Homeಚಳವಳಿಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು.

- Advertisement -
- Advertisement -

ಹೆಸರಾಂತ ಶಿಕ್ಷಣ ತಜ್ಞೆ, ದಲಿತರ ಮತ್ತು ಮಹಿಳೆಯರ ಹಕ್ಕುಗಳ ಚಳುವಳಿಗಾರ್ತಿ, ಶಿಕ್ಷಕಿ ಮತ್ತು ಹೋರಾಟಗಾರ್ತಿ – ಶೋಮಾ ಸೇನ್ ಇವೆಲ್ಲವೂ ಹೌದು ಮತ್ತು ಇವೆಲ್ಲವಕ್ಕಿಂತ ದೊಡ್ಡ ವ್ಯಕ್ತಿತ್ವದವರು. ಮುಂಬೈ ನಗರದಲ್ಲಿ ಹುಟ್ಟಿ ಬೆಳೆದ ಶೋಮಾ ಸಮಾಜದ ಆಂಚಿನಲ್ಲಿರುವ ದುರ್ಬಲ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಧೃಡ ನಿರ್ಧಾರದೊಂದಿಗೆ ತನ್ನ ಸಂಗಾತಿ ಮತ್ತು ಮಗಳೊಂದಿಗೆ ನಾಗಪುರಕ್ಕೆ ಹೋಗುತ್ತಾರೆ.

ಹೆಚ್ಚು ಕಡಿಮೆ ಮೂರು ದಶಕಗಳ ಕಾಲ ಶೋಮಾ ಗೌರವಾನ್ವಿತ ಶಿಕ್ಷಣ ತಜ್ಞೆಯಾಗಿದ್ದಾರೆ. ವಾರ್ಧ ವಿಶ್ವವಿದ್ಯಾಲಯದ ಮಹಿಳೆಯರ ವಿಭಾಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೋಮಾ ನಾಗಪುರದ ವಿವಿಧ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದರು. ಬಂಧನಕ್ಕೊಳಗಾದ ಸಮಯದಲ್ಲಿ ಶೋಮಾ ರಾಷ್ಟ್ರಸಂತ್ ತುಕದೋಜಿ ಮಹಾರಾಜ್ ನಾಗಪುರ ವಿಶ್ವವಿದ್ಯಾನಿಲಯದಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಸಾಹತುಶಾಹಿಯ ನಂತರದ ದಿನಗಳ ಕುರಿತು ಮತ್ತು ಮಹಿಳಾ ಅಧ್ಯಯನದ ಕುರಿತು ಹಲವಾರು ಪ್ರಮುಖ ಲೇಖನಗಳನ್ನು ದಶಕಗಳಿಂದ ಶೋಮಾ ಬರೆದಿದ್ದಾರೆ.

 

ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ನಡೆಯುವ ಹಲವು ವಿಧದ ಸ್ತರದ ದೌರ್ಜನ್ಯಗಳ ಕುರಿತಾಗಿ ಸ್ತ್ರೀವಾದಿ ದೃಷ್ಟಿಕೋನಗಳನ್ನು ಶೋಮಾ ತಮ್ಮ ಬರವಣಿಗೆಯಲ್ಲಿ ಚರ್ಚಿಸಿದ್ದಾರೆ. ಮಹಿಳೆಯರ ರಾಜಕೀಯ ಪ್ರತಿಪಾದನೆ-ಸಮರ್ಥನೆಗಳ ಕುರಿತು ಮತ್ತು ಸ್ತ್ರೀಶಕ್ತಿಯ ಬಗ್ಗೆ ಅವರ ಬರಹಗಳು ಬೆಳಕು ಚೆಲ್ಲಿವೆ. ತಮ್ಮ ಬರಹಗಳ ಜೊತೆಗೆ, ಅವರ ಚಳುವಳಿಯ ಕೆಲಸಗಳು ರಾಜಕೀಯ ಮತ್ತು ಸಾಮಾಜಿಕ ಮಾರ್ಪಾಟಿಗೆ ಅಪಾರ ಕೊಡುಗೆ ನೀಡಿದೆ. 1970ರ ಸಮಯದಲ್ಲಿ ಮುಂಬೈಯಲ್ಲಿ ಓದುವ ಸಮಯದಲ್ಲಿ ಅವರು ವಿದ್ಯಾರ್ಥಿ ಪ್ರಗತಿ ಸಂಘಟನೆಯ ಭಾಗವಾಗಿದ್ದರು. 1980ರಲ್ಲಿ ವಿದ್ಯಾರ್ಥಿಗಳ ಪತ್ರಿಕೆಯಾದ ’ಕಲಂ’ನ ಸಂಪಾದಕರಾಗಿದ್ದರು. ಬಟ್ಟೆ ಉದ್ದಿಮೆಯ ಕಾರ್ಮಿಕರ ಮುಷ್ಕರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾಗಪುರಕ್ಕೆ ಹೋದ ನಂತರ ಶೋಮಾ ಪ್ರಜಾಪ್ರಭುತ್ವ ಹಕ್ಕುಗಳ ಕುರಿತಾದ ತಮ್ಮ ಹೋರಾಟವನ್ನು ಮುಂದುವರಿಸಿದರು. ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್ (ಸಿಪಿಡಿಆರ್ – ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಮಿತಿ) ಸಂಘಟನೆಯ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು. ಸಿಪಿಡಿಆರ್ ಸಂಸ್ಥೆಯ ಮೂಲಕ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಜನರನ್ನು ಸಂಘಟಿಸುತ್ತಿದ್ದರು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ (ಸಿಎವಿಒಡಬ್ಲ್ಯು – ಲೈಂಗಿಕ ದೌರ್ಜನ್ಯ ಮತ್ತು ಪ್ರಭುತ್ವ ದಮನದ ವಿರುದ್ಧ ಮಹಿಳೆಯರ ಸಮಿತಿ) ಮತ್ತು ಸ್ತ್ರೀ ಚೇತನ ಸಂಘಟನೆಗಳ ಭಾಗವಾಗಿದ್ದರು. ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ ಸಂಘಟನೆಯನ್ನು ಕಟ್ಟಿ ಬೆಳೆಸಿದರು. ಶೋಮಾ ಕಟ್ಟಿದ ಸಂಘಟನೆಯು ಪ್ರಭುತ್ವದ ಹಿಂಸೆಗೆ ಗುರಿಯಾಗಿದ್ದ ಮಣಿಪುರ ಮತ್ತು ಚತ್ತೀಸ್‌ಗಡದ ಪ್ರದೇಶದಲ್ಲಿ ಸತ್ಯಶೋಧನ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಮಹಿಳಾ ರಾಜಕೀಯ ಖೈದಿಗಳಿಗೆ ಕಾನೂನಾತ್ಮಕ ಸಹಾಯ ಒದಗಿಸಲೂ ಶೋಮಾ ನಿರಂತರವಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮಹಿಳೆಯರ ಪಾತ್ರ ಹೆಸರಿಗಷ್ಟೇ ಅಂತಾಗಬಾರದು, ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ವಾತಾವರಣವಿರಬೇಕು ಎಂದು ಶೋಮಾ ಧೃಡವಾಗಿ ನಂಬಿದ್ದರು. ಬ್ರಾಹ್ಮಣ್ಯ – ಪಿತೃಪ್ರಧಾನ ವ್ಯವಸ್ಥೆಯಿಂದ ದುಪ್ಪಟ್ಟು ಶೋಷಣೆಗೊಳಪಟ್ಟಿರುವ ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡುತ್ತಿದ್ದರು. ಮುಖ್ಯವಾಹಿನಿಯ ಸ್ತ್ರೀವಾದವು ಜಾತಿಯ ಕುರಿತು ಕುರುಡಾಗಿದೆ, ದಲಿತ ಮಹಿಳೆಯರು ಸಮುದಾಯದ ಒಳಗೆ ಮತ್ತು ಹೊರಗೆ ಅನುಭವಿಸುವ ದೌರ್ಜನ್ಯದ ಕುರಿತು ಮೌನವಾಗಿದೆ ಎಂದು ಶೋಮಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಅರವತ್ತು ವರ್ಷದ ಶೋಮಾರನ್ನು ಪುಣೆಯ ಪೋಲೀಸರು ಜೂನ್ 8, 2018ರಲ್ಲಿ ಬಂಧಿಸುತ್ತಾರೆ. ಪ್ರಭುತ್ವವು ಮಾನವ ಹಕ್ಕುಗಳ ರಕ್ಷಣೆಗೆ ಹೋರಾಡುವವರ ವಿರುದ್ಧ ತೆಗೆದುಕೊಂಡ ಹಿಂಸಾತ್ಮಕ ಕ್ರಮಗಳ ಭಾಗವಾಗಿಯೇ ಈ ಬಂಧನವಾಗುತ್ತದೆ. ಜೈಲಿನಲ್ಲಿನ ಭೇಟಿಗಳ ಕುರಿತು ಶೋಮಾರ ಮಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. ಮಗಳಿಗೆ ಬರೆದ ಪತ್ರವೊಂದರಲ್ಲಿ ಶೋಮಾ “ಅವರು ನನ್ನನ್ನು ಬಂಧಿಸಿರಬಹುದು, ಆದರೆ ನನ್ನ ಆಲೋಚನೆಗಳು ಸ್ವತಂತ್ರವಾಗಿವೆ” ಎಂದು ಬರೆಯುತ್ತಾರೆ. ಈ ಸಾಲುಗಳು ಅವರ ಬತ್ತದ ಉತ್ಸಾಹಕ್ಕೆ ಕನ್ನಡಿಯಾಗಿದೆ. ಜೈಲಿನ ಅಧಿಕಾರಿಗಳು ಶೋಮಾರ ವಯಸ್ಸು, ಅವರ ಅಗತ್ಯಗಳು, ಕೀಲು ನೋವಿನ ಕುರಿತು ಅಸೂಕ್ಷ್ಮವಾಗಿ ವರ್ತಿಸಿದರೂ ಶೋಮಾರ ಉತ್ಸಾಹವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು. ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದು ಅದನ್ನು ಬದಲಿಸುವ ಉದ್ದೇಶದಿಂದ ಹೋರಾಡುತ್ತಿದ್ದ ಮಹಿಳೆಯ ದನಿಯನ್ನು ಅಡಗಿಸುವ ಸ್ಪಷ್ಟ ಉದ್ದೇಶ ಪಿತೃಪ್ರಧಾನ ಪ್ರಭುತ್ವಕ್ಕಿರುವುದರಲ್ಲಿ ಅನುಮಾನವಿಲ್ಲ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ. ಆರ್. ಅಶೋಕ್


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....