Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...