Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...