Homeಅಂತರಾಷ್ಟ್ರೀಯಇಸ್ರೇಲ್‌ಗೆ ಅಮೆರಿಕದ ನೆರವು ಸ್ಥಗಿತಗೊಳಿಸಿ: ಶ್ವೇತಭವನದ ಹೊರಗೆ ಪ್ಯಾಲೆಸ್ತೀನ್‌ ಪರ ಬೃಹತ್‌ ಪ್ರತಿಭಟನೆ

ಇಸ್ರೇಲ್‌ಗೆ ಅಮೆರಿಕದ ನೆರವು ಸ್ಥಗಿತಗೊಳಿಸಿ: ಶ್ವೇತಭವನದ ಹೊರಗೆ ಪ್ಯಾಲೆಸ್ತೀನ್‌ ಪರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಖಂಡಿಸಿ ಅಮೆರಿಕದ ಶ್ವೇತಭವನದ ಹೊರಗೆ ಫೆಲೆಸ್ತೀನ್ ಪರ ಬೃಹತ್‌ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಇಸ್ರೇಲ್‌ಗೆ ನೆರವು ಸ್ಥಗಿತಗೊಳಿಸುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಶ್ವೇತಭವನದ ಹೊರಗೆ 30,000ಕ್ಕೂ ಅಧಿಕ ಪ್ರತಿಭಟನಾಕಾರರು ಜಮಾಯಿಸಿ  ಇಸ್ರೇಲ್-ಗಾಝಾ ನಡುವಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದು, ಇಸ್ರೇಲ್‌ಗೆ ಜೋ ಬಿಡನ್ ನೇತೃತ್ವದ ಆಡಳಿತದ ಬೆಂಬಲವನ್ನು ವಿರೋಧಿಸಿದ್ದಾರೆ.

ಪ್ರತಿಭಟನೆಯ ಹಲವು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪ್ರತಿಭಟನಾಕಾರರು ಕೆಂಪು ಬಟ್ಟೆಗಳನ್ನು ಧರಿಸಿ, ಗಾಝಾ ಮೇಲಿನ ಆಕ್ರಮಣವನ್ನು ನಿಲ್ಲಿಸಿ, ಫ್ರೀ ಪ್ಯಾಲೆಸ್ತೀನ್‌, ಇಸ್ರೇಲ್‌ಗೆ ಯುಎಸ್ ಮಿಲಿಟರಿ ಧನಸಹಾಯವನ್ನು ಕೊನೆಗೊಳಿಸಿ ಎಂದು ಬರೆದಿರುವ ಸಂದೇಶ ಫಲಕಗಳನ್ನು ಹಿಡಿದಿದ್ದರು.

ಕೆಲವು ಪ್ರತಿಭಟನಾಕಾರರು ಶ್ವೇತಭವನದ ಸುತ್ತಲೂ ಸಾಲಾಗಿ ನಿಂತುಕೊಂಡು ಎರಡು ಮೈಲಿ ಉದ್ದದ ಕೆಂಪು ಬಣ್ಣದ ಬ್ಯಾನರ್‌ ಹಿಡಿದುಕೊಂಡಿದ್ದಾರೆ. ಇದು ಇಸ್ರೇಲ್‌ ರಫಾ ಮೇಲೆ ಆಕ್ರಮಣ ನಡೆಸುವ ಮೂಲಕ ‘ಕೆಂಪು ಗೆರೆ’ಯನ್ನು ದಾಟಿದೆ ಎಂಬುವುದನ್ನು ಬಿಂಬಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿನ ಕೆಲವು ವೀಡಿಯೊಗಳು ಕೆಲವು ಪ್ರತಿಭಟನಾಕಾರರು  ಶ್ವೇತಭವನದ ಗೇಟ್‌ಗಳ ಹೊರಗೆ ಹೊಗೆಯ ಜ್ವಾಲೆಗಳನ್ನು ಬಿಡುವುದನ್ನು ತೋರಿಸಿದೆ.

ಇದುವರೆಗೆ ಯಾವುದೇ ಪ್ರತಿಭಟನಾಕಾರರನ್ನು ಬಂಧಿಸಿಲ್ಲ. ಶ್ವೇತಭವನಕ್ಕೆ ನೇರವಾಗಿ ಹೋಗುವ ಮಾರ್ಗದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯು ಮುಖ್ಯವಾಗಿ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ ಎಂದು ವಾಷಿಂಗ್ಟನ್ ಡಿಸಿ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ತಿಳಿಸಿದೆ. ಪ್ರತಿಭಟನೆಯ ವೇಳೆ ಜೋ ಬಿಡೆನ್ ಮತ್ತು ಅವರ ಪತ್ನಿ ಶ್ವೇತ ಭವನದಲ್ಲಿರಲಿಲ್ಲ. ಅವರು ಪ್ರಾನ್ಸ್‌ ಪ್ರವಾಸದಲ್ಲಿದ್ದರು.

ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾದ ಮೇಲೆ ವಾಯು ಮತ್ತು ಭೂ ಮಾರ್ಗದಲ್ಲಿ ದಾಳಿಯನ್ನು ಪ್ರಾರಂಭಿಸಿದ ಬಳಿಕೆ ಗಾಝಾದಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಕನಿಷ್ಠ 36,700 ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಗಾಝಾದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ರಫಾವನ್ನು ಗಾಝಾದಲ್ಲಿನ ಪ್ಯಾಲೆಸ್ತೀನ್‌ ನಾಗರಿಕರ ಕೊನೆಯ ಆಶ್ರಯವೆಂದು ಪರಿಗಣಿಸಲಾಗಿತ್ತು. ಆದರೆ ರಾಫಾದಲ್ಲಿನ ಶಿಬಿರಗಳ ಮೇಲೆ ಕೂಡ ಇಸ್ರೇಲ್‌ ದಾಳಿ ನಡೆಸಿ ನಾಗರಿಕರ ಹತ್ಯಾಕಾಂಡವನ್ನು ನಡೆಸಿದೆ.

ಇದನ್ನು ಓದಿ: ಸಂಸದ ಅನ್ವರುಲ್ ಅಝೀಂ ಹತ್ಯೆ ಪ್ರಕರಣ: ಕಾಲುವೆಯೊಂದರ ಬಳಿ ಮೂಳೆಗಳನ್ನು ಪತ್ತೆ ಹಚ್ಚಿದ ತನಿಖಾಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...