Homeಕರ್ನಾಟಕಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ...

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ ಚಲೋ

- Advertisement -
- Advertisement -

2020ರ ಡಿಸಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್‌ಡಿಪಿಐ ಕಾರ್ಯಕರ್ತರು ಜಯಶಾಲಿಯಾದ ತಮ್ಮ ಅಭ್ಯರ್ಥಿಗಳ ಪರ ಸಂಭ್ರಮಾಚರಣೆಯಲ್ಲಿ ತೊಡಗಿರುವಾಗ ಸಂಘಪರಿವಾರದ ಬೆಂಬಲಿಗನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದು ವರದಿಯಾಗಿತ್ತು. ಆತನ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ನಾಳೆ ಶುಕ್ರವಾರ ಎಸ್‌ಡಿಪಿಐ ವತಿಯಿಂದ ಎಸ್.ಪಿ ಕಛೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆದರೆ ಆ ಸಂದರ್ಭದಲ್ಲಿ ನಮ್ಮ ಕಾಯಕರ್ತರು ಪಾಕ್ ಪರ ಘೋಷಣ್ ಕೂಗಿದ್ದಾರೆ ಎಂಬ ಸುಳ್ಳು ವರದಿಯೊಂದನ್ನು ದಿಗ್ವಿಜಯ ನ್ಯೂಸ್ ಎಂಬ ಕನ್ನಡ ಟಿವಿ ಚಾನೆಲೊಂದು ಪ್ರಸಾರ ಮಾಡಿತ್ತು. ಆ ಕೂಡಲೇ ನಮ್ಮ ಪಕ್ಷದ ಸ್ಥಳೀಯ ನಾಯಕರು ಈ ಬಗ್ಗೆ ದಿಗ್ವಿಜಯ ನ್ಯೂಸ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರನ್ನು ನೀಡಿದರೂ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರು. ಆ ನಂತರ ಪೊಲೀಸರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಅಂದು ರಾತ್ರಿ 12 ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ಅವರಲ್ಲಿ 3 ಮಂದಿಯ ವಿರುದ್ದ ದೇಶದ್ರೋಹದ ಕೇಸು ದಾಖಲಿಸಿದ್ದಾರೆ ಎಂದು SDPI ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ದೂರಿದ್ದಾರೆ.

ಈ ಘಟನೆಯ ಹಿಂದೆ ಸಂಘಪರಿವಾರ ಹಾಗೂ ದಿಗ್ವಿಜಯ ಚಾನೆಲ್‌ನ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂಬ ಸಂಶಯಗಳು ಗಾಢವಾಗಿ ಕಾಡತೊಡಗಿದವು. ಇದೇ ಸಂದರ್ಭದಲ್ಲಿ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗಡೆ ಕೇಸರಿ ಧ್ವಜವನ್ನು ಹಿಡಿದಿದ್ದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರು ಪಾಕ್ ಪರವಾಗಿ ಘೋಷಣೆ ಕೂಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದೆ ಎಂದು ಅವರು ತಿಳಿಸಿದ್ದಾರೆ.

ಇದರ ವಿರುದ್ಧ ನಾವು ಜನವರಿ 7 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಮುಂದೆ ಮುಷ್ಕರವನ್ನು ಹಮ್ಮಿಕೊಂಡಿದ್ದ ಸಂಧರ್ಭದಲ್ಲಿ ಅಲ್ಲಿಗೆ ಬಂದ ಉನ್ನತ ಪೊಲೀಸ್ ಅಧಿಕಾರಿಗಳು ನಮ್ಮ ನಾಯಕರೊಂದಿಗೆ ಮಾತುಕತೆ ನಡೆಸಿ ನಮ್ಮಿಂದ ತಪ್ಪಾಗಿದೆ, ನಮಗೆ ನಾಲ್ಕು ದಿನ ಕಾಲಾವಕಾಶ ಕೊಡಿ, ಖಂಡಿತ ನಾವು ನೈಜ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ ಯಾವುದೇ ಬಂಧನವಾಗಿಲ್ಲ ಎಂದು ಅನ್ವರ್ ಸಾದತ್ ಬಜತ್ತೂರು ದೂರಿದ್ದಾರೆ.

ಬಂಧಿಸಿರುವ ಅಮಾಯಕರಾದ ಮೂರು ಮಂದಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು, ನೈಜ ಆರೋಪಿಗಳಾದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಬೇಕು ಹಾಗೂ ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕ ಯುವಕರನ್ನು ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ನಾಳೆ ಹೋರಾಟ ನಡೆಯಲಿದೆ.

ನಾಳೆ ಮಧ್ಯಾಹ್ನ 2.30ಕ್ಕೆ ಕ್ಲಾಕ್‌ ಟವರ್ ಬಳಿಯಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಎಸ್‌ಪಿ ಕಚೇರಿವರೆಗೂ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...