Homeಸಿನಿಮಾಕ್ರೀಡೆಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

ಎಲಿಮಿನೇಟರ್ ಪಂದ್ಯ: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದರಷ್ಟೇ ಬೆಂಗಳೂರಿಗೆ ಸೆಮಿಫೈನಲ್ ಅವಕಾಶ

- Advertisement -
- Advertisement -

ಪ್ರೊ.ಕಬಡ್ಡಿ 9ನೇ ಆವೃತ್ತಿಯ ಪ್ಲೇ ಆಫ್‌ನ ಎಲಿಮೇಟರ್ ಪಂದ್ಯಗಳು ಇಂದು ಮುಂಬೈನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ಕೆ.ಸಿ ನಡುವೆ ಸಂಜೆ 7.30ಕ್ಕೆ ನಡೆದರೆ, ಎರಡನೇ ಪಂದ್ಯ ಯು.ಪಿ ಯೋಧ ಮತ್ತು ತಮಿಳು ತಲೈವಾಸ್‌ ನಡುವೆ 8.30ಕ್ಕೆ ನಡೆಯಲಿದೆ. ಎರಡೂ ಪಂದ್ಯಗಳಲ್ಲಿ ಗೆದ್ದವರಿಗಷ್ಟೇ ಸೆಮಿಫೈನಲ್ ತಲುಪುವ ಅವಕಾಶವಿದೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳಲಿವೆ.

ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಈಗಾಗಲೇ ನೇರವಾಗಿ ಸೆಮಿಫೈನಲ್ ತಲುಪಿವೆ. ಸೆಮಿಫೈನಲ್ ಪಂದ್ಯಗಳು ಡಿಸೆಂಬರ್ 15 ರಂದು ನಡೆಯಲಿವೆ.

ಬೆಂಗಳೂರು ಬುಲ್ಸ್ ಗೆಲುವಿನ ನಿರೀಕ್ಷೆ

ಈ ಆವೃತ್ತಿಯಲ್ಲಿ ಬೆಂಗಳುರು ಬುಲ್ಸ್ ಭರ್ಜರಿ ಪ್ರದರ್ಶನದೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಿದೆ. ತಾನಾಡಿದ 22 ಪಂದ್ಯಗಳಲ್ಲಿ 13 ಗೆಲುವು, 8 ಸೋಲು ಮತ್ತು 1 ಟೈನೊಂದಿಗೆ 74 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಆದರೆ ದಬಾಂಗ್ ಡೆಲ್ಲಿ ಪ್ರಯಾಸಕರವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಅದು 10 ಗೆಲುವು, 10 ಸೋಲು ಮತ್ತು 2 ಟೈನೊಂದಿಗೆ 63 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ. ಅಲ್ಲದೆ ಡೆಲ್ಲಿ ಮತ್ತು ಬೆಂಗಳೂರು ನಡುವಿನ ಎರಡೂ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ಗೆದ್ದು ಬೀಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕಡೆ ಒಲವು ಹೆಚ್ಚಿದೆ.

ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿಯನ್ನು 47-43 ಅಂತರದಲ್ಲಿ ಗೆದ್ದರೆ ಎರಡನೇ ಪಂದ್ಯವನ್ನು 52-49 ಅಂತರದಲ್ಲಿ ಗೆಲುವು ಸಾಧಿಸಿತ್ತು. 2018ರ ಚಾಂಪಿಯನ್ ಬೆಂಗಳೂರು ತಂಡ, 2021ರ ಹಾಲಿ ಚಾಂಪಿಯನ್ ಡೆಲ್ಲಿ ವಿರುದ್ಧ ಇಂದು ಸೆಣಸಲಿದೆ.

ಭರತ್ ಮೇಲೆ ಭಾರ

ಬೆಂಗಳೂರು ತಂಡ ಲಿಂಗ್ ಹಂತದ ಕೊನೆಯ ಪಂದ್ಯದಲ್ಲಿ ಯು ಮುಂಬಾ ವಿರುದ್ಧ ಹೀನಾಯ ಸೋಲು ಕಂಡಿತು. ಬೆಂಗಳೂರಿನ ಭರವಸೆಯ ರೈಡರ್ ಭರತ್ ಅನುಪಸ್ಥಿತಿಯೇ ಅದಕ್ಕೆ ಪ್ರಮುಖ ಕಾರಣವಾಗಿತ್ತು. ಆ ಔಪಚಾರಿಕ ಪಂದ್ಯದಲ್ಲಿ ಭರತ್ ಸೇರಿದಂತೆ ಇತರ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಾಗಾಗಿ ಬೆಂಗಳೂರು ಸೋತಿತು. ಇಂದಿನ ಪಂದ್ಯದಲ್ಲಿ ಭರತ್ ಮಿಂಚಿದರೆ, ಡಿಫೆಂಡರ್‌ಗಳು ಉತ್ತರ ಆಟ ಪ್ರದರ್ಶಿಸಿದರೆ ಬೆಂಗಳೂರಿಗೆ ಗೆಲುವು ಖಚಿತ.

ದೆಹಲಿ ವಿರುದ್ಧದ ಪಂದ್ಯಗಳಲ್ಲಿ ಬೆಂಗಳೂರಿನ ಮೇನ್ ರೈಡರ್ ವಿಕಾಸ್ ಖಂಡೋಲ, ನೀರಜ್ ನರ್ವಾಲ್ ಸಹ ಉತ್ತಮ ಸಾಧನೆ ತೋರಿದ್ದಾರೆ. ಇಂದು ಯಾವ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.

ಇನ್ನೊಂದೆಡೆ ದಬಾಂಗ್ ಡೆಲ್ಲಿ ತಂಡದ ಪರವಾಗಿ ನವೀನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅವರಿಗೆ ಆಶು ಮಲ್ಲಿಕ್ ಮತ್ತು ವಿಜಯ್ ಮಲ್ಲಿಕ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಅವರನ್ನು ಕಟ್ಟಿಹಾಕಲು ಬೆಂಗಳೂರಿನ ಗೂಳಿಗಳು ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಗೆದ್ದರೆ ಡಿಸೆಂಬರ್ 15 ರಂದು ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ ಸೆಣಸಲಿದೆ.

ಯುಪಿ ಯೋಧ ವರ್ಸಸ್ ತಮಿಳು ತಲೈವಾಸ್

ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧ ತಂಡವನ್ನು ತಮಿಳು ತಲೈವಾಸ್ ಎದುರಿಸಲಿದೆ. ಎರಡೂ ತಂಡಗಳು ಸಹ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿವೆ. ಯುಪಿ ಯೋಧದ ಪರವಾಗಿ ಪರ್ದೀಪ್ ನರ್ವಾಲ್ ಪ್ರಮುಖ ರೈಡರ್. ಸರೇಂದರ್ ಗಿಲ್ ಅವರಿಗೆ ಸಾಥ್ ನೀಡುತ್ತಿದ್ದಾರೆ.  ಇನ್ನು ತಮಿಳು ತಲೈವಾದ್ ಪರವಾಗಿ ಅಜಿಂಕ್ಯ ಪವಾರ್ ಮತ್ತು ನರೇಂದರ್ ಉತ್ತಮ ರೈಡರ್‌ಗಳಾಗಿದ್ದಾರೆ. ಇಂದು ಗೆದ್ದ ತಂಡ ಡಿಸೆಂಬರ್ 15 ರಂದು ಪುಣೇರಿ ಪಲ್ಟನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುತ್ತದೆ. ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ; 2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...