Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...