Homeಸಿನಿಮಾಕ್ರೀಡೆಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ - ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ – ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಬುಲ್ಸ್ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದ್ದು 10ನೇ ಗೆಲುವು ದಾಖಲಿಸಿದೆ. ಶುಕ್ರವಾರ ರಾತ್ರಿ ಗುಜರಾತ್ ಜೈಂಟ್ಸ್ ತಂಡದ ಎದುರಿನ ಪಂದ್ಯದಲ್ಲಿ 45-38 ಅಂಕಗಳಿಂದ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದುವರೆಗೆ ಆಡಿದ 15 ಪಂದ್ಯಗಳಲ್ಲಿ 10 ಗೆಲುವು, ನಾಲ್ಕು ಸೋಲು ಮತ್ತು ಒಂದು ಟೈನೊಂದಿಗೆ 56 ಅಂಕ ಗಳಿಸಿರುವ ಬೆಂಗಳೂರು ತಂಡ ಪ್ಲೇ ಆಫ್‌ ಕಡೆ ಮುಖ ಮಾಡಿದೆ.

ಭರವಸೆಯ ರೈಡರ್ ಭರತ್ 

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಭರತ್‌ಗೆ ಸಹಾಯಕವಾಗಿ ವಿಕಾಸ್ ಖಂಡೋಲ ಮತ್ತು ನೀರಜ್ ನರ್ವಾಲ್ ಪ್ರದರ್ಶನ ನೀಡುತ್ತಿದ್ದಾರೆ. ಒಟ್ಟಾರೆ ಬೆಂಗಳೂರು ತಂಡದ ರೈಡಿಂಗ್ ಯೂನಿಟ್ ಪ್ರಬಲವಾಗಿದೆ. ಹಾಗಾಗಿ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿದೆ.

ಡಿಫೆಂಡಿಂಗ್ ಪ್ರಬಲವಾಗಬೇಕಿದೆ

ಬೆಂಗಳೂರು ತಂಡದ ಡಿಫೆಂಡಿಂಗ್ ಮತ್ತಷ್ಟು ಪ್ರಬಲವಾಗಿದೆ. ಕೆಲ ಪಂದ್ಯಗಳಲ್ಲಿ ಸೌರಭ್ ನಂದಲ್ ಉತ್ತಮ ಪ್ರದರ್ಶನ ನೀಡಿದರೆ ಕೆಲ ಪಂದ್ಯಗಳಲ್ಲಿ ಅಮನ್ ಚೆನ್ನಾಗಿ ಆಡುತ್ತಾರೆ. ಕೆಲವೊಮ್ಮೆ ಮಯೂರ್ ಕದಮ್ ಮಿಂಚಿದ್ದರೆ ಕೆಲವೊಮ್ಮೆ ತಂಡದ ನಾಯಕ ಮಹೇಂದರ್ ಮಿಂಚುತ್ತಿದ್ದಾರೆ. ಆದರೆ ಸಮಸ್ಯೆಯಿರುವುದು ಎಲ್ಲರೂ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದಿರುವುದಾಗಿದೆ. ಇದುವರೆಗೂ ಸೌರಭ್ ನಂದಲ್ 47 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಅಮನ್ 31 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ 15 ಸ್ಥಾನದಲ್ಲಿದ್ದಾರೆ.

ಬೆಂಗಳೂರು ತಂಡದ ಡಿಫೆಂಡಿಂಗ್ ತಂಡ ಸಮನ್ವಯತೆಯಿಂದ, ಆತ್ಮವಿಶ್ವಾಸದಿಂದ ಆಡಿದ್ದಲ್ಲಿ ಅದು ಬೆಂಗಳೂರು ತಂಡಕ್ಕೆ ವರದಾನವಾಗಲಿದೆ. ಮಲ್ಟಿಪಾಯಿಂಟ್ ಬಿಟ್ಟುಕೊಡದಿದ್ದರೆ ಬೆಂಗಳೂರು ತಂಡ ಚಾಂಪಿಯನ್ ಆಗುವ ಎಲ್ಲಾ ಅರ್ಹತೆ ಹೊಂದಿದೆ.

ಬೆಂಗಳೂರಿನ ಪ್ಲೇ ಆಫ್ ಹಾದಿ ಸುಗಮ

ಬೆಂಗಳೂರು ತಂಡ 56 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ ಪುಣೇರಿ ಪಲ್ಟನ್ ತಂಡ ಸಹ 9 ಗೆಲುವಿನೊಂದಿಗೆ 54 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಭಾನುವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಅಗ್ರಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 5 ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...