Homeಮುಖಪುಟಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

ಪ್ರೊ ಕಬಡ್ಡಿ ಸೆಮಿಫೈನಲ್ ಇಂದು: ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಸೇಡು ತೀರಿಸಿಕೊಳ್ಳುವುದೆ ಬೆಂಗಳೂರು ಬುಲ್ಸ್?

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಭರ್ಜರಿ ಜಯಗಳಿಸಿದ ಬೆಂಗಳೂರು ಬುಲ್ಸ್ ಇಂದು ರಾತ್ರಿ 8.30 ಕ್ಕೆ ನಡೆಯುವ ಎರಡನೇ ಸೆಮಿಫೈನಲ್ ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಕೊನೆಯ ಎರಡು ಪಂದ್ಯಗಳಲ್ಲಿ ಅದ್ವಿತಿಯ ಪ್ರದರ್ಶನ ನೀಡಿರುವ ಬೆಂಗಳೂರು ಇಂದು ಗೆದ್ದಲ್ಲಿ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಇಂದು ರಾತ್ರಿ 7.30ಕ್ಕೆ ಆರಂಭವಾಗುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಯು.ಪಿ ಯೋಧ ತಂಡವು ಪಟ್ನಾ ಪೈರೇಟ್ಸ್ ವಿರುದ್ದ ಸೆಣಸಲಿದೆ. ಇಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ.

ಲೀಗ್ ಹಂತದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರಿಂದ ಪಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಿವೆ.

ಬೆಂಗಳೂರು ಬುಲ್ಸ್ ತಂಡ ಇದುವರೆಗಿನ ಎಂಟು ಆವೃತ್ತಿಗಳಲ್ಲಿ ಐದು ಬಾರಿ ಸೆಮಿಫೈನಲ್ ಪ್ರವೇಶಿಸಿ. ಆರನೇ ಆವೃತ್ತಿಯಲ್ಲಿ ಮಾತ್ರ ಫೈನಲ್ ಪ್ರವೇಶಿಸಿ ಗೆದ್ದು ಚಾಂಪಿಯನ್ ಆಗಿತ್ತು. ಕಳೆದ 7 ನೇ ಆವೃತ್ತಿಯಲ್ಲಿಯೂ ಸಹ ಬೆಂಗಳುರು ಬುಲ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮಣಿಸಿ ಸೆಮಿಫೈನಲ್ ತಲುಪಿತ್ತು.ಆದರೆ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಸೋಲನೊಪ್ಪಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳಲು ಬೆಂಗಳೂರಿಗೆ ಉತ್ತಮ ಅವಕಾಶವಿದೆ.

ಬೆಂಗಳೂರು ಬುಲ್ಸ್ ತಂಡ ಪವನ್ ಕುಮಾರ್ ಶೆಹ್ರಾವತ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪವನ್ 286 ರೈಡಿಂಗ್ ಅಂಕಗಳೊಂದಿಗೆ ಒಟ್ಟು 302 ಅಂಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರಿಗೆ ಭರತ್ ಮತ್ತು ಚಂದ್ರನ್ ರಂಜಿತ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನು ಡೆಫೆಂಡಿಂಗ್ ವಿಭಾಗದಲ್ಲಿಯೂ ಅಮನ್, ಸೌರಭ್ ನಂದಲ್ ಮತ್ತು ಮಹೀಂದ್ರ ಕುಮಾರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೆಹಲಿ ತಂಡದ ಪ್ರಮುಖ ರೈಡರ್ ನವೀನ್ ಕುಮಾರ್ ಗಾಯದಿಂದ ಬಳಲುತ್ತಿರುವುದು ಆ ತಂಡಕ್ಕೆ ತಲೆನೋವಾಗಿದೆ. ಅಲ್ಲದೆ ಲೀಗ್ ಹಂತದಲ್ಲಿ ಬೆಂಗಳೂರು-ಡೆಲ್ಲಿ ಮುಖಾಮುಖಿಯಲ್ಲಿ ಬೆಂಗಳೂರು ಮೊದಲ ಪಂದ್ಯವನ್ನು 39 ಪಾಯಿಂಟ್‌ಗಳ ಬೃಹತ್ ಅಂತರದಲ್ಲಿ ಗೆದ್ದಿತ್ತು. ಎರಡನೇ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹಾಗಾಗಿ ಇಂದು ಬೆಂಗಳೂರು ಬುಲ್ಸ್ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಈ ಆವೃತ್ತಿಯ 23 ಪಂದ್ಯಗಳಲ್ಲಿ ಪವನ್ 17 ಬಾರಿ 10ಕ್ಕಿಂತ ಹೆಚ್ಚು ರೈಡಿಂಗ್ ಅಂಕಗಳಿಸಿ ಮಿಂಚಿದ್ದಾರೆ. ಅವರಿಂದ ಮತ್ತೊಂದು ಸೂಪರ್ ಟೆನ್ ಬರಲಿದೆಯೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಇಂದು ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಪ್ರೊ ಕಬಡ್ಡಿ: ಗುಜರಾತ್ ಗೈಂಟ್ಸ್ ಮಣಿಸಿ ಸೆಮಿಫೈನಲ್ ತಲುಪಿದ ಬೆಂಗಳೂರು ಬುಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...