Homeಅಂತರಾಷ್ಟ್ರೀಯಇಸ್ರೇಲ್‌ಗೆ ಅಮೆರಿಕದ ನೆರವು ಸ್ಥಗಿತಗೊಳಿಸಿ: ಶ್ವೇತಭವನದ ಹೊರಗೆ ಪ್ಯಾಲೆಸ್ತೀನ್‌ ಪರ ಬೃಹತ್‌ ಪ್ರತಿಭಟನೆ

ಇಸ್ರೇಲ್‌ಗೆ ಅಮೆರಿಕದ ನೆರವು ಸ್ಥಗಿತಗೊಳಿಸಿ: ಶ್ವೇತಭವನದ ಹೊರಗೆ ಪ್ಯಾಲೆಸ್ತೀನ್‌ ಪರ ಬೃಹತ್‌ ಪ್ರತಿಭಟನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಖಂಡಿಸಿ ಅಮೆರಿಕದ ಶ್ವೇತಭವನದ ಹೊರಗೆ ಫೆಲೆಸ್ತೀನ್ ಪರ ಬೃಹತ್‌ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಇಸ್ರೇಲ್‌ಗೆ ನೆರವು ಸ್ಥಗಿತಗೊಳಿಸುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಶ್ವೇತಭವನದ ಹೊರಗೆ 30,000ಕ್ಕೂ ಅಧಿಕ ಪ್ರತಿಭಟನಾಕಾರರು ಜಮಾಯಿಸಿ  ಇಸ್ರೇಲ್-ಗಾಝಾ ನಡುವಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದು, ಇಸ್ರೇಲ್‌ಗೆ ಜೋ ಬಿಡನ್ ನೇತೃತ್ವದ ಆಡಳಿತದ ಬೆಂಬಲವನ್ನು ವಿರೋಧಿಸಿದ್ದಾರೆ.

ಪ್ರತಿಭಟನೆಯ ಹಲವು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪ್ರತಿಭಟನಾಕಾರರು ಕೆಂಪು ಬಟ್ಟೆಗಳನ್ನು ಧರಿಸಿ, ಗಾಝಾ ಮೇಲಿನ ಆಕ್ರಮಣವನ್ನು ನಿಲ್ಲಿಸಿ, ಫ್ರೀ ಪ್ಯಾಲೆಸ್ತೀನ್‌, ಇಸ್ರೇಲ್‌ಗೆ ಯುಎಸ್ ಮಿಲಿಟರಿ ಧನಸಹಾಯವನ್ನು ಕೊನೆಗೊಳಿಸಿ ಎಂದು ಬರೆದಿರುವ ಸಂದೇಶ ಫಲಕಗಳನ್ನು ಹಿಡಿದಿದ್ದರು.

ಕೆಲವು ಪ್ರತಿಭಟನಾಕಾರರು ಶ್ವೇತಭವನದ ಸುತ್ತಲೂ ಸಾಲಾಗಿ ನಿಂತುಕೊಂಡು ಎರಡು ಮೈಲಿ ಉದ್ದದ ಕೆಂಪು ಬಣ್ಣದ ಬ್ಯಾನರ್‌ ಹಿಡಿದುಕೊಂಡಿದ್ದಾರೆ. ಇದು ಇಸ್ರೇಲ್‌ ರಫಾ ಮೇಲೆ ಆಕ್ರಮಣ ನಡೆಸುವ ಮೂಲಕ ‘ಕೆಂಪು ಗೆರೆ’ಯನ್ನು ದಾಟಿದೆ ಎಂಬುವುದನ್ನು ಬಿಂಬಿಸುತ್ತದೆ. ಸಾಮಾಜಿಕ ಮಾಧ್ಯಮದಲ್ಲಿನ ಕೆಲವು ವೀಡಿಯೊಗಳು ಕೆಲವು ಪ್ರತಿಭಟನಾಕಾರರು  ಶ್ವೇತಭವನದ ಗೇಟ್‌ಗಳ ಹೊರಗೆ ಹೊಗೆಯ ಜ್ವಾಲೆಗಳನ್ನು ಬಿಡುವುದನ್ನು ತೋರಿಸಿದೆ.

ಇದುವರೆಗೆ ಯಾವುದೇ ಪ್ರತಿಭಟನಾಕಾರರನ್ನು ಬಂಧಿಸಿಲ್ಲ. ಶ್ವೇತಭವನಕ್ಕೆ ನೇರವಾಗಿ ಹೋಗುವ ಮಾರ್ಗದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯು ಮುಖ್ಯವಾಗಿ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ ಎಂದು ವಾಷಿಂಗ್ಟನ್ ಡಿಸಿ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ತಿಳಿಸಿದೆ. ಪ್ರತಿಭಟನೆಯ ವೇಳೆ ಜೋ ಬಿಡೆನ್ ಮತ್ತು ಅವರ ಪತ್ನಿ ಶ್ವೇತ ಭವನದಲ್ಲಿರಲಿಲ್ಲ. ಅವರು ಪ್ರಾನ್ಸ್‌ ಪ್ರವಾಸದಲ್ಲಿದ್ದರು.

ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಝಾದ ಮೇಲೆ ವಾಯು ಮತ್ತು ಭೂ ಮಾರ್ಗದಲ್ಲಿ ದಾಳಿಯನ್ನು ಪ್ರಾರಂಭಿಸಿದ ಬಳಿಕೆ ಗಾಝಾದಲ್ಲಿ 15,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಕನಿಷ್ಠ 36,700 ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಗಾಝಾದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ರಫಾವನ್ನು ಗಾಝಾದಲ್ಲಿನ ಪ್ಯಾಲೆಸ್ತೀನ್‌ ನಾಗರಿಕರ ಕೊನೆಯ ಆಶ್ರಯವೆಂದು ಪರಿಗಣಿಸಲಾಗಿತ್ತು. ಆದರೆ ರಾಫಾದಲ್ಲಿನ ಶಿಬಿರಗಳ ಮೇಲೆ ಕೂಡ ಇಸ್ರೇಲ್‌ ದಾಳಿ ನಡೆಸಿ ನಾಗರಿಕರ ಹತ್ಯಾಕಾಂಡವನ್ನು ನಡೆಸಿದೆ.

ಇದನ್ನು ಓದಿ: ಸಂಸದ ಅನ್ವರುಲ್ ಅಝೀಂ ಹತ್ಯೆ ಪ್ರಕರಣ: ಕಾಲುವೆಯೊಂದರ ಬಳಿ ಮೂಳೆಗಳನ್ನು ಪತ್ತೆ ಹಚ್ಚಿದ ತನಿಖಾಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...