Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು - ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು – ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

- Advertisement -
- Advertisement -

ಪುಣೇರಿ ಪಲ್ಟನ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳ ವಿರುದ್ಧ ಕಡೆ ನಿಮಿಷಗಳಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡಿದ್ದ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸುವ (52-49) ಮೂಲಕ ಮತ್ತೆ ಜಯದ ಹಾದಿಗೆ ಮರಳಿದೆ. ಆ ಮೂಲಕ ಪ್ರೇ ಆಫ್ ಹಂತಕ್ಕೆ ಪ್ರವೇಶ ಪಡೆಯಲು ಇನ್ನು ಎರಡೇ ಹೆಜ್ಜೆ ಬಾಕಿಯಿದೆ.

ಭಾನುವಾರ ರಾತ್ರಿ ಹೈದರಾಬಾದ್‌ನ ಗಚಿಬೋಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೆ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡವನ್ನು ಮೂರು ಅಂಕಗಳಿಂದ ಬಗ್ಗು ಬಡಿಯಿತು. ಒಂದು ಹಂತದಲ್ಲಿ ದೆಹಲಿಗಿಂತ 13 ಅಂಕ ಹಿಂದಿದ್ದ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಭರತ್ ನೀಡಿದ ಭರ್ಜರಿ ಪ್ರದರ್ಶನ ಬಲದಿಂದ ಪ್ರಬಲ ಕಮ್ ಬ್ಯಾಕ್ ಮಾಡಿ ಜಯ ಒಲಿಸಿಕೊಂಡಿತು. 24 ರೈಡ್‌ಗಳಿಂದ 23 ರೈಡ್ ಗಳಿಸಿದ ಭರತ್ ಹೂಡಾ ಪ್ಲೇಯರ್ ಆಫ್‌ ದಿ ಮ್ಯಾಚ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರೈಡ್ ಪಾಯಿಂಟ್ ಗಳಿಸಿದ (219) ಮೊದಲಿಗರಾದರು.

ಪಂದ್ಯದ ಗತಿ ಬದಲಿಸಿದ ವಿಕಾಸ್ ಖಂಡೋಲ

ಬೆಂಗಳೂರು ಬುಲ್ಸ್ ತಂಡದ ಮುಖ್ಯ ರೈಡರ್ ವಿಕಾಸ್ ಖಂಡೋಲ ಸಾಧರಣ ಪ್ರದರ್ಶನಕ್ಕೆ ಸೀಮಿತಗೊಂಡಿದ್ದರು. ಆದರೆ ದಬಾಂಗ್ ಡೆಲ್ಲಿ ವಿರುದ್ಧ ಅವರು ಮಾಡಿದ ಸೂಪರ್ ರೈಡ್ (ಒಂದೇ ರೈಡ್‌ನಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸುವುದು) ಪಂದ್ಯದ ಗತಿಯನ್ನೆ ಬದಲಿಸಿತು. ಪಂದ್ಯದ ಆರಂಭದಿಂದಲೂ ಪಾರಮ್ಯ ಮೆರೆದಿದ್ದ ದೆಹಲಿ ತಂಡ ಮೊದಲಾರ್ಧ ಮುಗಿಯುವ ಹೊತ್ತಿಗೆ 12 ಪಾಯಿಂಟ್ ಲೀಡ್ ಪಡೆದಿತ್ತು. ಆದರೆ ಮೊದಲಾರ್ಧದ ಕೊನೆಯ ರೈಡ್ ಮಾಡಿದ ವಿಕಾಸ್ ಒಂದೇ ರೈಡ್‌ನಲ್ಲಿ ಮೂರು ಜನರನ್ನು ಔಟ್ ಮಾಡುವ ಮೂಲಕ ಅಂತರವನ್ನು ಕೇವಲ 9 ಪಾಯಿಂಟ್‌ಗೆ ಇಳಿಸಿದರೂ ಮಾತ್ರವಲ್ಲ ಮೂರು ಜನರನ್ನು ಕೋರ್ಟ್‌ನಿಂದ ಹೊರಹಾಕಿದರು. ಇದು ಪಂದ್ಯದ ಗತಿಯನ್ನೇ ಬದಲಿಸಿತು. ವಿಕಾಸ್ ಖಂಡೋಲ 14 ರೈಡ್‌ಗಳಿಂದ 10 ಪಾಯಿಂಟ್ ಗಳಿಸಿ ಈ ಆವೃತ್ತಿಯಲ್ಲಿ ತಮ್ಮ 3ನೇ ಸೂಪರ್ ಟೆನ್ ಗಳಿಸಿದರು.

ದ್ವಿತಿಯಾರ್ಧದಲ್ಲಿ ಗೂಳಿಯಂತೆ ಆರ್ಭಟಿಸಿದ ಭರತ್

ಮೊದಲಾರ್ಧದಲ್ಲಿ ಪದೇ ಪದೇ ಔಟ್ ಆಗಿ 10 ನಿಮಿಷಕ್ಕಿಂತ ಹೆಚ್ಚು ಕಾಲ ಕೋರ್ಟ್‌ನಿಂದ ಹೊರಗುಳಿದಿದ್ದ ಭರತ್ ದ್ವಿತಿಯಾರ್ಧದಲ್ಲಿ ಮಿಂಚಿದರು. ತಮ್ಮ ರನ್ನಿಂಗ್ ಹ್ಯಾಂಡ್ ಟಚ್ ಸ್ಕಿಲ್ ಮೂಲಕ ದ್ವೀತಿಯಾರ್ಧದ ಕೇವಲ 2 ನಿಮಿಷದಲ್ಲಿ ದೆಹಲಿಯನ್ನು ಆಲೌಟ್ ಮಾಡಿದರು. ಹಾಗಾಗಿ ಅಂತರ ಕೇವಲ 5 ಅಂಕಕ್ಕೆ ಇಳಿಯಿತು.

ಆದರೆ ಮತ್ತೊಂದು ಕಡೆ ಬೆಂಗಳೂರು ಬುಲ್ಸ್ ಡಿಫೆಂಡರ್‌ಗಳು ಕೈಚೆಲ್ಲಿದ ಕಾರಣ ಮತ್ತೊಮ್ಮೆ ಬೆಂಗಳೂರು ಆಲೌಟ್ ಆಗಬೇಕಾಯಿತು. ಆಗ ದೆಹಲಿ 36 ಪಾಯಿಂಟ್ ಇದ್ದರೆ ಬೆಂಗಳೂರು ಕೇವಲ 25 ಪಾಯಿಂಟ್ ಇತ್ತು. ಅಂತರ ಮತ್ತೆ 11 ಪಾಯಿಂಟ್‌ಗಳಿಗೇರಿತ್ತು. ಆದರೆ ಕೊನೆಯ ಹತ್ತು ನಿಮಿಷ ಇರುವಂತೆ ಭರತ್ ಸಿಡಿದೆದ್ದರು. ಕೇವಲ 5-10 ಸೆಕೆಂಡ್‌ಗಳ ರೈಡ್‌ಗಳಲ್ಲಿಯೇ ಪಾಯಿಂಟ್ ಗಳಿಸಿದರು. ಕಡೆಯ 4 ನಿಮಿಷದ ಆಟ ಇರುವಂತೆ ಡೆಲ್ಲಿ ಮತ್ತೆ ಆಲೌಟ್‌ ಆಯ್ತು. ಆದರೂ ದೆಹಲಿ ಮೂರು ಪಾಯಿಂಟ್‌ಗಳಿಂದ ಮುಂದಿತ್ತು. ಆದರೆ ಭರತ್ ಛಲಬಿಡದೆ ಆಡಿ ಗೂಳಿಯಂತೆ ಆರ್ಭಟಿಸಿದರು. ಸತತ ಎರಡು ಮಲ್ಟಿ ಪಾಯಿಟ್ ರೈಡ್ ಮಾಡಿ ದಬಾಂಗ್ ಡೆಲ್ಲಿ ಕೋರ್ಟ್ ಖಾಲಿ ಮಾಡಿಸಿದರು. ಕೊನೆಯ ಡು ಆರ್ ಡೈ ನಲ್ಲಿಯೂ ಒಂದು ಪಾಯಿಂಟ್ ಹೆಕ್ಕಿ ಮೂರು ಪಾಯಿಂಟ್‌ಗಳ ಗೆಲುವಿನ ಸಂಭ್ರಮ ಆಚರಿಸಿದರು.

23 ರೈಡ್ ಪಾಯಿಂಟ್ ಗಳಿಸಿದ ಭರತ್ ಒಂದೇ ಪಂದ್ಯದಲ್ಲಿ ಅತಿ ಹೆಚ್ಚು ಪಾಯಿಂಟ್ ಗಳಿಸಿದ ತಮ್ಮ ದಾಖಲೆಯನ್ನು ಉತ್ತಮಪಡಿಸಿಕೊಂಡರು. ಹಿಂದಿನ ದಬಾಂಗ್ ಡೆಲ್ಲಿ ವಿರುದ್ಧದ ಪಂದ್ಯದಲ್ಲಿಯೂ ಅವರು 20 ಪಾಯಿಂಟ್ ಗಳಿಸಿದ್ದರು.

ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು

ಇದುವರೆಗೆ ಆಡಿದ 18 ಪಂದ್ಯಗಳಲ್ಲಿ 11 ಗೆಲುವು, 6 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನೊಂದಿಗೆ ಪ್ಲೇ ಆಫ್‌ ಕಡೆ ಮುಖ ಮಾಡಿದೆ. ಪುಣೇರಿ ಪಲ್ಟಾನ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿ ಅಥವಾ ಮೊದಲ ಸ್ಥಾನದಲ್ಲಿ ಉಳಿದುಕೊಂಡರೆ ಮಾತ್ರ ಅದು ನೇರವಾಗಿ ಸೆಮಿಫೈನಲ್ ತಲುಪಲು ಸಾಧ್ಯ. ಆದರೆ ಕೇವಲ 17 ಪಂದ್ಯಗಳಲ್ಲಿ 59 ಅಂಕ ಗಳಿಸಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಎರಡನೇ ಸ್ಥಾನಕ್ಕೆ ಸವಾಲೊಡ್ಡುತ್ತಿದೆ.

ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಮುಂದಿನ ಬುಧವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಎರಡನೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 4 ಪಂದ್ಯಗಳು ಬಾಕಿ ಇವೆ. ಈ ನಾಲ್ಕರಲ್ಲಿ ಎರಡು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 3 ಅಥವಾ ನಾಲ್ಕೂ ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...