Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...