Homeಸಿನಿಮಾಕ್ರೀಡೆಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

ಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

- Advertisement -
- Advertisement -

ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತನ್ನ ಪಯಣವನ್ನು ಸೆಮಿಫೈನಲ್ ನಲ್ಲಿಯೇ ಕೊನೆಗೊಳಿಸಿದರೂ ಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಹಣಾಹಣಿ ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲಿ ತುದಿಗಾಲಲ್ಲಿ ನಿಲ್ಲಿಸಿತ್ತು. ಈಗ ವಿಶ್ವಕಪ್ ಜ್ವರ ನಿಧಾನವಾಗಿ ಇಳಿಯುತ್ತಿದೆ. ಅದರ ಬೆನ್ನಲ್ಲೇ ಪ್ರೊ ಕಬ್ಬಡಿ ಹವಾ ಜುಲೈ 20 ರಿಂದ ಆರಂಭವಾಗುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ದಿನೇ ದಿನೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಜುಲೈ 20 ರಂದು ಹೈದರಾಬಾದ್ ನ ಗಂಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ತೆಲಗು ಟೈಟನ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಲಿವೆ. ಅದೇ ದಿನ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಪಟ್ನಾ ಪೈರೇಟ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

ಆಗಸ್ಟ್ 31 ರಿಂದ ಸೆಪ್ಟಂಬರ್ 6ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಯೂ ಕಬ್ಬಡ್ಡಿ ಪಂದ್ಯಗಳು ನಡೆಯಲಿದ್ದು ಬೆಂಗಳೂರಿನ ಅಭಿಮಾನಿಗಳು ಸಹ ನೇರವಾಗಿ ಕಬ್ಬಡ್ಡಿ ನೋಡಬಹುದಾಗಿದೆ. ಅಕ್ಟೋಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕೊನೆಗೂ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಈ ಕಬ್ಬಡ್ಡಿ ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಿಂದ ಹೊರಬಂದಿರುವ ಕ್ರೀಡಾ ಪ್ರೇಮಿಗಳಿಗೆ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...