Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...