Homeಸಿನಿಮಾಕ್ರೀಡೆರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

ರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

- Advertisement -
- Advertisement -

ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ 5 ತಂಡಗಳು ಪೈಪೋಟಿ ನಡೆಸುತ್ತಿವೆ. ಪ್ರತಿಯೊಂದು ತಂಡವೂ ಪ್ಲೇ-ಆಫ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. ಈ ನಡುವೆ ಗುರುವಾರ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವನ್ನೇನೋ ಸಾಧಿಸಿದೆ. ಆದರೂ ಪ್ಲೇ-ಆಫ್ ಪ್ರವೇಶ ಮಾತ್ರ ಇನ್ನೂ ಖಚಿತವಾಗಿಲ್ಲ. ಬದಲಾಗಿ ಇತರೆ ತಂಡಗಳ ಸೋಲು-ಗೆಲುವಿನ ಮೇಲೆ ಬುಲ್ಸ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(70 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ಗೆ ಬಹುತೇಕ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಆದರೆ 63 ಅಂಕಗಳನ್ನು ಗಳಿಸಿರುವ ಹರ್ಯಾಣ ಸ್ಟೀಲರ್ಸ್ ಮತ್ತು 62 ಅಂಕಗಳನ್ನು ಗಳಿಸಿರುವ ಪಿಂಕ್ ಪ್ಯಾಂಥರ್ಸ್ ಕ್ರಮವಾಗಿ ಐದು-ಆರನೇ ಸ್ಥಾನದಲ್ಲಿದ್ದು ಈ ತಂಡಗಳು ಇನ್ನೂ ಒಂದು ಪಂದ್ಯನ್ನು ಆಡಬೇಕಿದೆ. 60 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿರುವ ಪುಣೇರಿ ಪಲ್ಟನ್ ಮತ್ತು 57 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಇನ್ನೂ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಸೆಣಸಲಿದೆ. ಬೆಂಗಳೂರು ಬುಲ್ಸ್‌ನೊಂದಿಗೆ ಇಷ್ಟು ತಂಡಗಳು ಪ್ಲೇ-ಆಫ್‌ ಮೇಲೆ ಕಣ್ಣಿಟ್ಟಿವೆ.

photo courtesy: Pro kabaddi app

ಈ ತಂಡಗಳ ಪೈಕಿ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳಿಗೆ ಪ್ಲೇ-ಆಫ್ ಪ್ರವೇಶಿಸಲು ಸಾಕಷ್ಟು ಅವಕಾಶಗಳು ಇವೆ. ಒಂದು ವೇಳೆ ಈ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ನೀಡಿದರೆ ಬೆಂಗಳೂರು ಬುಲ್ಸ್ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತೆಯೇ. ಆದರೆ ಮೇಲಿನವುಗಳಲ್ಲಿ ಎರಡು ತಂಡಗಳು ಹೊರಹೋದರೆ ಬೆಂಗಳೂರಿಗೆ ಅವಕಾಶ ತೆರೆದುಕೊಳ್ಳುತ್ತದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ಕನಸು ನನಸಾಗಲು ಈ ತಂಡಗಳು ಸೋಲಬೇಕು

ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ಮತ್ತು ತಮಿಳು ತಲೈವಾಸ್ ವಿರುದ್ದ ತನ್ನ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಸದ್ಯ 57 ಅಂಕ ಹೊಂದಿರುವ ಅದು ಒಂದು ಪಂದ್ಯ ಸೋತರೂ ಪ್ಲೇ-ಆಫ್‌ ನಿಂದ ಹ ಹೊರ ಹೋಗುತ್ತದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸದ್ಯ 21 ಪಂದ್ಯಗಳಿಂದ 62 ಅಂಕ ಪಡೆದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಪುಣೇರಿ ಪಲ್ಟಾನ್ ವಿರುದ್ಧ ಎದುರಿಸಲಿದೆ. ಅಲ್ಲಿ ಸೋತರೆ ಅದು ಹೊರಬೀಳಲಿದೆ. ಏಕೆಂದರೆ ಪುಣೇರಿ ಪಲ್ಟಾನ್ ಈಗಾಗಲೇ 20 ಪಂದ್ಯಗಳಿಂದ 60 ಅಂಕ ಪಡೆದಿದೆ, ಒಂದು ಪಂದ್ಯ ಗೆದ್ದರೆ 65 ಅಂಕ ತನ್ನದಾಗಿಸಿಕೊಳ್ಳುತ್ತದೆ. ಅಲ್ಲದೆ ಇಂದು ಪುಣೇರಿ ಪಲ್ಟಾನ್ ಬೆಂಗಲ್ ವಾರಿಯರ್ಸ್ ವಿರುದ್ದ ಪಂದ್ಯವಾಡಲಿದ್ದು ಅದು ಗೆದ್ದರೆ ಪ್ಲೇ-ಆಫ್‌ ಸ್ಥಾನ ಖಚಿತ. ಎರಡೂ ಪಂದ್ಯ ಸೋತರೆ ಅದು ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಹರಿಯಾಣ ಸ್ಟೀಲರ್ಸ್‌ ಕೂಡ 21 ಪಂದ್ಯಗಳಿಂದ 63 ಅಂಕ ಪಡೆದಿದ್ದು ತನ್ನ ಕೊನೆಯ ಪಂದ್ಯವನ್ನು ಬಲಿಷ್ಟ ಪಟ್ನಾ ಪೈರೇಟ್ಸ್ ವಿರುದ್ಧ ಆಡಬೇಕಿದೆ. ಅಲ್ಲಿ ಗೆದ್ದರೆ ಪ್ಲೇ-ಆಫ್‌ ಖಚಿತ. ಸೋತರೆ ಬೇರೆ ತಂಡಗಳ ಸೋಲಿಗಾಗಿ ಕಾಯಬೇಕಿದೆ. ಫೆಬ್ರವರಿ 19ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನಗಳು ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...