Homeಸಿನಿಮಾಕ್ರೀಡೆರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

ರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

- Advertisement -
- Advertisement -

ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ 5 ತಂಡಗಳು ಪೈಪೋಟಿ ನಡೆಸುತ್ತಿವೆ. ಪ್ರತಿಯೊಂದು ತಂಡವೂ ಪ್ಲೇ-ಆಫ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. ಈ ನಡುವೆ ಗುರುವಾರ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವನ್ನೇನೋ ಸಾಧಿಸಿದೆ. ಆದರೂ ಪ್ಲೇ-ಆಫ್ ಪ್ರವೇಶ ಮಾತ್ರ ಇನ್ನೂ ಖಚಿತವಾಗಿಲ್ಲ. ಬದಲಾಗಿ ಇತರೆ ತಂಡಗಳ ಸೋಲು-ಗೆಲುವಿನ ಮೇಲೆ ಬುಲ್ಸ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(70 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ಗೆ ಬಹುತೇಕ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಆದರೆ 63 ಅಂಕಗಳನ್ನು ಗಳಿಸಿರುವ ಹರ್ಯಾಣ ಸ್ಟೀಲರ್ಸ್ ಮತ್ತು 62 ಅಂಕಗಳನ್ನು ಗಳಿಸಿರುವ ಪಿಂಕ್ ಪ್ಯಾಂಥರ್ಸ್ ಕ್ರಮವಾಗಿ ಐದು-ಆರನೇ ಸ್ಥಾನದಲ್ಲಿದ್ದು ಈ ತಂಡಗಳು ಇನ್ನೂ ಒಂದು ಪಂದ್ಯನ್ನು ಆಡಬೇಕಿದೆ. 60 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿರುವ ಪುಣೇರಿ ಪಲ್ಟನ್ ಮತ್ತು 57 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಇನ್ನೂ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಸೆಣಸಲಿದೆ. ಬೆಂಗಳೂರು ಬುಲ್ಸ್‌ನೊಂದಿಗೆ ಇಷ್ಟು ತಂಡಗಳು ಪ್ಲೇ-ಆಫ್‌ ಮೇಲೆ ಕಣ್ಣಿಟ್ಟಿವೆ.

photo courtesy: Pro kabaddi app

ಈ ತಂಡಗಳ ಪೈಕಿ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳಿಗೆ ಪ್ಲೇ-ಆಫ್ ಪ್ರವೇಶಿಸಲು ಸಾಕಷ್ಟು ಅವಕಾಶಗಳು ಇವೆ. ಒಂದು ವೇಳೆ ಈ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ನೀಡಿದರೆ ಬೆಂಗಳೂರು ಬುಲ್ಸ್ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತೆಯೇ. ಆದರೆ ಮೇಲಿನವುಗಳಲ್ಲಿ ಎರಡು ತಂಡಗಳು ಹೊರಹೋದರೆ ಬೆಂಗಳೂರಿಗೆ ಅವಕಾಶ ತೆರೆದುಕೊಳ್ಳುತ್ತದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ಕನಸು ನನಸಾಗಲು ಈ ತಂಡಗಳು ಸೋಲಬೇಕು

ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ಮತ್ತು ತಮಿಳು ತಲೈವಾಸ್ ವಿರುದ್ದ ತನ್ನ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಸದ್ಯ 57 ಅಂಕ ಹೊಂದಿರುವ ಅದು ಒಂದು ಪಂದ್ಯ ಸೋತರೂ ಪ್ಲೇ-ಆಫ್‌ ನಿಂದ ಹ ಹೊರ ಹೋಗುತ್ತದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸದ್ಯ 21 ಪಂದ್ಯಗಳಿಂದ 62 ಅಂಕ ಪಡೆದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಪುಣೇರಿ ಪಲ್ಟಾನ್ ವಿರುದ್ಧ ಎದುರಿಸಲಿದೆ. ಅಲ್ಲಿ ಸೋತರೆ ಅದು ಹೊರಬೀಳಲಿದೆ. ಏಕೆಂದರೆ ಪುಣೇರಿ ಪಲ್ಟಾನ್ ಈಗಾಗಲೇ 20 ಪಂದ್ಯಗಳಿಂದ 60 ಅಂಕ ಪಡೆದಿದೆ, ಒಂದು ಪಂದ್ಯ ಗೆದ್ದರೆ 65 ಅಂಕ ತನ್ನದಾಗಿಸಿಕೊಳ್ಳುತ್ತದೆ. ಅಲ್ಲದೆ ಇಂದು ಪುಣೇರಿ ಪಲ್ಟಾನ್ ಬೆಂಗಲ್ ವಾರಿಯರ್ಸ್ ವಿರುದ್ದ ಪಂದ್ಯವಾಡಲಿದ್ದು ಅದು ಗೆದ್ದರೆ ಪ್ಲೇ-ಆಫ್‌ ಸ್ಥಾನ ಖಚಿತ. ಎರಡೂ ಪಂದ್ಯ ಸೋತರೆ ಅದು ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಹರಿಯಾಣ ಸ್ಟೀಲರ್ಸ್‌ ಕೂಡ 21 ಪಂದ್ಯಗಳಿಂದ 63 ಅಂಕ ಪಡೆದಿದ್ದು ತನ್ನ ಕೊನೆಯ ಪಂದ್ಯವನ್ನು ಬಲಿಷ್ಟ ಪಟ್ನಾ ಪೈರೇಟ್ಸ್ ವಿರುದ್ಧ ಆಡಬೇಕಿದೆ. ಅಲ್ಲಿ ಗೆದ್ದರೆ ಪ್ಲೇ-ಆಫ್‌ ಖಚಿತ. ಸೋತರೆ ಬೇರೆ ತಂಡಗಳ ಸೋಲಿಗಾಗಿ ಕಾಯಬೇಕಿದೆ. ಫೆಬ್ರವರಿ 19ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನಗಳು ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...