ಪಠ್ಯಪುಸ್ತಕ ಮರು ಪರಿಶೀಲನ ಸಮಿತಿ ಕಾರ್ಯ ಮುಗಿದಿದ್ದು ಅದನ್ನು ವಿಸರ್ಜನೆ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ” ಎಂದು ತಿಳಿಸಿದ್ದಾರೆ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಅವರು ಶನಿವಾರ ಪ್ರಶ್ನಿಸಿದ್ದಾರೆ.
“ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?” ಎಂದು ಅವರು ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ
“ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.
“ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ?” ಎಂದು ಸ್ಪಷ್ಟಪಡಿಸುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಕೇಳಿದ್ದಾರೆ.
“ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ. ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್ ವೈರಲ್
“ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು” ಎಂದು ಅವರು ಒತ್ತಾಯಿಸಿದ್ದಾರೆ.
“ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಕೇಳಿದ್ದಾರೆ.



ಸಿದ್ದರಾಮಯ್ಯನವರ ಈ ಆಗ್ರಹ ಸರಿಯಾಗಿದೆ.
ವೋಟಿನ ಆಸೆಗಾಗಿ ಅಧಿಕಾರದ ಲಾಲಸೆಗಾಗಿ ಮತಾಂಧರನ್ನು ಮತೀಯರನ್ನು ಬೆಂಬಲಿಸುವವರು ಕಿಡಿಗೇಡಿಗಳು ಭಾರತೀಯತೆಯನ್ನು ಬೆಂಬಲಿಸುವವರು ಕಿಡಿಗೇಡಿಗಳ ಅಲ್ಲ ವಂದನೆಗಳು