Homeಸಿನಿಮಾಕ್ರೀಡೆರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

ರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

- Advertisement -
- Advertisement -

ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ 5 ತಂಡಗಳು ಪೈಪೋಟಿ ನಡೆಸುತ್ತಿವೆ. ಪ್ರತಿಯೊಂದು ತಂಡವೂ ಪ್ಲೇ-ಆಫ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. ಈ ನಡುವೆ ಗುರುವಾರ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವನ್ನೇನೋ ಸಾಧಿಸಿದೆ. ಆದರೂ ಪ್ಲೇ-ಆಫ್ ಪ್ರವೇಶ ಮಾತ್ರ ಇನ್ನೂ ಖಚಿತವಾಗಿಲ್ಲ. ಬದಲಾಗಿ ಇತರೆ ತಂಡಗಳ ಸೋಲು-ಗೆಲುವಿನ ಮೇಲೆ ಬುಲ್ಸ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(70 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ಗೆ ಬಹುತೇಕ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಆದರೆ 63 ಅಂಕಗಳನ್ನು ಗಳಿಸಿರುವ ಹರ್ಯಾಣ ಸ್ಟೀಲರ್ಸ್ ಮತ್ತು 62 ಅಂಕಗಳನ್ನು ಗಳಿಸಿರುವ ಪಿಂಕ್ ಪ್ಯಾಂಥರ್ಸ್ ಕ್ರಮವಾಗಿ ಐದು-ಆರನೇ ಸ್ಥಾನದಲ್ಲಿದ್ದು ಈ ತಂಡಗಳು ಇನ್ನೂ ಒಂದು ಪಂದ್ಯನ್ನು ಆಡಬೇಕಿದೆ. 60 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿರುವ ಪುಣೇರಿ ಪಲ್ಟನ್ ಮತ್ತು 57 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಇನ್ನೂ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಸೆಣಸಲಿದೆ. ಬೆಂಗಳೂರು ಬುಲ್ಸ್‌ನೊಂದಿಗೆ ಇಷ್ಟು ತಂಡಗಳು ಪ್ಲೇ-ಆಫ್‌ ಮೇಲೆ ಕಣ್ಣಿಟ್ಟಿವೆ.

photo courtesy: Pro kabaddi app

ಈ ತಂಡಗಳ ಪೈಕಿ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳಿಗೆ ಪ್ಲೇ-ಆಫ್ ಪ್ರವೇಶಿಸಲು ಸಾಕಷ್ಟು ಅವಕಾಶಗಳು ಇವೆ. ಒಂದು ವೇಳೆ ಈ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ನೀಡಿದರೆ ಬೆಂಗಳೂರು ಬುಲ್ಸ್ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತೆಯೇ. ಆದರೆ ಮೇಲಿನವುಗಳಲ್ಲಿ ಎರಡು ತಂಡಗಳು ಹೊರಹೋದರೆ ಬೆಂಗಳೂರಿಗೆ ಅವಕಾಶ ತೆರೆದುಕೊಳ್ಳುತ್ತದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ಕನಸು ನನಸಾಗಲು ಈ ತಂಡಗಳು ಸೋಲಬೇಕು

ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ಮತ್ತು ತಮಿಳು ತಲೈವಾಸ್ ವಿರುದ್ದ ತನ್ನ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಸದ್ಯ 57 ಅಂಕ ಹೊಂದಿರುವ ಅದು ಒಂದು ಪಂದ್ಯ ಸೋತರೂ ಪ್ಲೇ-ಆಫ್‌ ನಿಂದ ಹ ಹೊರ ಹೋಗುತ್ತದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸದ್ಯ 21 ಪಂದ್ಯಗಳಿಂದ 62 ಅಂಕ ಪಡೆದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಪುಣೇರಿ ಪಲ್ಟಾನ್ ವಿರುದ್ಧ ಎದುರಿಸಲಿದೆ. ಅಲ್ಲಿ ಸೋತರೆ ಅದು ಹೊರಬೀಳಲಿದೆ. ಏಕೆಂದರೆ ಪುಣೇರಿ ಪಲ್ಟಾನ್ ಈಗಾಗಲೇ 20 ಪಂದ್ಯಗಳಿಂದ 60 ಅಂಕ ಪಡೆದಿದೆ, ಒಂದು ಪಂದ್ಯ ಗೆದ್ದರೆ 65 ಅಂಕ ತನ್ನದಾಗಿಸಿಕೊಳ್ಳುತ್ತದೆ. ಅಲ್ಲದೆ ಇಂದು ಪುಣೇರಿ ಪಲ್ಟಾನ್ ಬೆಂಗಲ್ ವಾರಿಯರ್ಸ್ ವಿರುದ್ದ ಪಂದ್ಯವಾಡಲಿದ್ದು ಅದು ಗೆದ್ದರೆ ಪ್ಲೇ-ಆಫ್‌ ಸ್ಥಾನ ಖಚಿತ. ಎರಡೂ ಪಂದ್ಯ ಸೋತರೆ ಅದು ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಹರಿಯಾಣ ಸ್ಟೀಲರ್ಸ್‌ ಕೂಡ 21 ಪಂದ್ಯಗಳಿಂದ 63 ಅಂಕ ಪಡೆದಿದ್ದು ತನ್ನ ಕೊನೆಯ ಪಂದ್ಯವನ್ನು ಬಲಿಷ್ಟ ಪಟ್ನಾ ಪೈರೇಟ್ಸ್ ವಿರುದ್ಧ ಆಡಬೇಕಿದೆ. ಅಲ್ಲಿ ಗೆದ್ದರೆ ಪ್ಲೇ-ಆಫ್‌ ಖಚಿತ. ಸೋತರೆ ಬೇರೆ ತಂಡಗಳ ಸೋಲಿಗಾಗಿ ಕಾಯಬೇಕಿದೆ. ಫೆಬ್ರವರಿ 19ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನಗಳು ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...