Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...