Homeಸಿನಿಮಾಕ್ರೀಡೆಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ - ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ – ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಬುಲ್ಸ್ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದ್ದು 10ನೇ ಗೆಲುವು ದಾಖಲಿಸಿದೆ. ಶುಕ್ರವಾರ ರಾತ್ರಿ ಗುಜರಾತ್ ಜೈಂಟ್ಸ್ ತಂಡದ ಎದುರಿನ ಪಂದ್ಯದಲ್ಲಿ 45-38 ಅಂಕಗಳಿಂದ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದುವರೆಗೆ ಆಡಿದ 15 ಪಂದ್ಯಗಳಲ್ಲಿ 10 ಗೆಲುವು, ನಾಲ್ಕು ಸೋಲು ಮತ್ತು ಒಂದು ಟೈನೊಂದಿಗೆ 56 ಅಂಕ ಗಳಿಸಿರುವ ಬೆಂಗಳೂರು ತಂಡ ಪ್ಲೇ ಆಫ್‌ ಕಡೆ ಮುಖ ಮಾಡಿದೆ.

ಭರವಸೆಯ ರೈಡರ್ ಭರತ್ 

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಭರತ್‌ಗೆ ಸಹಾಯಕವಾಗಿ ವಿಕಾಸ್ ಖಂಡೋಲ ಮತ್ತು ನೀರಜ್ ನರ್ವಾಲ್ ಪ್ರದರ್ಶನ ನೀಡುತ್ತಿದ್ದಾರೆ. ಒಟ್ಟಾರೆ ಬೆಂಗಳೂರು ತಂಡದ ರೈಡಿಂಗ್ ಯೂನಿಟ್ ಪ್ರಬಲವಾಗಿದೆ. ಹಾಗಾಗಿ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿದೆ.

ಡಿಫೆಂಡಿಂಗ್ ಪ್ರಬಲವಾಗಬೇಕಿದೆ

ಬೆಂಗಳೂರು ತಂಡದ ಡಿಫೆಂಡಿಂಗ್ ಮತ್ತಷ್ಟು ಪ್ರಬಲವಾಗಿದೆ. ಕೆಲ ಪಂದ್ಯಗಳಲ್ಲಿ ಸೌರಭ್ ನಂದಲ್ ಉತ್ತಮ ಪ್ರದರ್ಶನ ನೀಡಿದರೆ ಕೆಲ ಪಂದ್ಯಗಳಲ್ಲಿ ಅಮನ್ ಚೆನ್ನಾಗಿ ಆಡುತ್ತಾರೆ. ಕೆಲವೊಮ್ಮೆ ಮಯೂರ್ ಕದಮ್ ಮಿಂಚಿದ್ದರೆ ಕೆಲವೊಮ್ಮೆ ತಂಡದ ನಾಯಕ ಮಹೇಂದರ್ ಮಿಂಚುತ್ತಿದ್ದಾರೆ. ಆದರೆ ಸಮಸ್ಯೆಯಿರುವುದು ಎಲ್ಲರೂ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದಿರುವುದಾಗಿದೆ. ಇದುವರೆಗೂ ಸೌರಭ್ ನಂದಲ್ 47 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಅಮನ್ 31 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ 15 ಸ್ಥಾನದಲ್ಲಿದ್ದಾರೆ.

ಬೆಂಗಳೂರು ತಂಡದ ಡಿಫೆಂಡಿಂಗ್ ತಂಡ ಸಮನ್ವಯತೆಯಿಂದ, ಆತ್ಮವಿಶ್ವಾಸದಿಂದ ಆಡಿದ್ದಲ್ಲಿ ಅದು ಬೆಂಗಳೂರು ತಂಡಕ್ಕೆ ವರದಾನವಾಗಲಿದೆ. ಮಲ್ಟಿಪಾಯಿಂಟ್ ಬಿಟ್ಟುಕೊಡದಿದ್ದರೆ ಬೆಂಗಳೂರು ತಂಡ ಚಾಂಪಿಯನ್ ಆಗುವ ಎಲ್ಲಾ ಅರ್ಹತೆ ಹೊಂದಿದೆ.

ಬೆಂಗಳೂರಿನ ಪ್ಲೇ ಆಫ್ ಹಾದಿ ಸುಗಮ

ಬೆಂಗಳೂರು ತಂಡ 56 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ ಪುಣೇರಿ ಪಲ್ಟನ್ ತಂಡ ಸಹ 9 ಗೆಲುವಿನೊಂದಿಗೆ 54 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಭಾನುವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಅಗ್ರಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 5 ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...