Homeಮುಖಪುಟಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

ಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆಂಗಳೂರು ಬುಲ್ಸ್ ಇಂದು ರಾತ್ರಿ 8.30 ಕ್ಕೆ ನಡೆಯುವ ಎರಡನೇ ಸೆಮಿಫೈನಲ್ ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಅದ್ವಿತಿಯ ಪ್ರದರ್ಶನ ನೀಡಿರುವ ಬೆಂಗಳೂರು ಇಂದು ಗೆದ್ದಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಇಂದು ರಾತ್ರಿ 7.30ಕ್ಕೆ ಆರಂಭವಾಗುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಯು.ಪಿ ಯೋಧ ತಂಡವು ಪಟ್ನಾ ಪೈರೇಟ್ಸ್ ವಿರುದ್ದ ಸೆಣಸಲಿದೆ. ಇಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರಿಂದ ಪಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಿವೆ.

ಬೆಂಗಳೂರು ಬುಲ್ಸ್ ತಂಡ ಇದುವರೆಗಿನ ಎಂಟು ಆವೃತ್ತಿಗಳಲ್ಲಿ ಐದು ಬಾರಿ ಸೆಮಿಫೈನಲ್ ಪ್ರವೇಶಿಸಿ. ಆರನೇ ಆವೃತ್ತಿಯಲ್ಲಿ ಮಾತ್ರ ಫೈನಲ್ ಪ್ರವೇಶಿಸಿ ಗೆದ್ದು ಚಾಂಪಿಯನ್ ಆಗಿತ್ತು. ಕಳೆದ 7 ನೇ ಆವೃತ್ತಿಯಲ್ಲಿಯೂ ಸಹ ಬೆಂಗಳುರು ಬುಲ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮಣಿಸಿ ಸೆಮಿಫೈನಲ್ ತಲುಪಿತ್ತು.ಆದರೆ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಸೋಲನೊಪ್ಪಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ಬೆಂಗಳೂರಿಗೆ ಉತ್ತಮ ಅವಕಾಶವಿದೆ.

ಬೆಂಗಳೂರು ಬುಲ್ಸ್ ತಂಡ ಪವನ್ ಕುಮಾರ್ ಶೆಹ್ರಾವತ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪವನ್ 286 ರೈಡಿಂಗ್ ಅಂಕಗಳೊಂದಿಗೆ ಒಟ್ಟು 302 ಅಂಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರಿಗೆ ಭರತ್ ಮತ್ತು ಚಂದ್ರನ್ ರಂಜಿತ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನು ಡೆಫೆಂಡಿಂಗ್ ವಿಭಾಗದಲ್ಲಿಯೂ ಅಮನ್, ಸೌರಭ್ ನಂದಲ್ ಮತ್ತು ಮಹೀಂದ್ರ ಕುಮಾರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೆಹಲಿ ತಂಡದ ಪ್ರಮುಖ ರೈಡರ್ ನವೀನ್ ಕುಮಾರ್ ಗಾಯದಿಂದ ಬಳಲುತ್ತಿರುವುದು ಆ ತಂಡಕ್ಕೆ ತಲೆನೋವಾಗಿದೆ. ಅಲ್ಲದೆ ಲೀಗ್ ಹಂತದಲ್ಲಿ ಬೆಂಗಳೂರು-ಡೆಲ್ಲಿ ಮುಖಾಮುಖಿಯಲ್ಲಿ ಬೆಂಗಳೂರು ಮೊದಲ ಪಂದ್ಯವನ್ನು 39 ಪಾಯಿಂಟ್‌ಗಳ ಬೃಹತ್ ಅಂತರದಲ್ಲಿ ಗೆದ್ದಿತ್ತು. ಎರಡನೇ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹಾಗಾಗಿ ಇಂದು ಬೆಂಗಳೂರು ಬುಲ್ಸ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಈ ಆವೃತ್ತಿಯ 23 ಪಂದ್ಯಗಳಲ್ಲಿ ಪವನ್ 17 ಬಾರಿ 10ಕ್ಕಿಂತ ಹೆಚ್ಚು ರೈಡಿಂಗ್ ಅಂಕಗಳಿಸಿ ಮಿಂಚಿದ್ದಾರೆ. ಅವರಿಂದ ಮತ್ತೊಂದು ಸೂಪರ್ ಟೆನ್ ಬರಲಿದೆಯೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಇಂದು ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಪ್ರೊ ಕಬಡ್ಡಿ: ಗುಜರಾತ್ ಗೈಂಟ್ಸ್ ಮಣಿಸಿ ಸೆಮಿಫೈನಲ್ ತಲುಪಿದ ಬೆಂಗಳೂರು ಬುಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...