Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...