತುದಿಗಾಲಲ್ಲಿ ನಿಲ್ಲಿಸಿತ್ತು. ಈಗ ವಿಶ್ವಕಪ್ ಜ್ವರ ನಿಧಾನವಾಗಿ ಇಳಿಯುತ್ತಿದೆ. ಅದರ ಬೆನ್ನಲ್ಲೇ ಪ್ರೊ ಕಬ್ಬಡಿ ಹವಾ ಜುಲೈ 20 ರಿಂದ ಆರಂಭವಾಗುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ದಿನೇ ದಿನೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಜುಲೈ 20 ರಂದು ಹೈದರಾಬಾದ್ ನ ಗಂಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ತೆಲಗು ಟೈಟನ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಲಿವೆ. ಅದೇ ದಿನ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಪಟ್ನಾ ಪೈರೇಟ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

ಆಗಸ್ಟ್ 31 ರಿಂದ ಸೆಪ್ಟಂಬರ್ 6ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಯೂ ಕಬ್ಬಡ್ಡಿ ಪಂದ್ಯಗಳು ನಡೆಯಲಿದ್ದು ಬೆಂಗಳೂರಿನ ಅಭಿಮಾನಿಗಳು ಸಹ ನೇರವಾಗಿ ಕಬ್ಬಡ್ಡಿ ನೋಡಬಹುದಾಗಿದೆ. ಅಕ್ಟೋಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕೊನೆಗೂ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಈ ಕಬ್ಬಡ್ಡಿ ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಿಂದ ಹೊರಬಂದಿರುವ ಕ್ರೀಡಾ ಪ್ರೇಮಿಗಳಿಗೆ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...