Homeಮುಖಪುಟಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

ಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆಂಗಳೂರು ಬುಲ್ಸ್ ಇಂದು ರಾತ್ರಿ 8.30 ಕ್ಕೆ ನಡೆಯುವ ಎರಡನೇ ಸೆಮಿಫೈನಲ್ ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಅದ್ವಿತಿಯ ಪ್ರದರ್ಶನ ನೀಡಿರುವ ಬೆಂಗಳೂರು ಇಂದು ಗೆದ್ದಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಇಂದು ರಾತ್ರಿ 7.30ಕ್ಕೆ ಆರಂಭವಾಗುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಯು.ಪಿ ಯೋಧ ತಂಡವು ಪಟ್ನಾ ಪೈರೇಟ್ಸ್ ವಿರುದ್ದ ಸೆಣಸಲಿದೆ. ಇಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರಿಂದ ಪಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಿವೆ.

ಬೆಂಗಳೂರು ಬುಲ್ಸ್ ತಂಡ ಇದುವರೆಗಿನ ಎಂಟು ಆವೃತ್ತಿಗಳಲ್ಲಿ ಐದು ಬಾರಿ ಸೆಮಿಫೈನಲ್ ಪ್ರವೇಶಿಸಿ. ಆರನೇ ಆವೃತ್ತಿಯಲ್ಲಿ ಮಾತ್ರ ಫೈನಲ್ ಪ್ರವೇಶಿಸಿ ಗೆದ್ದು ಚಾಂಪಿಯನ್ ಆಗಿತ್ತು. ಕಳೆದ 7 ನೇ ಆವೃತ್ತಿಯಲ್ಲಿಯೂ ಸಹ ಬೆಂಗಳುರು ಬುಲ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮಣಿಸಿ ಸೆಮಿಫೈನಲ್ ತಲುಪಿತ್ತು.ಆದರೆ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಸೋಲನೊಪ್ಪಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ಬೆಂಗಳೂರಿಗೆ ಉತ್ತಮ ಅವಕಾಶವಿದೆ.

ಬೆಂಗಳೂರು ಬುಲ್ಸ್ ತಂಡ ಪವನ್ ಕುಮಾರ್ ಶೆಹ್ರಾವತ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪವನ್ 286 ರೈಡಿಂಗ್ ಅಂಕಗಳೊಂದಿಗೆ ಒಟ್ಟು 302 ಅಂಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರಿಗೆ ಭರತ್ ಮತ್ತು ಚಂದ್ರನ್ ರಂಜಿತ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನು ಡೆಫೆಂಡಿಂಗ್ ವಿಭಾಗದಲ್ಲಿಯೂ ಅಮನ್, ಸೌರಭ್ ನಂದಲ್ ಮತ್ತು ಮಹೀಂದ್ರ ಕುಮಾರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೆಹಲಿ ತಂಡದ ಪ್ರಮುಖ ರೈಡರ್ ನವೀನ್ ಕುಮಾರ್ ಗಾಯದಿಂದ ಬಳಲುತ್ತಿರುವುದು ಆ ತಂಡಕ್ಕೆ ತಲೆನೋವಾಗಿದೆ. ಅಲ್ಲದೆ ಲೀಗ್ ಹಂತದಲ್ಲಿ ಬೆಂಗಳೂರು-ಡೆಲ್ಲಿ ಮುಖಾಮುಖಿಯಲ್ಲಿ ಬೆಂಗಳೂರು ಮೊದಲ ಪಂದ್ಯವನ್ನು 39 ಪಾಯಿಂಟ್‌ಗಳ ಬೃಹತ್ ಅಂತರದಲ್ಲಿ ಗೆದ್ದಿತ್ತು. ಎರಡನೇ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹಾಗಾಗಿ ಇಂದು ಬೆಂಗಳೂರು ಬುಲ್ಸ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಈ ಆವೃತ್ತಿಯ 23 ಪಂದ್ಯಗಳಲ್ಲಿ ಪವನ್ 17 ಬಾರಿ 10ಕ್ಕಿಂತ ಹೆಚ್ಚು ರೈಡಿಂಗ್ ಅಂಕಗಳಿಸಿ ಮಿಂಚಿದ್ದಾರೆ. ಅವರಿಂದ ಮತ್ತೊಂದು ಸೂಪರ್ ಟೆನ್ ಬರಲಿದೆಯೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಇಂದು ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಪ್ರೊ ಕಬಡ್ಡಿ: ಗುಜರಾತ್ ಗೈಂಟ್ಸ್ ಮಣಿಸಿ ಸೆಮಿಫೈನಲ್ ತಲುಪಿದ ಬೆಂಗಳೂರು ಬುಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....