Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...