Homeಸಿನಿಮಾಕ್ರೀಡೆರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

ರೋಚಕ ಘಟ್ಟ ತಲುಪಿದ ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಪ್ಲೇ-ಆಫ್ ಪ್ರವೇಶ ಸುಲಭವಲ್ಲ!

- Advertisement -
- Advertisement -

ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಇದೀಗ ರೋಚಕ ಘಟ್ಟ ತಲುಪಿದೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ 5 ತಂಡಗಳು ಪೈಪೋಟಿ ನಡೆಸುತ್ತಿವೆ. ಪ್ರತಿಯೊಂದು ತಂಡವೂ ಪ್ಲೇ-ಆಫ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. ಈ ನಡುವೆ ಗುರುವಾರ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆಲುವನ್ನೇನೋ ಸಾಧಿಸಿದೆ. ಆದರೂ ಪ್ಲೇ-ಆಫ್ ಪ್ರವೇಶ ಮಾತ್ರ ಇನ್ನೂ ಖಚಿತವಾಗಿಲ್ಲ. ಬದಲಾಗಿ ಇತರೆ ತಂಡಗಳ ಸೋಲು-ಗೆಲುವಿನ ಮೇಲೆ ಬುಲ್ಸ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(70 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ಗೆ ಬಹುತೇಕ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಆದರೆ 63 ಅಂಕಗಳನ್ನು ಗಳಿಸಿರುವ ಹರ್ಯಾಣ ಸ್ಟೀಲರ್ಸ್ ಮತ್ತು 62 ಅಂಕಗಳನ್ನು ಗಳಿಸಿರುವ ಪಿಂಕ್ ಪ್ಯಾಂಥರ್ಸ್ ಕ್ರಮವಾಗಿ ಐದು-ಆರನೇ ಸ್ಥಾನದಲ್ಲಿದ್ದು ಈ ತಂಡಗಳು ಇನ್ನೂ ಒಂದು ಪಂದ್ಯನ್ನು ಆಡಬೇಕಿದೆ. 60 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿರುವ ಪುಣೇರಿ ಪಲ್ಟನ್ ಮತ್ತು 57 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಇನ್ನೂ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಸೆಣಸಲಿದೆ. ಬೆಂಗಳೂರು ಬುಲ್ಸ್‌ನೊಂದಿಗೆ ಇಷ್ಟು ತಂಡಗಳು ಪ್ಲೇ-ಆಫ್‌ ಮೇಲೆ ಕಣ್ಣಿಟ್ಟಿವೆ.

photo courtesy: Pro kabaddi app

ಈ ತಂಡಗಳ ಪೈಕಿ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ತಂಡಗಳಿಗೆ ಪ್ಲೇ-ಆಫ್ ಪ್ರವೇಶಿಸಲು ಸಾಕಷ್ಟು ಅವಕಾಶಗಳು ಇವೆ. ಒಂದು ವೇಳೆ ಈ ತಂಡಗಳು ತಮ್ಮ ಮುಂದಿನ ಪಂದ್ಯಗಳಲ್ಲಿ ಗೆಲುವಿನ ಪ್ರದರ್ಶನ ನೀಡಿದರೆ ಬೆಂಗಳೂರು ಬುಲ್ಸ್ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತೆಯೇ. ಆದರೆ ಮೇಲಿನವುಗಳಲ್ಲಿ ಎರಡು ತಂಡಗಳು ಹೊರಹೋದರೆ ಬೆಂಗಳೂರಿಗೆ ಅವಕಾಶ ತೆರೆದುಕೊಳ್ಳುತ್ತದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ಕನಸು ನನಸಾಗಲು ಈ ತಂಡಗಳು ಸೋಲಬೇಕು

ಗುಜರಾತ್ ಜೈಂಟ್ಸ್ ತಂಡವು ಯು ಮುಂಬಾ ಮತ್ತು ತಮಿಳು ತಲೈವಾಸ್ ವಿರುದ್ದ ತನ್ನ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಸದ್ಯ 57 ಅಂಕ ಹೊಂದಿರುವ ಅದು ಒಂದು ಪಂದ್ಯ ಸೋತರೂ ಪ್ಲೇ-ಆಫ್‌ ನಿಂದ ಹ ಹೊರ ಹೋಗುತ್ತದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸದ್ಯ 21 ಪಂದ್ಯಗಳಿಂದ 62 ಅಂಕ ಪಡೆದಿದೆ. ಅದು ತನ್ನ ಕೊನೆಯ ಪಂದ್ಯವನ್ನು ಪುಣೇರಿ ಪಲ್ಟಾನ್ ವಿರುದ್ಧ ಎದುರಿಸಲಿದೆ. ಅಲ್ಲಿ ಸೋತರೆ ಅದು ಹೊರಬೀಳಲಿದೆ. ಏಕೆಂದರೆ ಪುಣೇರಿ ಪಲ್ಟಾನ್ ಈಗಾಗಲೇ 20 ಪಂದ್ಯಗಳಿಂದ 60 ಅಂಕ ಪಡೆದಿದೆ, ಒಂದು ಪಂದ್ಯ ಗೆದ್ದರೆ 65 ಅಂಕ ತನ್ನದಾಗಿಸಿಕೊಳ್ಳುತ್ತದೆ. ಅಲ್ಲದೆ ಇಂದು ಪುಣೇರಿ ಪಲ್ಟಾನ್ ಬೆಂಗಲ್ ವಾರಿಯರ್ಸ್ ವಿರುದ್ದ ಪಂದ್ಯವಾಡಲಿದ್ದು ಅದು ಗೆದ್ದರೆ ಪ್ಲೇ-ಆಫ್‌ ಸ್ಥಾನ ಖಚಿತ. ಎರಡೂ ಪಂದ್ಯ ಸೋತರೆ ಅದು ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಹರಿಯಾಣ ಸ್ಟೀಲರ್ಸ್‌ ಕೂಡ 21 ಪಂದ್ಯಗಳಿಂದ 63 ಅಂಕ ಪಡೆದಿದ್ದು ತನ್ನ ಕೊನೆಯ ಪಂದ್ಯವನ್ನು ಬಲಿಷ್ಟ ಪಟ್ನಾ ಪೈರೇಟ್ಸ್ ವಿರುದ್ಧ ಆಡಬೇಕಿದೆ. ಅಲ್ಲಿ ಗೆದ್ದರೆ ಪ್ಲೇ-ಆಫ್‌ ಖಚಿತ. ಸೋತರೆ ಬೇರೆ ತಂಡಗಳ ಸೋಲಿಗಾಗಿ ಕಾಯಬೇಕಿದೆ. ಫೆಬ್ರವರಿ 19ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನಗಳು ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...