Homeಸಿನಿಮಾಕ್ರೀಡೆಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

ಮುಗಿದ ವಿಶ್ವಕಪ್: ಆರಂಭವಾಯ್ತು ರೋಚಕ ಕಬ್ಬಡ್ಡಿ ಪಂದ್ಯಾವಳಿ. ಬೆಂಗಳೂರಿನಲ್ಲಿ ಯಾವಾಗ ಗೊತ್ತೆ?

- Advertisement -
- Advertisement -

ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತನ್ನ ಪಯಣವನ್ನು ಸೆಮಿಫೈನಲ್ ನಲ್ಲಿಯೇ ಕೊನೆಗೊಳಿಸಿದರೂ ಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಹಣಾಹಣಿ ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲಿ ತುದಿಗಾಲಲ್ಲಿ ನಿಲ್ಲಿಸಿತ್ತು. ಈಗ ವಿಶ್ವಕಪ್ ಜ್ವರ ನಿಧಾನವಾಗಿ ಇಳಿಯುತ್ತಿದೆ. ಅದರ ಬೆನ್ನಲ್ಲೇ ಪ್ರೊ ಕಬ್ಬಡಿ ಹವಾ ಜುಲೈ 20 ರಿಂದ ಆರಂಭವಾಗುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ದಿನೇ ದಿನೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಜುಲೈ 20 ರಂದು ಹೈದರಾಬಾದ್ ನ ಗಂಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ತೆಲಗು ಟೈಟನ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಲಿವೆ. ಅದೇ ದಿನ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಪಟ್ನಾ ಪೈರೇಟ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

ಆಗಸ್ಟ್ 31 ರಿಂದ ಸೆಪ್ಟಂಬರ್ 6ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಯೂ ಕಬ್ಬಡ್ಡಿ ಪಂದ್ಯಗಳು ನಡೆಯಲಿದ್ದು ಬೆಂಗಳೂರಿನ ಅಭಿಮಾನಿಗಳು ಸಹ ನೇರವಾಗಿ ಕಬ್ಬಡ್ಡಿ ನೋಡಬಹುದಾಗಿದೆ. ಅಕ್ಟೋಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕೊನೆಗೂ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಈ ಕಬ್ಬಡ್ಡಿ ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಿಂದ ಹೊರಬಂದಿರುವ ಕ್ರೀಡಾ ಪ್ರೇಮಿಗಳಿಗೆ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...