Homeಸಿನಿಮಾಕ್ರೀಡೆರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

ರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

- Advertisement -
- Advertisement -

ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ 5 ತಂಡಗಳು ಪೈಪೋಟಿ ನಡೆಸುತ್ತಿವೆ. ಪ್ರತಿಯೊಂದು ತಂಡವೂ ಪ್ಲೇ-ಆಫ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. ಈ ನಡುವೆ ಗುರುವಾರ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವನ್ನೇನೋ ಸಾಧಿಸಿದೆ. ಆದರೂ ಪ್ಲೇ-ಆಫ್ ಪ್ರವೇಶ ಮಾತ್ರ ಇನ್ನೂ ಖಚಿತವಾಗಿಲ್ಲ. ಬದಲಾಗಿ ಇತರೆ ತಂಡಗಳ ಸೋಲು-ಗೆಲುವಿನ ಮೇಲೆ ಬುಲ್ಸ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(70 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ಗೆ ಬಹುತೇಕ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಆದರೆ 63 ಅಂಕಗಳನ್ನು ಗಳಿಸಿರುವ ಹರ್ಯಾಣ ಸ್ಟೀಲರ್ಸ್ ಮತ್ತು 62 ಅಂಕಗಳನ್ನು ಗಳಿಸಿರುವ ಪಿಂಕ್ ಪ್ಯಾಂಥರ್ಸ್ ಕ್ರಮವಾಗಿ ಐದು-ಆರನೇ ಸ್ಥಾನದಲ್ಲಿದ್ದು ಈ ತಂಡಗಳು ಇನ್ನೂ ಒಂದು ಪಂದ್ಯನ್ನು ಆಡಬೇಕಿದೆ. 60 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿರುವ ಪುಣೇರಿ ಪಲ್ಟನ್ ಮತ್ತು 57 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಇನ್ನೂ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಸೆಣಸಲಿದೆ. ಬೆಂಗಳೂರು ಬುಲ್ಸ್‌ನೊಂದಿಗೆ ಇಷ್ಟು ತಂಡಗಳು ಪ್ಲೇ-ಆಫ್‌ ಮೇಲೆ ಕಣ್ಣಿಟ್ಟಿವೆ.

photo courtesy: Pro kabaddi app

ಈ ತಂಡಗಳ ಪೈಕಿ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳಿಗೆ ಪ್ಲೇ-ಆಫ್ ಪ್ರವೇಶಿಸಲು ಸಾಕಷ್ಟು ಅವಕಾಶಗಳು ಇವೆ. ಒಂದು ವೇಳೆ ಈ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ನೀಡಿದರೆ ಬೆಂಗಳೂರು ಬುಲ್ಸ್ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತೆಯೇ. ಆದರೆ ಮೇಲಿನವುಗಳಲ್ಲಿ ಎರಡು ತಂಡಗಳು ಹೊರಹೋದರೆ ಬೆಂಗಳೂರಿಗೆ ಅವಕಾಶ ತೆರೆದುಕೊಳ್ಳುತ್ತದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ಕನಸು ನನಸಾಗಲು ಈ ತಂಡಗಳು ಸೋಲಬೇಕು

ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ಮತ್ತು ತಮಿಳು ತಲೈವಾಸ್ ವಿರುದ್ದ ತನ್ನ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಸದ್ಯ 57 ಅಂಕ ಹೊಂದಿರುವ ಅದು ಒಂದು ಪಂದ್ಯ ಸೋತರೂ ಪ್ಲೇ-ಆಫ್‌ ನಿಂದ ಹ ಹೊರ ಹೋಗುತ್ತದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸದ್ಯ 21 ಪಂದ್ಯಗಳಿಂದ 62 ಅಂಕ ಪಡೆದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಪುಣೇರಿ ಪಲ್ಟಾನ್ ವಿರುದ್ಧ ಎದುರಿಸಲಿದೆ. ಅಲ್ಲಿ ಸೋತರೆ ಅದು ಹೊರಬೀಳಲಿದೆ. ಏಕೆಂದರೆ ಪುಣೇರಿ ಪಲ್ಟಾನ್ ಈಗಾಗಲೇ 20 ಪಂದ್ಯಗಳಿಂದ 60 ಅಂಕ ಪಡೆದಿದೆ, ಒಂದು ಪಂದ್ಯ ಗೆದ್ದರೆ 65 ಅಂಕ ತನ್ನದಾಗಿಸಿಕೊಳ್ಳುತ್ತದೆ. ಅಲ್ಲದೆ ಇಂದು ಪುಣೇರಿ ಪಲ್ಟಾನ್ ಬೆಂಗಲ್ ವಾರಿಯರ್ಸ್ ವಿರುದ್ದ ಪಂದ್ಯವಾಡಲಿದ್ದು ಅದು ಗೆದ್ದರೆ ಪ್ಲೇ-ಆಫ್‌ ಸ್ಥಾನ ಖಚಿತ. ಎರಡೂ ಪಂದ್ಯ ಸೋತರೆ ಅದು ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಹರಿಯಾಣ ಸ್ಟೀಲರ್ಸ್‌ ಕೂಡ 21 ಪಂದ್ಯಗಳಿಂದ 63 ಅಂಕ ಪಡೆದಿದ್ದು ತನ್ನ ಕೊನೆಯ ಪಂದ್ಯವನ್ನು ಬಲಿಷ್ಟ ಪಟ್ನಾ ಪೈರೇಟ್ಸ್ ವಿರುದ್ಧ ಆಡಬೇಕಿದೆ. ಅಲ್ಲಿ ಗೆದ್ದರೆ ಪ್ಲೇ-ಆಫ್‌ ಖಚಿತ. ಸೋತರೆ ಬೇರೆ ತಂಡಗಳ ಸೋಲಿಗಾಗಿ ಕಾಯಬೇಕಿದೆ. ಫೆಬ್ರವರಿ 19ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನಗಳು ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...