Homeಚಳವಳಿಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು.

- Advertisement -
- Advertisement -

ಹೆಸರಾಂತ ಶಿಕ್ಷಣ ತಜ್ಞೆ, ದಲಿತರ ಮತ್ತು ಮಹಿಳೆಯರ ಹಕ್ಕುಗಳ ಚಳುವಳಿಗಾರ್ತಿ, ಶಿಕ್ಷಕಿ ಮತ್ತು ಹೋರಾಟಗಾರ್ತಿ – ಶೋಮಾ ಸೇನ್ ಇವೆಲ್ಲವೂ ಹೌದು ಮತ್ತು ಇವೆಲ್ಲವಕ್ಕಿಂತ ದೊಡ್ಡ ವ್ಯಕ್ತಿತ್ವದವರು. ಮುಂಬೈ ನಗರದಲ್ಲಿ ಹುಟ್ಟಿ ಬೆಳೆದ ಶೋಮಾ ಸಮಾಜದ ಆಂಚಿನಲ್ಲಿರುವ ದುರ್ಬಲ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಧೃಡ ನಿರ್ಧಾರದೊಂದಿಗೆ ತನ್ನ ಸಂಗಾತಿ ಮತ್ತು ಮಗಳೊಂದಿಗೆ ನಾಗಪುರಕ್ಕೆ ಹೋಗುತ್ತಾರೆ.

ಹೆಚ್ಚು ಕಡಿಮೆ ಮೂರು ದಶಕಗಳ ಕಾಲ ಶೋಮಾ ಗೌರವಾನ್ವಿತ ಶಿಕ್ಷಣ ತಜ್ಞೆಯಾಗಿದ್ದಾರೆ. ವಾರ್ಧ ವಿಶ್ವವಿದ್ಯಾಲಯದ ಮಹಿಳೆಯರ ವಿಭಾಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೋಮಾ ನಾಗಪುರದ ವಿವಿಧ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದರು. ಬಂಧನಕ್ಕೊಳಗಾದ ಸಮಯದಲ್ಲಿ ಶೋಮಾ ರಾಷ್ಟ್ರಸಂತ್ ತುಕದೋಜಿ ಮಹಾರಾಜ್ ನಾಗಪುರ ವಿಶ್ವವಿದ್ಯಾನಿಲಯದಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಸಾಹತುಶಾಹಿಯ ನಂತರದ ದಿನಗಳ ಕುರಿತು ಮತ್ತು ಮಹಿಳಾ ಅಧ್ಯಯನದ ಕುರಿತು ಹಲವಾರು ಪ್ರಮುಖ ಲೇಖನಗಳನ್ನು ದಶಕಗಳಿಂದ ಶೋಮಾ ಬರೆದಿದ್ದಾರೆ.

 

ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ನಡೆಯುವ ಹಲವು ವಿಧದ ಸ್ತರದ ದೌರ್ಜನ್ಯಗಳ ಕುರಿತಾಗಿ ಸ್ತ್ರೀವಾದಿ ದೃಷ್ಟಿಕೋನಗಳನ್ನು ಶೋಮಾ ತಮ್ಮ ಬರವಣಿಗೆಯಲ್ಲಿ ಚರ್ಚಿಸಿದ್ದಾರೆ. ಮಹಿಳೆಯರ ರಾಜಕೀಯ ಪ್ರತಿಪಾದನೆ-ಸಮರ್ಥನೆಗಳ ಕುರಿತು ಮತ್ತು ಸ್ತ್ರೀಶಕ್ತಿಯ ಬಗ್ಗೆ ಅವರ ಬರಹಗಳು ಬೆಳಕು ಚೆಲ್ಲಿವೆ. ತಮ್ಮ ಬರಹಗಳ ಜೊತೆಗೆ, ಅವರ ಚಳುವಳಿಯ ಕೆಲಸಗಳು ರಾಜಕೀಯ ಮತ್ತು ಸಾಮಾಜಿಕ ಮಾರ್ಪಾಟಿಗೆ ಅಪಾರ ಕೊಡುಗೆ ನೀಡಿದೆ. 1970ರ ಸಮಯದಲ್ಲಿ ಮುಂಬೈಯಲ್ಲಿ ಓದುವ ಸಮಯದಲ್ಲಿ ಅವರು ವಿದ್ಯಾರ್ಥಿ ಪ್ರಗತಿ ಸಂಘಟನೆಯ ಭಾಗವಾಗಿದ್ದರು. 1980ರಲ್ಲಿ ವಿದ್ಯಾರ್ಥಿಗಳ ಪತ್ರಿಕೆಯಾದ ’ಕಲಂ’ನ ಸಂಪಾದಕರಾಗಿದ್ದರು. ಬಟ್ಟೆ ಉದ್ದಿಮೆಯ ಕಾರ್ಮಿಕರ ಮುಷ್ಕರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾಗಪುರಕ್ಕೆ ಹೋದ ನಂತರ ಶೋಮಾ ಪ್ರಜಾಪ್ರಭುತ್ವ ಹಕ್ಕುಗಳ ಕುರಿತಾದ ತಮ್ಮ ಹೋರಾಟವನ್ನು ಮುಂದುವರಿಸಿದರು. ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್ (ಸಿಪಿಡಿಆರ್ – ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಮಿತಿ) ಸಂಘಟನೆಯ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು. ಸಿಪಿಡಿಆರ್ ಸಂಸ್ಥೆಯ ಮೂಲಕ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಜನರನ್ನು ಸಂಘಟಿಸುತ್ತಿದ್ದರು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ (ಸಿಎವಿಒಡಬ್ಲ್ಯು – ಲೈಂಗಿಕ ದೌರ್ಜನ್ಯ ಮತ್ತು ಪ್ರಭುತ್ವ ದಮನದ ವಿರುದ್ಧ ಮಹಿಳೆಯರ ಸಮಿತಿ) ಮತ್ತು ಸ್ತ್ರೀ ಚೇತನ ಸಂಘಟನೆಗಳ ಭಾಗವಾಗಿದ್ದರು. ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ ಸಂಘಟನೆಯನ್ನು ಕಟ್ಟಿ ಬೆಳೆಸಿದರು. ಶೋಮಾ ಕಟ್ಟಿದ ಸಂಘಟನೆಯು ಪ್ರಭುತ್ವದ ಹಿಂಸೆಗೆ ಗುರಿಯಾಗಿದ್ದ ಮಣಿಪುರ ಮತ್ತು ಚತ್ತೀಸ್‌ಗಡದ ಪ್ರದೇಶದಲ್ಲಿ ಸತ್ಯಶೋಧನ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಮಹಿಳಾ ರಾಜಕೀಯ ಖೈದಿಗಳಿಗೆ ಕಾನೂನಾತ್ಮಕ ಸಹಾಯ ಒದಗಿಸಲೂ ಶೋಮಾ ನಿರಂತರವಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮಹಿಳೆಯರ ಪಾತ್ರ ಹೆಸರಿಗಷ್ಟೇ ಅಂತಾಗಬಾರದು, ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ವಾತಾವರಣವಿರಬೇಕು ಎಂದು ಶೋಮಾ ಧೃಡವಾಗಿ ನಂಬಿದ್ದರು. ಬ್ರಾಹ್ಮಣ್ಯ – ಪಿತೃಪ್ರಧಾನ ವ್ಯವಸ್ಥೆಯಿಂದ ದುಪ್ಪಟ್ಟು ಶೋಷಣೆಗೊಳಪಟ್ಟಿರುವ ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡುತ್ತಿದ್ದರು. ಮುಖ್ಯವಾಹಿನಿಯ ಸ್ತ್ರೀವಾದವು ಜಾತಿಯ ಕುರಿತು ಕುರುಡಾಗಿದೆ, ದಲಿತ ಮಹಿಳೆಯರು ಸಮುದಾಯದ ಒಳಗೆ ಮತ್ತು ಹೊರಗೆ ಅನುಭವಿಸುವ ದೌರ್ಜನ್ಯದ ಕುರಿತು ಮೌನವಾಗಿದೆ ಎಂದು ಶೋಮಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಅರವತ್ತು ವರ್ಷದ ಶೋಮಾರನ್ನು ಪುಣೆಯ ಪೋಲೀಸರು ಜೂನ್ 8, 2018ರಲ್ಲಿ ಬಂಧಿಸುತ್ತಾರೆ. ಪ್ರಭುತ್ವವು ಮಾನವ ಹಕ್ಕುಗಳ ರಕ್ಷಣೆಗೆ ಹೋರಾಡುವವರ ವಿರುದ್ಧ ತೆಗೆದುಕೊಂಡ ಹಿಂಸಾತ್ಮಕ ಕ್ರಮಗಳ ಭಾಗವಾಗಿಯೇ ಈ ಬಂಧನವಾಗುತ್ತದೆ. ಜೈಲಿನಲ್ಲಿನ ಭೇಟಿಗಳ ಕುರಿತು ಶೋಮಾರ ಮಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. ಮಗಳಿಗೆ ಬರೆದ ಪತ್ರವೊಂದರಲ್ಲಿ ಶೋಮಾ “ಅವರು ನನ್ನನ್ನು ಬಂಧಿಸಿರಬಹುದು, ಆದರೆ ನನ್ನ ಆಲೋಚನೆಗಳು ಸ್ವತಂತ್ರವಾಗಿವೆ” ಎಂದು ಬರೆಯುತ್ತಾರೆ. ಈ ಸಾಲುಗಳು ಅವರ ಬತ್ತದ ಉತ್ಸಾಹಕ್ಕೆ ಕನ್ನಡಿಯಾಗಿದೆ. ಜೈಲಿನ ಅಧಿಕಾರಿಗಳು ಶೋಮಾರ ವಯಸ್ಸು, ಅವರ ಅಗತ್ಯಗಳು, ಕೀಲು ನೋವಿನ ಕುರಿತು ಅಸೂಕ್ಷ್ಮವಾಗಿ ವರ್ತಿಸಿದರೂ ಶೋಮಾರ ಉತ್ಸಾಹವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು. ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದು ಅದನ್ನು ಬದಲಿಸುವ ಉದ್ದೇಶದಿಂದ ಹೋರಾಡುತ್ತಿದ್ದ ಮಹಿಳೆಯ ದನಿಯನ್ನು ಅಡಗಿಸುವ ಸ್ಪಷ್ಟ ಉದ್ದೇಶ ಪಿತೃಪ್ರಧಾನ ಪ್ರಭುತ್ವಕ್ಕಿರುವುದರಲ್ಲಿ ಅನುಮಾನವಿಲ್ಲ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ. ಆರ್. ಅಶೋಕ್


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....