Homeಚಳವಳಿಪ್ರತಿರೋಧದ ಗತಿ-ಇಂದಿನ ಸ್ಥಿತಿ ಐದು ಅಂಶಗಳು : ಕೆ.ಫಣಿರಾಜ್

ಪ್ರತಿರೋಧದ ಗತಿ-ಇಂದಿನ ಸ್ಥಿತಿ ಐದು ಅಂಶಗಳು : ಕೆ.ಫಣಿರಾಜ್

- Advertisement -
- Advertisement -

ಬಳ್ಳಾರಿಯ ಫಣಿರಾಜ್ ಅವರ ಕರ್ಮಭೂಮಿ ಉಡುಪಿ. ಇಂಜಿನಿಯರಿಂಗ್ ಪ್ರಾಧ್ಯಾಪಕರಾಗಿದ್ದು, ಕನ್ನಡದ ಮುಖ್ಯ ಚಿಂತಕರಲ್ಲೊಬ್ಬರಾದ ಅವರು ಮೂಲತಃ ಒಬ್ಬ ಆಕ್ಟಿವಿಸ್ಟ್. ಪ್ರತಿನಿತ್ಯ ಅವರು ಚಿಂತಿಸುವುದು ಸಮಾಜ ಬದಲಾವಣೆ, ಸಿನೆಮಾ ಮತ್ತು ಕರಾವಳಿಯ ನಿತ್ಯದ ಸಮಸ್ಯೆಗಳ ಕುರಿತು. ಎಡಪಂಥೀಯರಾಗಿದ್ದೂ ಭಿನ್ನಮತ ಕಾಪಾಡಿಕೊಂಡು, ಅಂಬೇಡ್ಕರ್, ಗಾಂಧಿ, ಗ್ರಾಮ್ಶಿ ಎಲ್ಲರ ಜೊತೆ ಸಾವಯವ ಸಹವಾಸ ಇಟ್ಟುಕೊಂಡಿದ್ದಾರೆ.

* ಸ್ವತಃ ಪ್ರಖ್ಯಾತ ಭಾಷಾ ಶಾಸ್ತ್ರಜ್ಞರಾಗಿದ್ದೂ, ತನ್ನ ಶಾಸ್ತ್ರೀಯ ವೃತ್ತಿಯಾಚೆಗಿನ ಪ್ರಾಪಂಚಿಕ ಆಗುಹೋಗುಗಳಿಗೆ ತೆರೆದುಕೊಂಡು, ತಾನು ವಾಸಿಸುತ್ತಿರುವ ದೇಶದ ಪ್ರಭುತ್ವ ನೀತಿಗಳನ್ನು ಕಟುವಾಗಿ ವಿಮರ್ಶಿಸುತ್ತಿರುವವರು ನೋಮ್ ಚಾಮ್‍ಸ್ಕಿ. ಅವರು, ಎಲ್ಲ ಮನುಷ್ಯರಿಗೂ ಬೌದ್ಧಿಕ ಜ್ಞಾನವಿರುತ್ತದೆ ಎಂಬ ಸಹಜ ನೆಲೆಯಲ್ಲಿ, ‘ಬುದ್ಧಿಜೀವಿ’ಗಳು ಎಂದರೆ, ಇಂದಿನ ಅಸಮಾನ ಜ್ಞಾನ ಸಮಾಜದಲ್ಲಿ, ಅಧಿಕಾರದ ಆಗುಹೋಗುಗಳ ಬಗ್ಗೆ ಖಚಿತವಾದ ಮಾಹಿತಿ ಸಂಪನ್ಮೂಲವನ್ನು ಪಡೆಯುವ ಸವಲತ್ತು ಇರುವ ಒಂದು ಸಾಮಾಜಿಕ ವರ್ಗವೆಂದು ವಿವರಿಸುತ್ತಾರೆ. ಮತ್ತೂ, ಬುದ್ಧಿಜೀವಿ ವರ್ಗದ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಹೀಗೆ ಹೇಳುತ್ತಾರೆ: ಅಧಿಕಾರ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಖಚಿತವಾದ ವಿವರಗಳನ್ನು, ಪ್ರತಿರೋಧಿಸಲು ಸಾಧ್ಯವಿರುವ (ಹಾಗು ವಿವರಗಳನ್ನು ಪಡೆಯಲಾರದ ಸ್ಥಿತಿಯಲ್ಲಿರುವ) ಸಾಮಾನ್ಯ ಜನರಿಗೆ ತಲುಪಿಸುವುದು.

* ದೇಶದ ಸಮಚಿತ್ತದ ಬೌದ್ಧಿಕರಲ್ಲಿ ಒಬ್ಬರಾಗಿರುವ ಅಶೋಕ್ ವಾಜಪೇಯಿಯವರು, 2017ರಲ್ಲಿ, ‘ಇಂಡಿಯ ಡಿಸೆಂಟ್ಸ್: ಥ್ರೀ ಥೌಸೆಂಡ್ ಯಿಯರ್ಸ ಆಫ್ ಡಿಫೆರೆನ್ಸ್, ಡೌಟ್ ಅಂಡ್ ಅರ್ಗ್ಯುಮೆಂಟ್ಸ್’ (ಭಾರತದಲ್ಲಿ ಭಿನ್ನಮತ: ಮೂರು ಸಾವಿರ ವರ್ಷಗಳ ವಿರೋಧ, ಅನುಮಾನ ಹಾಗು ವಾಗ್ವಾದ) ಎಂಬ ಪುಸ್ತಕವನ್ನು ಸಂಪಾದಿಸಿದ್ದಾರೆ. ಅದರಲ್ಲಿ ಅವರು, ಅತಿ ಪ್ರಾಚೀನ ಗ್ರಂಥವಾದ ಋಗ್ವೇದದ ಅನುಮಾನಸಹಿತವಾದ ಸೂತ್ರಗಳಿಂದ ಹಿಡಿದು, ಬುದ್ಧ, ಸುಭಾಷಿತ, ಸಾಂಖ್ಯ ದರ್ಶನ, ಚಾರ್ವಾಕ ದರ್ಶನ, ವಚನ, ಸೂಫಿ ಚಿಂತನೆ, ಭಕ್ತಿ ಸಾಹಿತ್ಯಗಳಿಂದ ಹಿಡಿದು ಫುಲೆ ದಂಪತಿಗಳು, ಗಾಂಧಿ, ಅಂಬೇಡ್ಕರ್, ನಾರಾಯಣ ಗುರು, ಪೆರಿಯಾರ್, ಲೋಹಿಯ, ಜೇಪಿ, ದಲಿತ ಸಾಹಿತ್ಯ, ನಕ್ಸಲ್ ಚಳವಳಿಯಿಂದ ಪ್ರೇರಿತವಾದ ಸಾಹಿತ್ಯ ಹಾಗು ರವೀಶ್‍ಕುಮಾರರ ಚಿಂತನೆಗಳವರೆಗಿನ ಸುದೀರ್ಘವಾದ ಭಿನ್ನಮತ ಪರಂಪರೆ ಭಾರತಕ್ಕಿದೆ ಎಂದು ತಿಳಿಸಬಯಸುತ್ತಾರೆ. ಭಿನ್ನಮತವೆಂದರೆ ‘ದೇಶದ್ರೋಹ’ವೆನ್ನುವಂತೆ ಜನಜನಿತಗೊಳಿಸುವ ಕಾಲದಲ್ಲಿ ಅಶೋಕ್ ವಾಜಪೇಯಿಯವರು ಸಕಾಲಿಕವಾಗಿ ಈ ಗ್ರಂಥ ಪ್ರಕಟಿಸಿರುವರು- ಆ ಮೂಲಕ ಭಿನ್ನಮತದ ಮಹತ್ವವನ್ನು ಗಟ್ಟಿಯಾಗಿ ಹೇಳಲು ಬಯಸಿರುವರು.

* ಬ್ರಿಟಿಷ್ ವಸಾಹತುಶಾಹಿಯ ಕಾಲದಲ್ಲಿ, ಬೌದ್ಧಿಕ ಕೆಲಸಗಳನ್ನು ಮಾತ್ರ ನಿರ್ವಹಿಸುವ ಉದ್ಯೋಗಗಳಲ್ಲಿ ನಿರತವಾದ ‘ಮಧ್ಯಮ ವರ್ಗ’ವು ರೂಪ ತಾಳಿತು. ಬ್ರಿಟಿಷರು ತಮ್ಮ ಆಡಳಿತ ವ್ಯವಸ್ಥೆಯ ಸಕ್ಷಮತೆಗೆ ಪೂರಕವಾದ ಮಾನವ ಸಂಪನ್ಮೂಲ ಸೃಷ್ಟಿಗೆ ಸಹಕಾರಿಯಾಗುವಂತೆ, ಆಧುನಿಕ ಶಿಕ್ಷಣ-ಉದ್ಯೋಗ ವ್ಯವಸ್ಥೆಯನ್ನು ನಿರ್ಮಿಸಿದರು; ಆದರೂ ಈ ಮಧ್ಯಮ ವರ್ಗದ ನಡುವಿಂದಲೇ, ವಸಾಹತುಶಾಹಿ ಆಡಳಿತವನ್ನು ಪ್ರತಿರೋಧಿಸುವ ಬೌದ್ಧಿಕತೆ ಹುಟ್ಟಿಕೊಂಡಿತು. ಬೌದ್ಧಿಕ ಸಂಪನ್ಮೂಲ ಉಳ್ಳ ವಕೀಲರು, ಶಿಕ್ಷಕರು, ವಿಜ್ಞಾನಿಗಳು, ವೈದ್ಯರು ಹಾಗು ಭೂಮಾಲಿಕರು-ವ್ಯಾಪಾರಸ್ಥ ವರ್ಗಗಳ ಮಂದಿ ಹೀಗೆ ವಿದ್ಯೆ ಪಡೆದುಕೊಂಡರು. ಈ ಮಧ್ಯಮ ವರ್ಗಗಳಿಂದ ಹುಟ್ಟಿಬಂದ ಚಿಂತಕರು ವಸಾಹತುಶಾಹಿ ವಿರೋಧಿ ಹೋರಾಟದ ಚಿಂತನೆಗಳ ಬೆನ್ನೆಲುಬಾಗಿತ್ತು. ಈ ಬಗೆಯ ಚಟುವಟಿಕೆಗಳ ನಿಯಂತ್ರಣಕ್ಕೆ ಜಾರಿ ಮಾಡಲಾದ ‘ಶಿಕ್ಷಾರ್ಹ ಅಪರಾಧ’ಗಳ ಕಠಿಣ ಕಾನೂನುಗಳು ಹಾಗು ಅದೇ ನಮೂನೆಯ ಹೊಸ ಶಿಕ್ಷೆ ಸಂಹಿತೆಗಳೂ, ಸ್ವಾತಂತ್ರೋತ್ತರ ಯುಗದಲ್ಲಿ ಈ ನಮೂನೆಯ ಬೌದ್ಧಿಕ ಅಭಿವ್ಯಕ್ತಿಗೆ ಕಡಿವಾಣಕ್ಕೆ ಜಾರಿಯಾಗಿವೆ!

* ಎರಡನೇ ಮಹಾಯುದ್ಧೋತ್ತರ ಕಾಲದಲ್ಲಿ, ಅಂದಿನ ಸಂಪತ್ತು ಉತ್ಪಾದನೆಯ ಆಧುನಿಕ ಉತ್ಪಾದನಾ ವ್ಯವಸ್ಥೆ ಧ್ವಂಸವಾಗಿ ಹೋಗಿತ್ತು. ಸಮಾಜದ ಸಕಲ ಸಂಪನ್ಮೂಲಗಳನ್ನು ಬಳಸಿಕೊಂಡು ದೇಶಗಳು ತಮ್ಮ ಸ್ವಾಯತ್ತತೆ ಕಾಪಾಡಿಕೊಳ್ಳಬೇಕಾಗಿದ್ದ ಆ ಹೊತ್ತಲ್ಲಿ ಆಚರಣೆಗೆ ಬಂದ ‘ಕಲ್ಯಾಣ ರಾಜ್ಯ ಪ್ರಜಾಪ್ರಭುತ್ವ’ಕ್ಕೆ ಬೆನ್ನೆಲುಬಾಗಿದ್ದವರೂ ವಿಜ್ಞಾನ-ತಂತ್ರಜ್ಞಾನ-ಸಮಾಜಶಾಸ್ತ್ರ-ಮಾನವೀಕ ಶಾಸ್ತ್ರಗಳ ಬೌದ್ಧಿಕ ಮಧ್ಯಮ ವರ್ಗದವರು. ಈ ನಮೂನೆಯ ಪ್ರಭುತ್ವದ ಟೀಕಾಕಾರರಾಗಿದ್ದು, ಇದು ಉಳ್ಳವರಿಗೆ ಅನುಕೂಲವಾದ ಪ್ರಭುತ್ವ ವ್ಯವಸ್ಥೆಯಾಗಿದೆ ಎಂದು ಭಿನ್ನಮತ ಪ್ರಕಟಿಸಿದವರೂ, ಅದನ್ನು ಜನಜಾಗೃತಿ ಚಳವಳಿಯಾಗಿ ರೂಪಿಸುವಲ್ಲಿ ಬೌದ್ಧಿಕ ಪಾತ್ರ ವಹಿಸಿದವರೂ ಕಲ್ಯಾಣ ಪ್ರಭುತ್ವದ ಭಿನ್ನಮತೀಯ ಮಧ್ಯಮ ವರ್ಗದವರೇ ಆಗಿದ್ದಾರೆ.

* ಕಲ್ಯಾಣ ರಾಜ್ಯ ಪ್ರಜಾಪ್ರಭುತ್ವದ ಮಾದರಿಯ ಗುರಾಣಿಯನ್ನು ಇಟ್ಟುಕೊಂಡೇ, 1980-90ರ ಆರ್ಥಿಕ ಉದಾರೀಕರಣ ಹಾಗು ಬಂಡವಾಳಶಾಹಿಯ ಜಾಗತಿಕ ವಿಸ್ತರಣೆಯ ಯೋಜನೆ ಜಾರಿಗೆ ಬಂದಿತು. ಅದಕ್ಕೆ ತಕ್ಷಣಕ್ಕೆ ಬರಬಹುದಾದ ತೀಕ್ಷ್ಣ ಪ್ರತಿರೋಧಗಳನ್ನು ನಿರೀಕ್ಷಿಸಿಯೇ ಮಾಹಿತಿ ತಂತ್ರಜ್ಞಾನದ ಮೂಲಕ ಸಹಮತಿ ಉತ್ಪಾದನೆಯ ಉದ್ಯಮವೂ ಜಾರಿಗೆ ಬಂದಿತು. ಈ ಯುಗದಲ್ಲಿ ಹಳೆಯ ಭಿನ್ನಮತೀಯ ಬೌದ್ಧಿಕ ಮಧ್ಯಮ ವರ್ಗ ಹಾಗು ಜನಸಾಮಾನ್ಯರ ನಡುವೆ ಮಾಹಿತಿ ತಂತ್ರಜ್ಞಾನವು ಒಂದು ಜ್ಞಾನ ಸಂವಹನೆಯ ಕಂದರವನ್ನು ನಿರ್ಮಿಸಿ ಹಾಕಿತು. ಇದೀಗ, 1980ರ ಪೂರ್ವದ ಭಿನ್ನಮತೀಯ ಬೌದ್ಧಿಕ ಮಧ್ಯಮವರ್ಗವು ತನ್ನ ಬೌದ್ಧಿಕ ಜವಾಬ್ದಾರಿಯನ್ನು ನಿರ್ವಹಿಸುವುದಕ್ಕೆ ಉಳಿದ ಎರಡೇ ದಾರಿ: ಸಮಾಜಾಧಿಕಾರ. ಪ್ರಭುತ್ವ ವಿರೋಧಿ ಜನ ಚಳವಳಿಗಳಿಗೆ ಅಧಿಕಾರದ ಕಪಟ ತೋರುವ ಬೌದ್ಧಿಕ ಜ್ಞಾನವಾಹಿನಿಯಾಗುವುದು ಹಾಗು ಮಾಹಿತಿ ತಂತ್ರಜ್ಞಾನ ಉದ್ಯಮದೊಳಗಿಂದ ಎದ್ದು ಬಂದು ಹೆಚ್ಚೆಚ್ಚು ಜನಸಾಮಾನ್ಯರನ್ನು ತಲುಪುವ ದೇಶಭಾಷಾ ಮಾಹಿತಿ ಪ್ರಸಾರದ ನವ ಭಿನ್ನಮತೀಯ ಬೌದ್ಧಿಕ ವರ್ಗವಾಗುವುದು. ದಾಬೋಲ್ಕರ್, ಪನ್ಸಾರೆ, ಕಲಬುರ್ಗಿ ಮೊದಲ ಮಾದರಿಯಾದರೆ, ಗೌರಿ ಎರಡನೇ ಮಾದರಿಯಾಗಿದ್ದಳು. ಗೌರಿಯ ಬಗೆಯಲ್ಲೆ ಜನಸಾಮಾನ್ಯರನ್ನು ತಲುಪುವ ಸಾಮರ್ಥ್ಯವುಳ್ಳ ಇನ್ನೂ 27 ದೇಶಭಾಷೆಯ ಪತ್ರಕರ್ತರು ಹತ್ಯೆಯಾಗಿದ್ದಾರೆ- ಇದು ಆಕಸ್ಮಿಕವಲ್ಲ. ಇದೀಗ, ಮಾಹಿತಿ ತಂತ್ರಜ್ಞಾನದ ಮೂಲಕ, ಅಧಿಕಾರದ ವರಸೆಗಳನ್ನು ಅರಿಯಬಲ್ಲ ಸಂಪನ್ಮೂಲ ಉಳ್ಳ ಬೌದ್ಧಿಕ ಮಧ್ಯಮ ವರ್ಗವು ವಾಸ್ತವಿಕ ಸತ್ಯವನ್ನು ಮಾಹಿತಿ ಮಾಧ್ಯಮಗಳು ಹಾಗು ವಿರೋಧಿ ಚಳವಳಿಗಳ ಮೂಲಕ ಸಾಮಾನ್ಯರಿಗೆ ತಲುಪಿಸುವ ಯುಗ. ಅಪಾಯಗಳು ಹಳೆಯವು- ಬೌದ್ಧಿಕ ಜವಾಬ್ದಾರಿ ವಿಧಾನ ಹೊಸತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...