Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...