Homeಮುಖಪುಟಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

ಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆಂಗಳೂರು ಬುಲ್ಸ್ ಇಂದು ರಾತ್ರಿ 8.30 ಕ್ಕೆ ನಡೆಯುವ ಎರಡನೇ ಸೆಮಿಫೈನಲ್ ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಅದ್ವಿತಿಯ ಪ್ರದರ್ಶನ ನೀಡಿರುವ ಬೆಂಗಳೂರು ಇಂದು ಗೆದ್ದಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಇಂದು ರಾತ್ರಿ 7.30ಕ್ಕೆ ಆರಂಭವಾಗುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಯು.ಪಿ ಯೋಧ ತಂಡವು ಪಟ್ನಾ ಪೈರೇಟ್ಸ್ ವಿರುದ್ದ ಸೆಣಸಲಿದೆ. ಇಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರಿಂದ ಪಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಿವೆ.

ಬೆಂಗಳೂರು ಬುಲ್ಸ್ ತಂಡ ಇದುವರೆಗಿನ ಎಂಟು ಆವೃತ್ತಿಗಳಲ್ಲಿ ಐದು ಬಾರಿ ಸೆಮಿಫೈನಲ್ ಪ್ರವೇಶಿಸಿ. ಆರನೇ ಆವೃತ್ತಿಯಲ್ಲಿ ಮಾತ್ರ ಫೈನಲ್ ಪ್ರವೇಶಿಸಿ ಗೆದ್ದು ಚಾಂಪಿಯನ್ ಆಗಿತ್ತು. ಕಳೆದ 7 ನೇ ಆವೃತ್ತಿಯಲ್ಲಿಯೂ ಸಹ ಬೆಂಗಳುರು ಬುಲ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮಣಿಸಿ ಸೆಮಿಫೈನಲ್ ತಲುಪಿತ್ತು.ಆದರೆ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಸೋಲನೊಪ್ಪಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ಬೆಂಗಳೂರಿಗೆ ಉತ್ತಮ ಅವಕಾಶವಿದೆ.

ಬೆಂಗಳೂರು ಬುಲ್ಸ್ ತಂಡ ಪವನ್ ಕುಮಾರ್ ಶೆಹ್ರಾವತ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪವನ್ 286 ರೈಡಿಂಗ್ ಅಂಕಗಳೊಂದಿಗೆ ಒಟ್ಟು 302 ಅಂಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರಿಗೆ ಭರತ್ ಮತ್ತು ಚಂದ್ರನ್ ರಂಜಿತ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನು ಡೆಫೆಂಡಿಂಗ್ ವಿಭಾಗದಲ್ಲಿಯೂ ಅಮನ್, ಸೌರಭ್ ನಂದಲ್ ಮತ್ತು ಮಹೀಂದ್ರ ಕುಮಾರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೆಹಲಿ ತಂಡದ ಪ್ರಮುಖ ರೈಡರ್ ನವೀನ್ ಕುಮಾರ್ ಗಾಯದಿಂದ ಬಳಲುತ್ತಿರುವುದು ಆ ತಂಡಕ್ಕೆ ತಲೆನೋವಾಗಿದೆ. ಅಲ್ಲದೆ ಲೀಗ್ ಹಂತದಲ್ಲಿ ಬೆಂಗಳೂರು-ಡೆಲ್ಲಿ ಮುಖಾಮುಖಿಯಲ್ಲಿ ಬೆಂಗಳೂರು ಮೊದಲ ಪಂದ್ಯವನ್ನು 39 ಪಾಯಿಂಟ್‌ಗಳ ಬೃಹತ್ ಅಂತರದಲ್ಲಿ ಗೆದ್ದಿತ್ತು. ಎರಡನೇ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹಾಗಾಗಿ ಇಂದು ಬೆಂಗಳೂರು ಬುಲ್ಸ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಈ ಆವೃತ್ತಿಯ 23 ಪಂದ್ಯಗಳಲ್ಲಿ ಪವನ್ 17 ಬಾರಿ 10ಕ್ಕಿಂತ ಹೆಚ್ಚು ರೈಡಿಂಗ್ ಅಂಕಗಳಿಸಿ ಮಿಂಚಿದ್ದಾರೆ. ಅವರಿಂದ ಮತ್ತೊಂದು ಸೂಪರ್ ಟೆನ್ ಬರಲಿದೆಯೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಇಂದು ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಪ್ರೊ ಕಬಡ್ಡಿ: ಗುಜರಾತ್ ಗೈಂಟ್ಸ್ ಮಣಿಸಿ ಸೆಮಿಫೈನಲ್ ತಲುಪಿದ ಬೆಂಗಳೂರು ಬುಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...