Homeಚಳವಳಿಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು.

- Advertisement -
- Advertisement -

ಹೆಸರಾಂತ ಶಿಕ್ಷಣ ತಜ್ಞೆ, ದಲಿತರ ಮತ್ತು ಮಹಿಳೆಯರ ಹಕ್ಕುಗಳ ಚಳುವಳಿಗಾರ್ತಿ, ಶಿಕ್ಷಕಿ ಮತ್ತು ಹೋರಾಟಗಾರ್ತಿ – ಶೋಮಾ ಸೇನ್ ಇವೆಲ್ಲವೂ ಹೌದು ಮತ್ತು ಇವೆಲ್ಲವಕ್ಕಿಂತ ದೊಡ್ಡ ವ್ಯಕ್ತಿತ್ವದವರು. ಮುಂಬೈ ನಗರದಲ್ಲಿ ಹುಟ್ಟಿ ಬೆಳೆದ ಶೋಮಾ ಸಮಾಜದ ಆಂಚಿನಲ್ಲಿರುವ ದುರ್ಬಲ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಧೃಡ ನಿರ್ಧಾರದೊಂದಿಗೆ ತನ್ನ ಸಂಗಾತಿ ಮತ್ತು ಮಗಳೊಂದಿಗೆ ನಾಗಪುರಕ್ಕೆ ಹೋಗುತ್ತಾರೆ.

ಹೆಚ್ಚು ಕಡಿಮೆ ಮೂರು ದಶಕಗಳ ಕಾಲ ಶೋಮಾ ಗೌರವಾನ್ವಿತ ಶಿಕ್ಷಣ ತಜ್ಞೆಯಾಗಿದ್ದಾರೆ. ವಾರ್ಧ ವಿಶ್ವವಿದ್ಯಾಲಯದ ಮಹಿಳೆಯರ ವಿಭಾಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೋಮಾ ನಾಗಪುರದ ವಿವಿಧ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದರು. ಬಂಧನಕ್ಕೊಳಗಾದ ಸಮಯದಲ್ಲಿ ಶೋಮಾ ರಾಷ್ಟ್ರಸಂತ್ ತುಕದೋಜಿ ಮಹಾರಾಜ್ ನಾಗಪುರ ವಿಶ್ವವಿದ್ಯಾನಿಲಯದಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಸಾಹತುಶಾಹಿಯ ನಂತರದ ದಿನಗಳ ಕುರಿತು ಮತ್ತು ಮಹಿಳಾ ಅಧ್ಯಯನದ ಕುರಿತು ಹಲವಾರು ಪ್ರಮುಖ ಲೇಖನಗಳನ್ನು ದಶಕಗಳಿಂದ ಶೋಮಾ ಬರೆದಿದ್ದಾರೆ.

 

ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ನಡೆಯುವ ಹಲವು ವಿಧದ ಸ್ತರದ ದೌರ್ಜನ್ಯಗಳ ಕುರಿತಾಗಿ ಸ್ತ್ರೀವಾದಿ ದೃಷ್ಟಿಕೋನಗಳನ್ನು ಶೋಮಾ ತಮ್ಮ ಬರವಣಿಗೆಯಲ್ಲಿ ಚರ್ಚಿಸಿದ್ದಾರೆ. ಮಹಿಳೆಯರ ರಾಜಕೀಯ ಪ್ರತಿಪಾದನೆ-ಸಮರ್ಥನೆಗಳ ಕುರಿತು ಮತ್ತು ಸ್ತ್ರೀಶಕ್ತಿಯ ಬಗ್ಗೆ ಅವರ ಬರಹಗಳು ಬೆಳಕು ಚೆಲ್ಲಿವೆ. ತಮ್ಮ ಬರಹಗಳ ಜೊತೆಗೆ, ಅವರ ಚಳುವಳಿಯ ಕೆಲಸಗಳು ರಾಜಕೀಯ ಮತ್ತು ಸಾಮಾಜಿಕ ಮಾರ್ಪಾಟಿಗೆ ಅಪಾರ ಕೊಡುಗೆ ನೀಡಿದೆ. 1970ರ ಸಮಯದಲ್ಲಿ ಮುಂಬೈಯಲ್ಲಿ ಓದುವ ಸಮಯದಲ್ಲಿ ಅವರು ವಿದ್ಯಾರ್ಥಿ ಪ್ರಗತಿ ಸಂಘಟನೆಯ ಭಾಗವಾಗಿದ್ದರು. 1980ರಲ್ಲಿ ವಿದ್ಯಾರ್ಥಿಗಳ ಪತ್ರಿಕೆಯಾದ ’ಕಲಂ’ನ ಸಂಪಾದಕರಾಗಿದ್ದರು. ಬಟ್ಟೆ ಉದ್ದಿಮೆಯ ಕಾರ್ಮಿಕರ ಮುಷ್ಕರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾಗಪುರಕ್ಕೆ ಹೋದ ನಂತರ ಶೋಮಾ ಪ್ರಜಾಪ್ರಭುತ್ವ ಹಕ್ಕುಗಳ ಕುರಿತಾದ ತಮ್ಮ ಹೋರಾಟವನ್ನು ಮುಂದುವರಿಸಿದರು. ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್ (ಸಿಪಿಡಿಆರ್ – ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಮಿತಿ) ಸಂಘಟನೆಯ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು. ಸಿಪಿಡಿಆರ್ ಸಂಸ್ಥೆಯ ಮೂಲಕ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಜನರನ್ನು ಸಂಘಟಿಸುತ್ತಿದ್ದರು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ (ಸಿಎವಿಒಡಬ್ಲ್ಯು – ಲೈಂಗಿಕ ದೌರ್ಜನ್ಯ ಮತ್ತು ಪ್ರಭುತ್ವ ದಮನದ ವಿರುದ್ಧ ಮಹಿಳೆಯರ ಸಮಿತಿ) ಮತ್ತು ಸ್ತ್ರೀ ಚೇತನ ಸಂಘಟನೆಗಳ ಭಾಗವಾಗಿದ್ದರು. ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ ಸಂಘಟನೆಯನ್ನು ಕಟ್ಟಿ ಬೆಳೆಸಿದರು. ಶೋಮಾ ಕಟ್ಟಿದ ಸಂಘಟನೆಯು ಪ್ರಭುತ್ವದ ಹಿಂಸೆಗೆ ಗುರಿಯಾಗಿದ್ದ ಮಣಿಪುರ ಮತ್ತು ಚತ್ತೀಸ್‌ಗಡದ ಪ್ರದೇಶದಲ್ಲಿ ಸತ್ಯಶೋಧನ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಮಹಿಳಾ ರಾಜಕೀಯ ಖೈದಿಗಳಿಗೆ ಕಾನೂನಾತ್ಮಕ ಸಹಾಯ ಒದಗಿಸಲೂ ಶೋಮಾ ನಿರಂತರವಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮಹಿಳೆಯರ ಪಾತ್ರ ಹೆಸರಿಗಷ್ಟೇ ಅಂತಾಗಬಾರದು, ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ವಾತಾವರಣವಿರಬೇಕು ಎಂದು ಶೋಮಾ ಧೃಡವಾಗಿ ನಂಬಿದ್ದರು. ಬ್ರಾಹ್ಮಣ್ಯ – ಪಿತೃಪ್ರಧಾನ ವ್ಯವಸ್ಥೆಯಿಂದ ದುಪ್ಪಟ್ಟು ಶೋಷಣೆಗೊಳಪಟ್ಟಿರುವ ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡುತ್ತಿದ್ದರು. ಮುಖ್ಯವಾಹಿನಿಯ ಸ್ತ್ರೀವಾದವು ಜಾತಿಯ ಕುರಿತು ಕುರುಡಾಗಿದೆ, ದಲಿತ ಮಹಿಳೆಯರು ಸಮುದಾಯದ ಒಳಗೆ ಮತ್ತು ಹೊರಗೆ ಅನುಭವಿಸುವ ದೌರ್ಜನ್ಯದ ಕುರಿತು ಮೌನವಾಗಿದೆ ಎಂದು ಶೋಮಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಅರವತ್ತು ವರ್ಷದ ಶೋಮಾರನ್ನು ಪುಣೆಯ ಪೋಲೀಸರು ಜೂನ್ 8, 2018ರಲ್ಲಿ ಬಂಧಿಸುತ್ತಾರೆ. ಪ್ರಭುತ್ವವು ಮಾನವ ಹಕ್ಕುಗಳ ರಕ್ಷಣೆಗೆ ಹೋರಾಡುವವರ ವಿರುದ್ಧ ತೆಗೆದುಕೊಂಡ ಹಿಂಸಾತ್ಮಕ ಕ್ರಮಗಳ ಭಾಗವಾಗಿಯೇ ಈ ಬಂಧನವಾಗುತ್ತದೆ. ಜೈಲಿನಲ್ಲಿನ ಭೇಟಿಗಳ ಕುರಿತು ಶೋಮಾರ ಮಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. ಮಗಳಿಗೆ ಬರೆದ ಪತ್ರವೊಂದರಲ್ಲಿ ಶೋಮಾ “ಅವರು ನನ್ನನ್ನು ಬಂಧಿಸಿರಬಹುದು, ಆದರೆ ನನ್ನ ಆಲೋಚನೆಗಳು ಸ್ವತಂತ್ರವಾಗಿವೆ” ಎಂದು ಬರೆಯುತ್ತಾರೆ. ಈ ಸಾಲುಗಳು ಅವರ ಬತ್ತದ ಉತ್ಸಾಹಕ್ಕೆ ಕನ್ನಡಿಯಾಗಿದೆ. ಜೈಲಿನ ಅಧಿಕಾರಿಗಳು ಶೋಮಾರ ವಯಸ್ಸು, ಅವರ ಅಗತ್ಯಗಳು, ಕೀಲು ನೋವಿನ ಕುರಿತು ಅಸೂಕ್ಷ್ಮವಾಗಿ ವರ್ತಿಸಿದರೂ ಶೋಮಾರ ಉತ್ಸಾಹವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು. ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದು ಅದನ್ನು ಬದಲಿಸುವ ಉದ್ದೇಶದಿಂದ ಹೋರಾಡುತ್ತಿದ್ದ ಮಹಿಳೆಯ ದನಿಯನ್ನು ಅಡಗಿಸುವ ಸ್ಪಷ್ಟ ಉದ್ದೇಶ ಪಿತೃಪ್ರಧಾನ ಪ್ರಭುತ್ವಕ್ಕಿರುವುದರಲ್ಲಿ ಅನುಮಾನವಿಲ್ಲ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ. ಆರ್. ಅಶೋಕ್


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...