Homeಸಿನಿಮಾಕ್ರೀಡೆಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

ಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

- Advertisement -
- Advertisement -

ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತನ್ನ ಪಯಣವನ್ನು ಸೆಮಿಫೈನಲ್ ನಲ್ಲಿಯೇ ಕೊನೆಗೊಳಿಸಿದರೂ ಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಹಣಾಹಣಿ ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲಿ ತುದಿಗಾಲಲ್ಲಿ ನಿಲ್ಲಿಸಿತ್ತು. ಈಗ ವಿಶ್ವಕಪ್ ಜ್ವರ ನಿಧಾನವಾಗಿ ಇಳಿಯುತ್ತಿದೆ. ಅದರ ಬೆನ್ನಲ್ಲೇ ಪ್ರೊ ಕಬ್ಬಡಿ ಹವಾ ಜುಲೈ 20 ರಿಂದ ಆರಂಭವಾಗುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ದಿನೇ ದಿನೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಜುಲೈ 20 ರಂದು ಹೈದರಾಬಾದ್ ನ ಗಂಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ತೆಲಗು ಟೈಟನ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಲಿವೆ. ಅದೇ ದಿನ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಪಟ್ನಾ ಪೈರೇಟ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

ಆಗಸ್ಟ್ 31 ರಿಂದ ಸೆಪ್ಟಂಬರ್ 6ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಯೂ ಕಬ್ಬಡ್ಡಿ ಪಂದ್ಯಗಳು ನಡೆಯಲಿದ್ದು ಬೆಂಗಳೂರಿನ ಅಭಿಮಾನಿಗಳು ಸಹ ನೇರವಾಗಿ ಕಬ್ಬಡ್ಡಿ ನೋಡಬಹುದಾಗಿದೆ. ಅಕ್ಟೋಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕೊನೆಗೂ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಈ ಕಬ್ಬಡ್ಡಿ ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಿಂದ ಹೊರಬಂದಿರುವ ಕ್ರೀಡಾ ಪ್ರೇಮಿಗಳಿಗೆ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...