Homeಚಳವಳಿಪ್ರತಿರೋಧದ ಗತಿ-ಇಂದಿನ ಸ್ಥಿತಿ ಐದು ಅಂಶಗಳು : ಕೆ.ಫಣಿರಾಜ್

ಪ್ರತಿರೋಧದ ಗತಿ-ಇಂದಿನ ಸ್ಥಿತಿ ಐದು ಅಂಶಗಳು : ಕೆ.ಫಣಿರಾಜ್

- Advertisement -
- Advertisement -

ಬಳ್ಳಾರಿಯ ಫಣಿರಾಜ್ ಅವರ ಕರ್ಮಭೂಮಿ ಉಡುಪಿ. ಇಂಜಿನಿಯರಿಂಗ್ ಪ್ರಾಧ್ಯಾಪಕರಾಗಿದ್ದು, ಕನ್ನಡದ ಮುಖ್ಯ ಚಿಂತಕರಲ್ಲೊಬ್ಬರಾದ ಅವರು ಮೂಲತಃ ಒಬ್ಬ ಆಕ್ಟಿವಿಸ್ಟ್. ಪ್ರತಿನಿತ್ಯ ಅವರು ಚಿಂತಿಸುವುದು ಸಮಾಜ ಬದಲಾವಣೆ, ಸಿನೆಮಾ ಮತ್ತು ಕರಾವಳಿಯ ನಿತ್ಯದ ಸಮಸ್ಯೆಗಳ ಕುರಿತು. ಎಡಪಂಥೀಯರಾಗಿದ್ದೂ ಭಿನ್ನಮತ ಕಾಪಾಡಿಕೊಂಡು, ಅಂಬೇಡ್ಕರ್, ಗಾಂಧಿ, ಗ್ರಾಮ್ಶಿ ಎಲ್ಲರ ಜೊತೆ ಸಾವಯವ ಸಹವಾಸ ಇಟ್ಟುಕೊಂಡಿದ್ದಾರೆ.

* ಸ್ವತಃ ಪ್ರಖ್ಯಾತ ಭಾಷಾ ಶಾಸ್ತ್ರಜ್ಞರಾಗಿದ್ದೂ, ತನ್ನ ಶಾಸ್ತ್ರೀಯ ವೃತ್ತಿಯಾಚೆಗಿನ ಪ್ರಾಪಂಚಿಕ ಆಗುಹೋಗುಗಳಿಗೆ ತೆರೆದುಕೊಂಡು, ತಾನು ವಾಸಿಸುತ್ತಿರುವ ದೇಶದ ಪ್ರಭುತ್ವ ನೀತಿಗಳನ್ನು ಕಟುವಾಗಿ ವಿಮರ್ಶಿಸುತ್ತಿರುವವರು ನೋಮ್ ಚಾಮ್‍ಸ್ಕಿ. ಅವರು, ಎಲ್ಲ ಮನುಷ್ಯರಿಗೂ ಬೌದ್ಧಿಕ ಜ್ಞಾನವಿರುತ್ತದೆ ಎಂಬ ಸಹಜ ನೆಲೆಯಲ್ಲಿ, ‘ಬುದ್ಧಿಜೀವಿ’ಗಳು ಎಂದರೆ, ಇಂದಿನ ಅಸಮಾನ ಜ್ಞಾನ ಸಮಾಜದಲ್ಲಿ, ಅಧಿಕಾರದ ಆಗುಹೋಗುಗಳ ಬಗ್ಗೆ ಖಚಿತವಾದ ಮಾಹಿತಿ ಸಂಪನ್ಮೂಲವನ್ನು ಪಡೆಯುವ ಸವಲತ್ತು ಇರುವ ಒಂದು ಸಾಮಾಜಿಕ ವರ್ಗವೆಂದು ವಿವರಿಸುತ್ತಾರೆ. ಮತ್ತೂ, ಬುದ್ಧಿಜೀವಿ ವರ್ಗದ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಹೀಗೆ ಹೇಳುತ್ತಾರೆ: ಅಧಿಕಾರ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಖಚಿತವಾದ ವಿವರಗಳನ್ನು, ಪ್ರತಿರೋಧಿಸಲು ಸಾಧ್ಯವಿರುವ (ಹಾಗು ವಿವರಗಳನ್ನು ಪಡೆಯಲಾರದ ಸ್ಥಿತಿಯಲ್ಲಿರುವ) ಸಾಮಾನ್ಯ ಜನರಿಗೆ ತಲುಪಿಸುವುದು.

* ದೇಶದ ಸಮಚಿತ್ತದ ಬೌದ್ಧಿಕರಲ್ಲಿ ಒಬ್ಬರಾಗಿರುವ ಅಶೋಕ್ ವಾಜಪೇಯಿಯವರು, 2017ರಲ್ಲಿ, ‘ಇಂಡಿಯ ಡಿಸೆಂಟ್ಸ್: ಥ್ರೀ ಥೌಸೆಂಡ್ ಯಿಯರ್ಸ ಆಫ್ ಡಿಫೆರೆನ್ಸ್, ಡೌಟ್ ಅಂಡ್ ಅರ್ಗ್ಯುಮೆಂಟ್ಸ್’ (ಭಾರತದಲ್ಲಿ ಭಿನ್ನಮತ: ಮೂರು ಸಾವಿರ ವರ್ಷಗಳ ವಿರೋಧ, ಅನುಮಾನ ಹಾಗು ವಾಗ್ವಾದ) ಎಂಬ ಪುಸ್ತಕವನ್ನು ಸಂಪಾದಿಸಿದ್ದಾರೆ. ಅದರಲ್ಲಿ ಅವರು, ಅತಿ ಪ್ರಾಚೀನ ಗ್ರಂಥವಾದ ಋಗ್ವೇದದ ಅನುಮಾನಸಹಿತವಾದ ಸೂತ್ರಗಳಿಂದ ಹಿಡಿದು, ಬುದ್ಧ, ಸುಭಾಷಿತ, ಸಾಂಖ್ಯ ದರ್ಶನ, ಚಾರ್ವಾಕ ದರ್ಶನ, ವಚನ, ಸೂಫಿ ಚಿಂತನೆ, ಭಕ್ತಿ ಸಾಹಿತ್ಯಗಳಿಂದ ಹಿಡಿದು ಫುಲೆ ದಂಪತಿಗಳು, ಗಾಂಧಿ, ಅಂಬೇಡ್ಕರ್, ನಾರಾಯಣ ಗುರು, ಪೆರಿಯಾರ್, ಲೋಹಿಯ, ಜೇಪಿ, ದಲಿತ ಸಾಹಿತ್ಯ, ನಕ್ಸಲ್ ಚಳವಳಿಯಿಂದ ಪ್ರೇರಿತವಾದ ಸಾಹಿತ್ಯ ಹಾಗು ರವೀಶ್‍ಕುಮಾರರ ಚಿಂತನೆಗಳವರೆಗಿನ ಸುದೀರ್ಘವಾದ ಭಿನ್ನಮತ ಪರಂಪರೆ ಭಾರತಕ್ಕಿದೆ ಎಂದು ತಿಳಿಸಬಯಸುತ್ತಾರೆ. ಭಿನ್ನಮತವೆಂದರೆ ‘ದೇಶದ್ರೋಹ’ವೆನ್ನುವಂತೆ ಜನಜನಿತಗೊಳಿಸುವ ಕಾಲದಲ್ಲಿ ಅಶೋಕ್ ವಾಜಪೇಯಿಯವರು ಸಕಾಲಿಕವಾಗಿ ಈ ಗ್ರಂಥ ಪ್ರಕಟಿಸಿರುವರು- ಆ ಮೂಲಕ ಭಿನ್ನಮತದ ಮಹತ್ವವನ್ನು ಗಟ್ಟಿಯಾಗಿ ಹೇಳಲು ಬಯಸಿರುವರು.

* ಬ್ರಿಟಿಷ್ ವಸಾಹತುಶಾಹಿಯ ಕಾಲದಲ್ಲಿ, ಬೌದ್ಧಿಕ ಕೆಲಸಗಳನ್ನು ಮಾತ್ರ ನಿರ್ವಹಿಸುವ ಉದ್ಯೋಗಗಳಲ್ಲಿ ನಿರತವಾದ ‘ಮಧ್ಯಮ ವರ್ಗ’ವು ರೂಪ ತಾಳಿತು. ಬ್ರಿಟಿಷರು ತಮ್ಮ ಆಡಳಿತ ವ್ಯವಸ್ಥೆಯ ಸಕ್ಷಮತೆಗೆ ಪೂರಕವಾದ ಮಾನವ ಸಂಪನ್ಮೂಲ ಸೃಷ್ಟಿಗೆ ಸಹಕಾರಿಯಾಗುವಂತೆ, ಆಧುನಿಕ ಶಿಕ್ಷಣ-ಉದ್ಯೋಗ ವ್ಯವಸ್ಥೆಯನ್ನು ನಿರ್ಮಿಸಿದರು; ಆದರೂ ಈ ಮಧ್ಯಮ ವರ್ಗದ ನಡುವಿಂದಲೇ, ವಸಾಹತುಶಾಹಿ ಆಡಳಿತವನ್ನು ಪ್ರತಿರೋಧಿಸುವ ಬೌದ್ಧಿಕತೆ ಹುಟ್ಟಿಕೊಂಡಿತು. ಬೌದ್ಧಿಕ ಸಂಪನ್ಮೂಲ ಉಳ್ಳ ವಕೀಲರು, ಶಿಕ್ಷಕರು, ವಿಜ್ಞಾನಿಗಳು, ವೈದ್ಯರು ಹಾಗು ಭೂಮಾಲಿಕರು-ವ್ಯಾಪಾರಸ್ಥ ವರ್ಗಗಳ ಮಂದಿ ಹೀಗೆ ವಿದ್ಯೆ ಪಡೆದುಕೊಂಡರು. ಈ ಮಧ್ಯಮ ವರ್ಗಗಳಿಂದ ಹುಟ್ಟಿಬಂದ ಚಿಂತಕರು ವಸಾಹತುಶಾಹಿ ವಿರೋಧಿ ಹೋರಾಟದ ಚಿಂತನೆಗಳ ಬೆನ್ನೆಲುಬಾಗಿತ್ತು. ಈ ಬಗೆಯ ಚಟುವಟಿಕೆಗಳ ನಿಯಂತ್ರಣಕ್ಕೆ ಜಾರಿ ಮಾಡಲಾದ ‘ಶಿಕ್ಷಾರ್ಹ ಅಪರಾಧ’ಗಳ ಕಠಿಣ ಕಾನೂನುಗಳು ಹಾಗು ಅದೇ ನಮೂನೆಯ ಹೊಸ ಶಿಕ್ಷೆ ಸಂಹಿತೆಗಳೂ, ಸ್ವಾತಂತ್ರೋತ್ತರ ಯುಗದಲ್ಲಿ ಈ ನಮೂನೆಯ ಬೌದ್ಧಿಕ ಅಭಿವ್ಯಕ್ತಿಗೆ ಕಡಿವಾಣಕ್ಕೆ ಜಾರಿಯಾಗಿವೆ!

* ಎರಡನೇ ಮಹಾಯುದ್ಧೋತ್ತರ ಕಾಲದಲ್ಲಿ, ಅಂದಿನ ಸಂಪತ್ತು ಉತ್ಪಾದನೆಯ ಆಧುನಿಕ ಉತ್ಪಾದನಾ ವ್ಯವಸ್ಥೆ ಧ್ವಂಸವಾಗಿ ಹೋಗಿತ್ತು. ಸಮಾಜದ ಸಕಲ ಸಂಪನ್ಮೂಲಗಳನ್ನು ಬಳಸಿಕೊಂಡು ದೇಶಗಳು ತಮ್ಮ ಸ್ವಾಯತ್ತತೆ ಕಾಪಾಡಿಕೊಳ್ಳಬೇಕಾಗಿದ್ದ ಆ ಹೊತ್ತಲ್ಲಿ ಆಚರಣೆಗೆ ಬಂದ ‘ಕಲ್ಯಾಣ ರಾಜ್ಯ ಪ್ರಜಾಪ್ರಭುತ್ವ’ಕ್ಕೆ ಬೆನ್ನೆಲುಬಾಗಿದ್ದವರೂ ವಿಜ್ಞಾನ-ತಂತ್ರಜ್ಞಾನ-ಸಮಾಜಶಾಸ್ತ್ರ-ಮಾನವೀಕ ಶಾಸ್ತ್ರಗಳ ಬೌದ್ಧಿಕ ಮಧ್ಯಮ ವರ್ಗದವರು. ಈ ನಮೂನೆಯ ಪ್ರಭುತ್ವದ ಟೀಕಾಕಾರರಾಗಿದ್ದು, ಇದು ಉಳ್ಳವರಿಗೆ ಅನುಕೂಲವಾದ ಪ್ರಭುತ್ವ ವ್ಯವಸ್ಥೆಯಾಗಿದೆ ಎಂದು ಭಿನ್ನಮತ ಪ್ರಕಟಿಸಿದವರೂ, ಅದನ್ನು ಜನಜಾಗೃತಿ ಚಳವಳಿಯಾಗಿ ರೂಪಿಸುವಲ್ಲಿ ಬೌದ್ಧಿಕ ಪಾತ್ರ ವಹಿಸಿದವರೂ ಕಲ್ಯಾಣ ಪ್ರಭುತ್ವದ ಭಿನ್ನಮತೀಯ ಮಧ್ಯಮ ವರ್ಗದವರೇ ಆಗಿದ್ದಾರೆ.

* ಕಲ್ಯಾಣ ರಾಜ್ಯ ಪ್ರಜಾಪ್ರಭುತ್ವದ ಮಾದರಿಯ ಗುರಾಣಿಯನ್ನು ಇಟ್ಟುಕೊಂಡೇ, 1980-90ರ ಆರ್ಥಿಕ ಉದಾರೀಕರಣ ಹಾಗು ಬಂಡವಾಳಶಾಹಿಯ ಜಾಗತಿಕ ವಿಸ್ತರಣೆಯ ಯೋಜನೆ ಜಾರಿಗೆ ಬಂದಿತು. ಅದಕ್ಕೆ ತಕ್ಷಣಕ್ಕೆ ಬರಬಹುದಾದ ತೀಕ್ಷ್ಣ ಪ್ರತಿರೋಧಗಳನ್ನು ನಿರೀಕ್ಷಿಸಿಯೇ ಮಾಹಿತಿ ತಂತ್ರಜ್ಞಾನದ ಮೂಲಕ ಸಹಮತಿ ಉತ್ಪಾದನೆಯ ಉದ್ಯಮವೂ ಜಾರಿಗೆ ಬಂದಿತು. ಈ ಯುಗದಲ್ಲಿ ಹಳೆಯ ಭಿನ್ನಮತೀಯ ಬೌದ್ಧಿಕ ಮಧ್ಯಮ ವರ್ಗ ಹಾಗು ಜನಸಾಮಾನ್ಯರ ನಡುವೆ ಮಾಹಿತಿ ತಂತ್ರಜ್ಞಾನವು ಒಂದು ಜ್ಞಾನ ಸಂವಹನೆಯ ಕಂದರವನ್ನು ನಿರ್ಮಿಸಿ ಹಾಕಿತು. ಇದೀಗ, 1980ರ ಪೂರ್ವದ ಭಿನ್ನಮತೀಯ ಬೌದ್ಧಿಕ ಮಧ್ಯಮವರ್ಗವು ತನ್ನ ಬೌದ್ಧಿಕ ಜವಾಬ್ದಾರಿಯನ್ನು ನಿರ್ವಹಿಸುವುದಕ್ಕೆ ಉಳಿದ ಎರಡೇ ದಾರಿ: ಸಮಾಜಾಧಿಕಾರ. ಪ್ರಭುತ್ವ ವಿರೋಧಿ ಜನ ಚಳವಳಿಗಳಿಗೆ ಅಧಿಕಾರದ ಕಪಟ ತೋರುವ ಬೌದ್ಧಿಕ ಜ್ಞಾನವಾಹಿನಿಯಾಗುವುದು ಹಾಗು ಮಾಹಿತಿ ತಂತ್ರಜ್ಞಾನ ಉದ್ಯಮದೊಳಗಿಂದ ಎದ್ದು ಬಂದು ಹೆಚ್ಚೆಚ್ಚು ಜನಸಾಮಾನ್ಯರನ್ನು ತಲುಪುವ ದೇಶಭಾಷಾ ಮಾಹಿತಿ ಪ್ರಸಾರದ ನವ ಭಿನ್ನಮತೀಯ ಬೌದ್ಧಿಕ ವರ್ಗವಾಗುವುದು. ದಾಬೋಲ್ಕರ್, ಪನ್ಸಾರೆ, ಕಲಬುರ್ಗಿ ಮೊದಲ ಮಾದರಿಯಾದರೆ, ಗೌರಿ ಎರಡನೇ ಮಾದರಿಯಾಗಿದ್ದಳು. ಗೌರಿಯ ಬಗೆಯಲ್ಲೆ ಜನಸಾಮಾನ್ಯರನ್ನು ತಲುಪುವ ಸಾಮರ್ಥ್ಯವುಳ್ಳ ಇನ್ನೂ 27 ದೇಶಭಾಷೆಯ ಪತ್ರಕರ್ತರು ಹತ್ಯೆಯಾಗಿದ್ದಾರೆ- ಇದು ಆಕಸ್ಮಿಕವಲ್ಲ. ಇದೀಗ, ಮಾಹಿತಿ ತಂತ್ರಜ್ಞಾನದ ಮೂಲಕ, ಅಧಿಕಾರದ ವರಸೆಗಳನ್ನು ಅರಿಯಬಲ್ಲ ಸಂಪನ್ಮೂಲ ಉಳ್ಳ ಬೌದ್ಧಿಕ ಮಧ್ಯಮ ವರ್ಗವು ವಾಸ್ತವಿಕ ಸತ್ಯವನ್ನು ಮಾಹಿತಿ ಮಾಧ್ಯಮಗಳು ಹಾಗು ವಿರೋಧಿ ಚಳವಳಿಗಳ ಮೂಲಕ ಸಾಮಾನ್ಯರಿಗೆ ತಲುಪಿಸುವ ಯುಗ. ಅಪಾಯಗಳು ಹಳೆಯವು- ಬೌದ್ಧಿಕ ಜವಾಬ್ದಾರಿ ವಿಧಾನ ಹೊಸತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...