Homeಕರ್ನಾಟಕಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ...

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ ಚಲೋ

- Advertisement -
- Advertisement -

2020ರ ಡಿಸಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್‌ಡಿಪಿಐ ಕಾರ್ಯಕರ್ತರು ಜಯಶಾಲಿಯಾದ ತಮ್ಮ ಅಭ್ಯರ್ಥಿಗಳ ಪರ ಸಂಭ್ರಮಾಚರಣೆಯಲ್ಲಿ ತೊಡಗಿರುವಾಗ ಸಂಘಪರಿವಾರದ ಬೆಂಬಲಿಗನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದು ವರದಿಯಾಗಿತ್ತು. ಆತನ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ನಾಳೆ ಶುಕ್ರವಾರ ಎಸ್‌ಡಿಪಿಐ ವತಿಯಿಂದ ಎಸ್.ಪಿ ಕಛೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆದರೆ ಆ ಸಂದರ್ಭದಲ್ಲಿ ನಮ್ಮ ಕಾಯಕರ್ತರು ಪಾಕ್ ಪರ ಘೋಷಣ್ ಕೂಗಿದ್ದಾರೆ ಎಂಬ ಸುಳ್ಳು ವರದಿಯೊಂದನ್ನು ದಿಗ್ವಿಜಯ ನ್ಯೂಸ್ ಎಂಬ ಕನ್ನಡ ಟಿವಿ ಚಾನೆಲೊಂದು ಪ್ರಸಾರ ಮಾಡಿತ್ತು. ಆ ಕೂಡಲೇ ನಮ್ಮ ಪಕ್ಷದ ಸ್ಥಳೀಯ ನಾಯಕರು ಈ ಬಗ್ಗೆ ದಿಗ್ವಿಜಯ ನ್ಯೂಸ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರನ್ನು ನೀಡಿದರೂ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರು. ಆ ನಂತರ ಪೊಲೀಸರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಅಂದು ರಾತ್ರಿ 12 ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ಅವರಲ್ಲಿ 3 ಮಂದಿಯ ವಿರುದ್ದ ದೇಶದ್ರೋಹದ ಕೇಸು ದಾಖಲಿಸಿದ್ದಾರೆ ಎಂದು SDPI ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ದೂರಿದ್ದಾರೆ.

ಈ ಘಟನೆಯ ಹಿಂದೆ ಸಂಘಪರಿವಾರ ಹಾಗೂ ದಿಗ್ವಿಜಯ ಚಾನೆಲ್‌ನ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂಬ ಸಂಶಯಗಳು ಗಾಢವಾಗಿ ಕಾಡತೊಡಗಿದವು. ಇದೇ ಸಂದರ್ಭದಲ್ಲಿ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗಡೆ ಕೇಸರಿ ಧ್ವಜವನ್ನು ಹಿಡಿದಿದ್ದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರು ಪಾಕ್ ಪರವಾಗಿ ಘೋಷಣೆ ಕೂಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದೆ ಎಂದು ಅವರು ತಿಳಿಸಿದ್ದಾರೆ.

ಇದರ ವಿರುದ್ಧ ನಾವು ಜನವರಿ 7 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಮುಂದೆ ಮುಷ್ಕರವನ್ನು ಹಮ್ಮಿಕೊಂಡಿದ್ದ ಸಂಧರ್ಭದಲ್ಲಿ ಅಲ್ಲಿಗೆ ಬಂದ ಉನ್ನತ ಪೊಲೀಸ್ ಅಧಿಕಾರಿಗಳು ನಮ್ಮ ನಾಯಕರೊಂದಿಗೆ ಮಾತುಕತೆ ನಡೆಸಿ ನಮ್ಮಿಂದ ತಪ್ಪಾಗಿದೆ, ನಮಗೆ ನಾಲ್ಕು ದಿನ ಕಾಲಾವಕಾಶ ಕೊಡಿ, ಖಂಡಿತ ನಾವು ನೈಜ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ ಯಾವುದೇ ಬಂಧನವಾಗಿಲ್ಲ ಎಂದು ಅನ್ವರ್ ಸಾದತ್ ಬಜತ್ತೂರು ದೂರಿದ್ದಾರೆ.

ಬಂಧಿಸಿರುವ ಅಮಾಯಕರಾದ ಮೂರು ಮಂದಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು, ನೈಜ ಆರೋಪಿಗಳಾದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಬೇಕು ಹಾಗೂ ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕ ಯುವಕರನ್ನು ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ನಾಳೆ ಹೋರಾಟ ನಡೆಯಲಿದೆ.

ನಾಳೆ ಮಧ್ಯಾಹ್ನ 2.30ಕ್ಕೆ ಕ್ಲಾಕ್‌ ಟವರ್ ಬಳಿಯಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಎಸ್‌ಪಿ ಕಚೇರಿವರೆಗೂ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...