Homeಸಿನಿಮಾಕ್ರೀಡೆಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ - ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ – ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಬುಲ್ಸ್ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದ್ದು 10ನೇ ಗೆಲುವು ದಾಖಲಿಸಿದೆ. ಶುಕ್ರವಾರ ರಾತ್ರಿ ಗುಜರಾತ್ ಜೈಂಟ್ಸ್ ತಂಡದ ಎದುರಿನ ಪಂದ್ಯದಲ್ಲಿ 45-38 ಅಂಕಗಳಿಂದ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದುವರೆಗೆ ಆಡಿದ 15 ಪಂದ್ಯಗಳಲ್ಲಿ 10 ಗೆಲುವು, ನಾಲ್ಕು ಸೋಲು ಮತ್ತು ಒಂದು ಟೈನೊಂದಿಗೆ 56 ಅಂಕ ಗಳಿಸಿರುವ ಬೆಂಗಳೂರು ತಂಡ ಪ್ಲೇ ಆಫ್‌ ಕಡೆ ಮುಖ ಮಾಡಿದೆ.

ಭರವಸೆಯ ರೈಡರ್ ಭರತ್ 

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಭರತ್‌ಗೆ ಸಹಾಯಕವಾಗಿ ವಿಕಾಸ್ ಖಂಡೋಲ ಮತ್ತು ನೀರಜ್ ನರ್ವಾಲ್ ಪ್ರದರ್ಶನ ನೀಡುತ್ತಿದ್ದಾರೆ. ಒಟ್ಟಾರೆ ಬೆಂಗಳೂರು ತಂಡದ ರೈಡಿಂಗ್ ಯೂನಿಟ್ ಪ್ರಬಲವಾಗಿದೆ. ಹಾಗಾಗಿ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿದೆ.

ಡಿಫೆಂಡಿಂಗ್ ಪ್ರಬಲವಾಗಬೇಕಿದೆ

ಬೆಂಗಳೂರು ತಂಡದ ಡಿಫೆಂಡಿಂಗ್ ಮತ್ತಷ್ಟು ಪ್ರಬಲವಾಗಿದೆ. ಕೆಲ ಪಂದ್ಯಗಳಲ್ಲಿ ಸೌರಭ್ ನಂದಲ್ ಉತ್ತಮ ಪ್ರದರ್ಶನ ನೀಡಿದರೆ ಕೆಲ ಪಂದ್ಯಗಳಲ್ಲಿ ಅಮನ್ ಚೆನ್ನಾಗಿ ಆಡುತ್ತಾರೆ. ಕೆಲವೊಮ್ಮೆ ಮಯೂರ್ ಕದಮ್ ಮಿಂಚಿದ್ದರೆ ಕೆಲವೊಮ್ಮೆ ತಂಡದ ನಾಯಕ ಮಹೇಂದರ್ ಮಿಂಚುತ್ತಿದ್ದಾರೆ. ಆದರೆ ಸಮಸ್ಯೆಯಿರುವುದು ಎಲ್ಲರೂ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದಿರುವುದಾಗಿದೆ. ಇದುವರೆಗೂ ಸೌರಭ್ ನಂದಲ್ 47 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಅಮನ್ 31 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ 15 ಸ್ಥಾನದಲ್ಲಿದ್ದಾರೆ.

ಬೆಂಗಳೂರು ತಂಡದ ಡಿಫೆಂಡಿಂಗ್ ತಂಡ ಸಮನ್ವಯತೆಯಿಂದ, ಆತ್ಮವಿಶ್ವಾಸದಿಂದ ಆಡಿದ್ದಲ್ಲಿ ಅದು ಬೆಂಗಳೂರು ತಂಡಕ್ಕೆ ವರದಾನವಾಗಲಿದೆ. ಮಲ್ಟಿಪಾಯಿಂಟ್ ಬಿಟ್ಟುಕೊಡದಿದ್ದರೆ ಬೆಂಗಳೂರು ತಂಡ ಚಾಂಪಿಯನ್ ಆಗುವ ಎಲ್ಲಾ ಅರ್ಹತೆ ಹೊಂದಿದೆ.

ಬೆಂಗಳೂರಿನ ಪ್ಲೇ ಆಫ್ ಹಾದಿ ಸುಗಮ

ಬೆಂಗಳೂರು ತಂಡ 56 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ ಪುಣೇರಿ ಪಲ್ಟನ್ ತಂಡ ಸಹ 9 ಗೆಲುವಿನೊಂದಿಗೆ 54 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಭಾನುವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಅಗ್ರಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 5 ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....