Homeಚಳವಳಿಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು.

- Advertisement -
- Advertisement -

ಹೆಸರಾಂತ ಶಿಕ್ಷಣ ತಜ್ಞೆ, ದಲಿತರ ಮತ್ತು ಮಹಿಳೆಯರ ಹಕ್ಕುಗಳ ಚಳುವಳಿಗಾರ್ತಿ, ಶಿಕ್ಷಕಿ ಮತ್ತು ಹೋರಾಟಗಾರ್ತಿ – ಶೋಮಾ ಸೇನ್ ಇವೆಲ್ಲವೂ ಹೌದು ಮತ್ತು ಇವೆಲ್ಲವಕ್ಕಿಂತ ದೊಡ್ಡ ವ್ಯಕ್ತಿತ್ವದವರು. ಮುಂಬೈ ನಗರದಲ್ಲಿ ಹುಟ್ಟಿ ಬೆಳೆದ ಶೋಮಾ ಸಮಾಜದ ಆಂಚಿನಲ್ಲಿರುವ ದುರ್ಬಲ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಧೃಡ ನಿರ್ಧಾರದೊಂದಿಗೆ ತನ್ನ ಸಂಗಾತಿ ಮತ್ತು ಮಗಳೊಂದಿಗೆ ನಾಗಪುರಕ್ಕೆ ಹೋಗುತ್ತಾರೆ.

ಹೆಚ್ಚು ಕಡಿಮೆ ಮೂರು ದಶಕಗಳ ಕಾಲ ಶೋಮಾ ಗೌರವಾನ್ವಿತ ಶಿಕ್ಷಣ ತಜ್ಞೆಯಾಗಿದ್ದಾರೆ. ವಾರ್ಧ ವಿಶ್ವವಿದ್ಯಾಲಯದ ಮಹಿಳೆಯರ ವಿಭಾಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೋಮಾ ನಾಗಪುರದ ವಿವಿಧ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದರು. ಬಂಧನಕ್ಕೊಳಗಾದ ಸಮಯದಲ್ಲಿ ಶೋಮಾ ರಾಷ್ಟ್ರಸಂತ್ ತುಕದೋಜಿ ಮಹಾರಾಜ್ ನಾಗಪುರ ವಿಶ್ವವಿದ್ಯಾನಿಲಯದಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಸಾಹತುಶಾಹಿಯ ನಂತರದ ದಿನಗಳ ಕುರಿತು ಮತ್ತು ಮಹಿಳಾ ಅಧ್ಯಯನದ ಕುರಿತು ಹಲವಾರು ಪ್ರಮುಖ ಲೇಖನಗಳನ್ನು ದಶಕಗಳಿಂದ ಶೋಮಾ ಬರೆದಿದ್ದಾರೆ.

 

ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ನಡೆಯುವ ಹಲವು ವಿಧದ ಸ್ತರದ ದೌರ್ಜನ್ಯಗಳ ಕುರಿತಾಗಿ ಸ್ತ್ರೀವಾದಿ ದೃಷ್ಟಿಕೋನಗಳನ್ನು ಶೋಮಾ ತಮ್ಮ ಬರವಣಿಗೆಯಲ್ಲಿ ಚರ್ಚಿಸಿದ್ದಾರೆ. ಮಹಿಳೆಯರ ರಾಜಕೀಯ ಪ್ರತಿಪಾದನೆ-ಸಮರ್ಥನೆಗಳ ಕುರಿತು ಮತ್ತು ಸ್ತ್ರೀಶಕ್ತಿಯ ಬಗ್ಗೆ ಅವರ ಬರಹಗಳು ಬೆಳಕು ಚೆಲ್ಲಿವೆ. ತಮ್ಮ ಬರಹಗಳ ಜೊತೆಗೆ, ಅವರ ಚಳುವಳಿಯ ಕೆಲಸಗಳು ರಾಜಕೀಯ ಮತ್ತು ಸಾಮಾಜಿಕ ಮಾರ್ಪಾಟಿಗೆ ಅಪಾರ ಕೊಡುಗೆ ನೀಡಿದೆ. 1970ರ ಸಮಯದಲ್ಲಿ ಮುಂಬೈಯಲ್ಲಿ ಓದುವ ಸಮಯದಲ್ಲಿ ಅವರು ವಿದ್ಯಾರ್ಥಿ ಪ್ರಗತಿ ಸಂಘಟನೆಯ ಭಾಗವಾಗಿದ್ದರು. 1980ರಲ್ಲಿ ವಿದ್ಯಾರ್ಥಿಗಳ ಪತ್ರಿಕೆಯಾದ ’ಕಲಂ’ನ ಸಂಪಾದಕರಾಗಿದ್ದರು. ಬಟ್ಟೆ ಉದ್ದಿಮೆಯ ಕಾರ್ಮಿಕರ ಮುಷ್ಕರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾಗಪುರಕ್ಕೆ ಹೋದ ನಂತರ ಶೋಮಾ ಪ್ರಜಾಪ್ರಭುತ್ವ ಹಕ್ಕುಗಳ ಕುರಿತಾದ ತಮ್ಮ ಹೋರಾಟವನ್ನು ಮುಂದುವರಿಸಿದರು. ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್ (ಸಿಪಿಡಿಆರ್ – ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಮಿತಿ) ಸಂಘಟನೆಯ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು. ಸಿಪಿಡಿಆರ್ ಸಂಸ್ಥೆಯ ಮೂಲಕ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಜನರನ್ನು ಸಂಘಟಿಸುತ್ತಿದ್ದರು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ (ಸಿಎವಿಒಡಬ್ಲ್ಯು – ಲೈಂಗಿಕ ದೌರ್ಜನ್ಯ ಮತ್ತು ಪ್ರಭುತ್ವ ದಮನದ ವಿರುದ್ಧ ಮಹಿಳೆಯರ ಸಮಿತಿ) ಮತ್ತು ಸ್ತ್ರೀ ಚೇತನ ಸಂಘಟನೆಗಳ ಭಾಗವಾಗಿದ್ದರು. ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ ಸಂಘಟನೆಯನ್ನು ಕಟ್ಟಿ ಬೆಳೆಸಿದರು. ಶೋಮಾ ಕಟ್ಟಿದ ಸಂಘಟನೆಯು ಪ್ರಭುತ್ವದ ಹಿಂಸೆಗೆ ಗುರಿಯಾಗಿದ್ದ ಮಣಿಪುರ ಮತ್ತು ಚತ್ತೀಸ್‌ಗಡದ ಪ್ರದೇಶದಲ್ಲಿ ಸತ್ಯಶೋಧನ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಮಹಿಳಾ ರಾಜಕೀಯ ಖೈದಿಗಳಿಗೆ ಕಾನೂನಾತ್ಮಕ ಸಹಾಯ ಒದಗಿಸಲೂ ಶೋಮಾ ನಿರಂತರವಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮಹಿಳೆಯರ ಪಾತ್ರ ಹೆಸರಿಗಷ್ಟೇ ಅಂತಾಗಬಾರದು, ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ವಾತಾವರಣವಿರಬೇಕು ಎಂದು ಶೋಮಾ ಧೃಡವಾಗಿ ನಂಬಿದ್ದರು. ಬ್ರಾಹ್ಮಣ್ಯ – ಪಿತೃಪ್ರಧಾನ ವ್ಯವಸ್ಥೆಯಿಂದ ದುಪ್ಪಟ್ಟು ಶೋಷಣೆಗೊಳಪಟ್ಟಿರುವ ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡುತ್ತಿದ್ದರು. ಮುಖ್ಯವಾಹಿನಿಯ ಸ್ತ್ರೀವಾದವು ಜಾತಿಯ ಕುರಿತು ಕುರುಡಾಗಿದೆ, ದಲಿತ ಮಹಿಳೆಯರು ಸಮುದಾಯದ ಒಳಗೆ ಮತ್ತು ಹೊರಗೆ ಅನುಭವಿಸುವ ದೌರ್ಜನ್ಯದ ಕುರಿತು ಮೌನವಾಗಿದೆ ಎಂದು ಶೋಮಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಅರವತ್ತು ವರ್ಷದ ಶೋಮಾರನ್ನು ಪುಣೆಯ ಪೋಲೀಸರು ಜೂನ್ 8, 2018ರಲ್ಲಿ ಬಂಧಿಸುತ್ತಾರೆ. ಪ್ರಭುತ್ವವು ಮಾನವ ಹಕ್ಕುಗಳ ರಕ್ಷಣೆಗೆ ಹೋರಾಡುವವರ ವಿರುದ್ಧ ತೆಗೆದುಕೊಂಡ ಹಿಂಸಾತ್ಮಕ ಕ್ರಮಗಳ ಭಾಗವಾಗಿಯೇ ಈ ಬಂಧನವಾಗುತ್ತದೆ. ಜೈಲಿನಲ್ಲಿನ ಭೇಟಿಗಳ ಕುರಿತು ಶೋಮಾರ ಮಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. ಮಗಳಿಗೆ ಬರೆದ ಪತ್ರವೊಂದರಲ್ಲಿ ಶೋಮಾ “ಅವರು ನನ್ನನ್ನು ಬಂಧಿಸಿರಬಹುದು, ಆದರೆ ನನ್ನ ಆಲೋಚನೆಗಳು ಸ್ವತಂತ್ರವಾಗಿವೆ” ಎಂದು ಬರೆಯುತ್ತಾರೆ. ಈ ಸಾಲುಗಳು ಅವರ ಬತ್ತದ ಉತ್ಸಾಹಕ್ಕೆ ಕನ್ನಡಿಯಾಗಿದೆ. ಜೈಲಿನ ಅಧಿಕಾರಿಗಳು ಶೋಮಾರ ವಯಸ್ಸು, ಅವರ ಅಗತ್ಯಗಳು, ಕೀಲು ನೋವಿನ ಕುರಿತು ಅಸೂಕ್ಷ್ಮವಾಗಿ ವರ್ತಿಸಿದರೂ ಶೋಮಾರ ಉತ್ಸಾಹವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು. ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದು ಅದನ್ನು ಬದಲಿಸುವ ಉದ್ದೇಶದಿಂದ ಹೋರಾಡುತ್ತಿದ್ದ ಮಹಿಳೆಯ ದನಿಯನ್ನು ಅಡಗಿಸುವ ಸ್ಪಷ್ಟ ಉದ್ದೇಶ ಪಿತೃಪ್ರಧಾನ ಪ್ರಭುತ್ವಕ್ಕಿರುವುದರಲ್ಲಿ ಅನುಮಾನವಿಲ್ಲ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ. ಆರ್. ಅಶೋಕ್


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...