Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...